AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್​ನಲ್ಲಿ 1 ಲಕ್ಷಕ್ಕೂ ಹೆಚ್ಚು ರಷ್ಯಾ ಯೋಧರ ಸಾವು; ಅಮೆರಿಕ ಸೇನಾಧಿಕಾರಿ ಅಂದಾಜು

ಈ ಲೆಕ್ಕಾಚಾರಂತೆ ಈ ಸಂಘರ್ಷದಿಂದ ಮೃತಪಟ್ಟವರ ಒಟ್ಟು ಸಂಖ್ಯೆಯು ಸುಮಾರು 2.40 ಲಕ್ಷವಾಗುತ್ತದೆ. ಇದು ಈವರೆಗೆ ಬಿಡುಗಡೆಯಾಗಿರುವ ಜೀವಹಾನಿ ಅಂಕಿಅಂಶಗಳಲ್ಲಿಯೇ ಅತ್ಯಂತ ಹೆಚ್ಚು.

Russia Ukraine War: ಉಕ್ರೇನ್​ನಲ್ಲಿ 1 ಲಕ್ಷಕ್ಕೂ ಹೆಚ್ಚು ರಷ್ಯಾ ಯೋಧರ ಸಾವು; ಅಮೆರಿಕ ಸೇನಾಧಿಕಾರಿ ಅಂದಾಜು
ಸಾಂದರ್ಭಿಕ ಚಿತ್ರImage Credit source: AP
TV9 Web
| Edited By: |

Updated on: Nov 10, 2022 | 11:39 AM

Share

ವಾಷಿಂಗ್​ಟನ್: ಉಕ್ರೇನ್ ಮೇಲೆ ದಂಡೆತ್ತಿ ಹೋಗಿರುವ ರಷ್ಯಾ ಸೇನೆಯಲ್ಲಿ (Russia Ukraine War) ಜೀವಹಾನಿ ಆಘಾತಕಾರಿ ಮಟ್ಟಕ್ಕೆ ತಲುಪಿದೆ ಎಂದು ಅಮೆರಿಕ ಸೇನೆಯ (American Military) ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಕಳೆದ ಫೆಬ್ರುವರಿಯಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಈವರೆಗೆ ರಷ್ಯಾ ಸೇನೆಯ ಸುಮಾರು 1 ಲಕ್ಷ ಸೈನಿಕರು ಮೃತಪಟ್ಟಿರಬಹುದು ಎಂದು ಅಂದಾಜಿಸಿದ್ದಾರೆ. ಉಕ್ರೇನ್ ಸೇನೆಯು ಹೆಚ್ಚೂ ಕಡಿಮೆ ಇಷ್ಟೇ ಪ್ರಮಾಣದ ಜೀವಹಾನಿ ಅನುಭವಿಸಿರಬಹುದು ಎಂದು ವಿಶ್ಲೇಷಿಸಲಾಗಿದೆ.

‘ಸುಮಾರು 1 ಲಕ್ಷ ರಷ್ಯಾ ಯೋಧರು ಸತ್ತಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ಉಕ್ರೇನ್ ಪಾಳಯದಲ್ಲಿಯೇ ಇಷ್ಟೇ ನಷ್ಟಗಳಾಗಿವೆ. ಲೆಕ್ಕವಿಲ್ಲದಷ್ಟು ನಾಗರಿಕರು ಕಷ್ಟ-ನಷ್ಟ ಅನುಭವಿಸಿದ್ದಾರೆ ಎಂದು ಅಮೆರಿಕ ಸೇನೆಯ ಜನರಲ್ ಮಾರ್ಕ್ ಮಿಲೆ ನ್ಯೂಯಾರ್ಕ್​ನ ಎಕನಾಮಿಕ್ ಕ್ಲಬ್​ ಸಂವಾದದಲ್ಲಿ ಹೇಳಿದ್ದಾರೆ. ಕಳೆದ 8 ತಿಂಗಳುಗಳಿಂದ ರಷ್ಯಾ-ಉಕ್ರೇನ್ ಸಂಘರ್ಷ ನಡೆಯುತ್ತಿದ್ದು, ಈವರೆಗೆ ಸುಮಾರು 40,000 ಉಕ್ರೇನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು. ಈ ಲೆಕ್ಕಾಚಾರಂತೆ ಈ ಸಂಘರ್ಷದಿಂದ ಮೃತಪಟ್ಟವರ ಒಟ್ಟು ಸಂಖ್ಯೆಯು ಸುಮಾರು 2.40 ಲಕ್ಷವಾಗುತ್ತದೆ. ಇದು ಈವರೆಗೆ ಬಿಡುಗಡೆಯಾಗಿರುವ ಜೀವಹಾನಿ ಅಂಕಿಅಂಶಗಳಲ್ಲಿಯೇ ಅತ್ಯಂತ ಹೆಚ್ಚು.

