AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್​ನಲ್ಲಿ 1 ಲಕ್ಷಕ್ಕೂ ಹೆಚ್ಚು ರಷ್ಯಾ ಯೋಧರ ಸಾವು; ಅಮೆರಿಕ ಸೇನಾಧಿಕಾರಿ ಅಂದಾಜು

ಈ ಲೆಕ್ಕಾಚಾರಂತೆ ಈ ಸಂಘರ್ಷದಿಂದ ಮೃತಪಟ್ಟವರ ಒಟ್ಟು ಸಂಖ್ಯೆಯು ಸುಮಾರು 2.40 ಲಕ್ಷವಾಗುತ್ತದೆ. ಇದು ಈವರೆಗೆ ಬಿಡುಗಡೆಯಾಗಿರುವ ಜೀವಹಾನಿ ಅಂಕಿಅಂಶಗಳಲ್ಲಿಯೇ ಅತ್ಯಂತ ಹೆಚ್ಚು.

Russia Ukraine War: ಉಕ್ರೇನ್​ನಲ್ಲಿ 1 ಲಕ್ಷಕ್ಕೂ ಹೆಚ್ಚು ರಷ್ಯಾ ಯೋಧರ ಸಾವು; ಅಮೆರಿಕ ಸೇನಾಧಿಕಾರಿ ಅಂದಾಜು
ಸಾಂದರ್ಭಿಕ ಚಿತ್ರImage Credit source: AP
TV9 Web
| Edited By: |

Updated on: Nov 10, 2022 | 11:39 AM

Share

ವಾಷಿಂಗ್​ಟನ್: ಉಕ್ರೇನ್ ಮೇಲೆ ದಂಡೆತ್ತಿ ಹೋಗಿರುವ ರಷ್ಯಾ ಸೇನೆಯಲ್ಲಿ (Russia Ukraine War) ಜೀವಹಾನಿ ಆಘಾತಕಾರಿ ಮಟ್ಟಕ್ಕೆ ತಲುಪಿದೆ ಎಂದು ಅಮೆರಿಕ ಸೇನೆಯ (American Military) ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಕಳೆದ ಫೆಬ್ರುವರಿಯಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಈವರೆಗೆ ರಷ್ಯಾ ಸೇನೆಯ ಸುಮಾರು 1 ಲಕ್ಷ ಸೈನಿಕರು ಮೃತಪಟ್ಟಿರಬಹುದು ಎಂದು ಅಂದಾಜಿಸಿದ್ದಾರೆ. ಉಕ್ರೇನ್ ಸೇನೆಯು ಹೆಚ್ಚೂ ಕಡಿಮೆ ಇಷ್ಟೇ ಪ್ರಮಾಣದ ಜೀವಹಾನಿ ಅನುಭವಿಸಿರಬಹುದು ಎಂದು ವಿಶ್ಲೇಷಿಸಲಾಗಿದೆ.

‘ಸುಮಾರು 1 ಲಕ್ಷ ರಷ್ಯಾ ಯೋಧರು ಸತ್ತಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ಉಕ್ರೇನ್ ಪಾಳಯದಲ್ಲಿಯೇ ಇಷ್ಟೇ ನಷ್ಟಗಳಾಗಿವೆ. ಲೆಕ್ಕವಿಲ್ಲದಷ್ಟು ನಾಗರಿಕರು ಕಷ್ಟ-ನಷ್ಟ ಅನುಭವಿಸಿದ್ದಾರೆ ಎಂದು ಅಮೆರಿಕ ಸೇನೆಯ ಜನರಲ್ ಮಾರ್ಕ್ ಮಿಲೆ ನ್ಯೂಯಾರ್ಕ್​ನ ಎಕನಾಮಿಕ್ ಕ್ಲಬ್​ ಸಂವಾದದಲ್ಲಿ ಹೇಳಿದ್ದಾರೆ. ಕಳೆದ 8 ತಿಂಗಳುಗಳಿಂದ ರಷ್ಯಾ-ಉಕ್ರೇನ್ ಸಂಘರ್ಷ ನಡೆಯುತ್ತಿದ್ದು, ಈವರೆಗೆ ಸುಮಾರು 40,000 ಉಕ್ರೇನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು. ಈ ಲೆಕ್ಕಾಚಾರಂತೆ ಈ ಸಂಘರ್ಷದಿಂದ ಮೃತಪಟ್ಟವರ ಒಟ್ಟು ಸಂಖ್ಯೆಯು ಸುಮಾರು 2.40 ಲಕ್ಷವಾಗುತ್ತದೆ. ಇದು ಈವರೆಗೆ ಬಿಡುಗಡೆಯಾಗಿರುವ ಜೀವಹಾನಿ ಅಂಕಿಅಂಶಗಳಲ್ಲಿಯೇ ಅತ್ಯಂತ ಹೆಚ್ಚು.

ಇಷ್ಟು ಜೀವಹಾನಿಯ ನಂತರವೂ ಉಕ್ರೇನ್ ದಾಳಿಯಿಂದ ಏನು ಸಾಧಿಸಬೇಕಿತ್ತೋ ಅದನ್ನು ಸಾಧಿಸಲು ರಷ್ಯಾಕ್ಕೆ ಸಾಧ್ಯವಾಗಿಲ್ಲ. ಇನ್ನೂ ಎಷ್ಟು ದಿನ ಈ ಆಕ್ರಮಣವನ್ನು ಮುಂದುವರಿಸಲು ಸಾಧ್ಯ ಎನ್ನುವ ಬಗ್ಗೆ ಗೊಂದಲಗಳಿವೆ ಎಂದು ಅಮೆರಿಕ ಸೇನಾಧಿಕಾರಿ ಹೇಳಿದ್ದಾರೆ. ನಿನ್ನೆಯಷ್ಟೇ (ನ 9) ರಷ್ಯಾ ಸೇನೆಯು ಉಕ್ರೇನ್​ನ ಪ್ರಮುಖ ನಗರ ಖೆರ್​ಸೋನ್​ನಿಂದ ತನ್ನ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಾಗಿ ಘೋಷಿಸಿತ್ತು. ಇದು ಉಕ್ರೇನ್ ಯುದ್ಧದಲ್ಲಿ ರಷ್ಯಾಕ್ಕೆ ಆದ ದೊಡ್ಡ ಹಿನ್ನಡೆ ಎಂದು ವ್ಯಾಖ್ಯಾನಿಸಲಾಗಿತ್ತು. ಉಕ್ರೇನ್​ ಪಡೆಗಳು ಖಾರ್ಕಿವ್ ಉತ್ತರ ಪ್ರಾಂತ್ಯದಲ್ಲಿ ಮುನ್ನಡೆ ಸಾಧಿಸಿದ ಬಳಿಕ ನಡೆದ ಅತಿಪ್ರಮುಖ ಸೇನಾ ಬೆಳವಣಿಗೆ ಇದು ಎಂದು ವಿಶ್ಲೇಷಿಸಲಾಗಿತ್ತು.

ಕಳೆದ ಸೆಪ್ಟೆಂಬರ್​ನಲ್ಲಿ ರಷ್ಯಾ ಪಡೆಗಳು ಖೆರ್​ಸೊನ್ ನಗರವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದವು. ಈ ಪ್ರದೇಶದಿಂದ ರಷ್ಯಾ ಸಂಪೂರ್ಣವಾಗಿ ಸೇನೆ ಹಿಂಪಡೆದರೆ ಸಾವಿರಾರು ಕಿಲೋಮೀಟರ್​ ವಿಸ್ತೀರ್ಣದ ಪ್ರದೇಶದಿಂದ ರಷ್ಯಾ ಹಿಂದೆ ಸರಿದಂತೆ ಅಗುತ್ತದೆ. ಇದು ಉಕ್ರೇನ್ ಯುದ್ಧದಲ್ಲಿ ನಡೆದ ಪ್ರಮುಖ ಬೆಳವಣಿಗೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್