AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಪ್ಪಾ! ಗಲಭೆಕೋರರನ್ನ ಬಂಧಿಸಿದ್ದಕ್ಕೆ 93.9 ಕೋಟಿ ರೂ. ಪರಿಹಾರ ನೀಡಿದ ಪೊಲೀಸರು!

2010ರ G20 ಶೃಂಗ ಸಭೆ ವೇಳೆ ಪ್ರತಿಭಟನೆಕಾರರನ್ನು ಬಂಧಿಸುವಾಗ ನಿರಪರಾಧಿಗಳನ್ನೂ ಸಹ ವಶಕ್ಕೆ ಪಡೆದಿದ್ದಕ್ಕೆ ಪೊಲೀಸರು ಅವರಿಗೆ ಪರಿಹಾರ ಮೊತ್ತ ನೀಡಬೇಕಾಗಿರುವ ಘಟನೆ ಕೆನಡಾದ ಟೊರಾಂಟೊದಲ್ಲಿ ನಡೆದಿದೆ. 2010ರಲ್ಲಿ ಟೊರಾಂಟೊದಲ್ಲಿ ನಡೆದ G20 ಶೃಂಗ ಸಭೆ ವೇಳೆ ಹಲವಾರು ಸ್ಥಳೀಯರು ವಿವಿಧ ವಿಚಾರಗಳನ್ನ ಕುರಿತು ಶೃಂಗ ಸಭೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗುಂಪಿನಿಲ್ಲಿ ಕೆಲವು ಕಿಡಿಗೇಡಿಗಳು ಸಹ ಶಾಮೀಲಾಗಿ ಹಿಂಸಾಚಾರ ಮತ್ತು ಗಲಭೆಗೆ ಪ್ರಚೋದನೆ ನೀಡಿದ್ದರು. ಇದರ ಪರಿಣಾಮ ಉದ್ರಿಕ್ತಗೊಂಡ ಪ್ರತಿಭಟನಾಕಾರರನ್ನ ಹತೋಟಿಗೆ ತರಲು […]

ಯಪ್ಪಾ! ಗಲಭೆಕೋರರನ್ನ ಬಂಧಿಸಿದ್ದಕ್ಕೆ 93.9 ಕೋಟಿ ರೂ. ಪರಿಹಾರ ನೀಡಿದ ಪೊಲೀಸರು!
KUSHAL V
| Edited By: |

Updated on:Aug 20, 2020 | 5:39 PM

Share

2010ರ G20 ಶೃಂಗ ಸಭೆ ವೇಳೆ ಪ್ರತಿಭಟನೆಕಾರರನ್ನು ಬಂಧಿಸುವಾಗ ನಿರಪರಾಧಿಗಳನ್ನೂ ಸಹ ವಶಕ್ಕೆ ಪಡೆದಿದ್ದಕ್ಕೆ ಪೊಲೀಸರು ಅವರಿಗೆ ಪರಿಹಾರ ಮೊತ್ತ ನೀಡಬೇಕಾಗಿರುವ ಘಟನೆ ಕೆನಡಾದ ಟೊರಾಂಟೊದಲ್ಲಿ ನಡೆದಿದೆ.

2010ರಲ್ಲಿ ಟೊರಾಂಟೊದಲ್ಲಿ ನಡೆದ G20 ಶೃಂಗ ಸಭೆ ವೇಳೆ ಹಲವಾರು ಸ್ಥಳೀಯರು ವಿವಿಧ ವಿಚಾರಗಳನ್ನ ಕುರಿತು ಶೃಂಗ ಸಭೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗುಂಪಿನಿಲ್ಲಿ ಕೆಲವು ಕಿಡಿಗೇಡಿಗಳು ಸಹ ಶಾಮೀಲಾಗಿ ಹಿಂಸಾಚಾರ ಮತ್ತು ಗಲಭೆಗೆ ಪ್ರಚೋದನೆ ನೀಡಿದ್ದರು.

ಇದರ ಪರಿಣಾಮ ಉದ್ರಿಕ್ತಗೊಂಡ ಪ್ರತಿಭಟನಾಕಾರರನ್ನ ಹತೋಟಿಗೆ ತರಲು ಟೊರಾಂಟೊ ಪೊಲೀಸರು ನೂರಾರು ಪ್ರತಿಭಟನಾಕಾರರನ್ನು ಬಂಧಿಸಿದ್ದರು. ಈ ವೇಳೆ ಅಲ್ಲೇ ನೆರೆದಿದ್ದ ಸುಮಾರು 1,100 ಸಾರ್ವಜನಿಕರನ್ನು ಸಹ ಗಲಭೆಕೋರರು ಎಂದು ಭಾವಿಸಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನು ಖಂಡಿಸಿ ಕೋರ್ಟ್​ ಮೆಟ್ಟೆಲೇರಿದ್ದ ಕೆಲವು ಬಂಧಿತರು ಪೊಲೀಸರಿಂದ ಪರಿಹಾರಕ್ಕಾಗಿ ಆಗ್ರಹಿಸಿದ್ದರು. ಘಟನೆ ಕುರಿತ ನಡೆಸಲಾದ ತನಿಖೆಯು ಸಹ ಅವರು ನಿರಪರಾಧಿಗಳೆಂದ ವರದಿ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಟೊರಾಂಟೊ ಪೊಲೀಸರು ಅವರನ್ನೆಲ್ಲಾ ಬಂಧಿಸಿದ್ದಕ್ಕೆ ಪರಿಹಾರ ನೀಡಲು ಮುಂದಾಗಿದೆ. ಕೇಸ್​ ಗೆದ್ದ ಸಾರ್ವಜನಿಕರಿಗೆ 93.9 ಕೋಟಿ ರೂಪಾಯಿ ಪರಿಹಾರ ಸಿಗಲಿದ್ದು ಅದರಲ್ಲಿ ಪ್ರತಿಯೊಬ್ಬರಿಗೆ 2.84 ಲಕ್ಷದಿಂದ ಹಿಡಿದು 15 ಲಕ್ಷ ರೂಪಾಯಿವರೆಗೂ ಸಿಗಲಿದೆ.

Published On - 5:38 pm, Thu, 20 August 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