ಇಷ್ಟು ಜೀವಹಾನಿಯ ನಂತರವೂ ಉಕ್ರೇನ್ ದಾಳಿಯಿಂದ ಏನು ಸಾಧಿಸಬೇಕಿತ್ತೋ ಅದನ್ನು ಸಾಧಿಸಲು ರಷ್ಯಾಕ್ಕೆ ಸಾಧ್ಯವಾಗಿಲ್ಲ. ಇನ್ನೂ ಎಷ್ಟು ದಿನ ಈ ಆಕ್ರಮಣವನ್ನು ಮುಂದುವರಿಸಲು ಸಾಧ್ಯ ಎನ್ನುವ ಬಗ್ಗೆ ಗೊಂದಲಗಳಿವೆ ಎಂದು ಅಮೆರಿಕ ಸೇನಾಧಿಕಾರಿ ಹೇಳಿದ್ದಾರೆ. ನಿನ್ನೆಯಷ್ಟೇ (ನ 9) ರಷ್ಯಾ ಸೇನೆಯು ಉಕ್ರೇನ್​ನ ಪ್ರಮುಖ ನಗರ ಖೆರ್​ಸೋನ್​ನಿಂದ ತನ್ನ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಾಗಿ ಘೋಷಿಸಿತ್ತು. ಇದು ಉಕ್ರೇನ್ ಯುದ್ಧದಲ್ಲಿ ರಷ್ಯಾಕ್ಕೆ ಆದ ದೊಡ್ಡ ಹಿನ್ನಡೆ ಎಂದು ವ್ಯಾಖ್ಯಾನಿಸಲಾಗಿತ್ತು. ಉಕ್ರೇನ್​ ಪಡೆಗಳು ಖಾರ್ಕಿವ್ ಉತ್ತರ ಪ್ರಾಂತ್ಯದಲ್ಲಿ ಮುನ್ನಡೆ ಸಾಧಿಸಿದ ಬಳಿಕ ನಡೆದ ಅತಿಪ್ರಮುಖ ಸೇನಾ ಬೆಳವಣಿಗೆ ಇದು ಎಂದು ವಿಶ್ಲೇಷಿಸಲಾಗಿತ್ತು.

ಕಳೆದ ಸೆಪ್ಟೆಂಬರ್​ನಲ್ಲಿ ರಷ್ಯಾ ಪಡೆಗಳು ಖೆರ್​ಸೊನ್ ನಗರವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದವು. ಈ ಪ್ರದೇಶದಿಂದ ರಷ್ಯಾ ಸಂಪೂರ್ಣವಾಗಿ ಸೇನೆ ಹಿಂಪಡೆದರೆ ಸಾವಿರಾರು ಕಿಲೋಮೀಟರ್​ ವಿಸ್ತೀರ್ಣದ ಪ್ರದೇಶದಿಂದ ರಷ್ಯಾ ಹಿಂದೆ ಸರಿದಂತೆ ಅಗುತ್ತದೆ. ಇದು ಉಕ್ರೇನ್ ಯುದ್ಧದಲ್ಲಿ ನಡೆದ ಪ್ರಮುಖ ಬೆಳವಣಿಗೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು