AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan Arrest: ಇಮ್ರಾನ್ ಖಾನ್ ಬಂಧನ ಸಾಧ್ಯತೆ; ಪಿಟಿಐ ಬೆಂಬಲಿಗರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ ಪೊಲೀಸ್

ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನವನ್ನು ತಡೆಯಲು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನಿವಾಸದ ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ

Imran Khan Arrest: ಇಮ್ರಾನ್ ಖಾನ್ ಬಂಧನ ಸಾಧ್ಯತೆ; ಪಿಟಿಐ ಬೆಂಬಲಿಗರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ ಪೊಲೀಸ್
ಇಮ್ರಾನ್ ಖಾನ್
ರಶ್ಮಿ ಕಲ್ಲಕಟ್ಟ
|

Updated on:Mar 14, 2023 | 8:31 PM

Share

ಲಾಹೋರ್‌ನಲ್ಲಿರುವ ಇಮ್ರಾನ್ ಖಾನ್ (Imran Khan) ಅವರ ಮನೆಯ ಕಾಂಪೌಂಡ್‌ಗೆ ಪೊಲೀಸರು ಮಂಗಳವಾರ ಅಶ್ರುವಾಯು ಪ್ರಯೋಗಿಸಿದ್ದಾರೆ. ತೋಶಖಾನಾ ಪ್ರಕರಣದಲ್ಲಿ (Toshakhana case )ಅವರ ಬಂಧನವನ್ನು ತಡೆಯಲು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನಿವಾಸದ ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ. ಪಾಕಿಸ್ತಾನದ ಪೊಲೀಸರು ಮತ್ತು ಇಮ್ರಾನ್ ಖಾನ್ ಅವರ ಬೆಂಬಲಿಗರು ಮಂಗಳವಾರ ಲಾಹೋರ್‌ನ ಪೂರ್ವ ನಗರದಲ್ಲಿರುವ ಮಾಜಿ ಪ್ರಧಾನಿ  ಮನೆಯ ಹೊರಗೆ ಮುಖಮುಖಿಯಾಗಿದ್ದು ಅವರ ಸಂಭವನೀಯ ಬಂಧನಕ್ಕೆ ಮುಂಚಿತವಾಗಿ ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.

ಪೊಲೀಸರು ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್ ಗಳನ್ನು ಪ್ರಯೋಗಿಸಿದರು. ಮಂಗಳವಾರ ಸಂಜೆ ಖಾನ್ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದು ತಾನು ಜೈಲಿಗೆ ಹೋದರೂ ಸಹ ಪ್ರಧಾನಿ ಶೆಹಬಾಜ್ ಷರೀಫ್ ಅವರ ಆಡಳಿತ ಪಕ್ಷಕ್ಕೆ ಸವಾಲು ಹಾಕುವುದನ್ನು ಮುಂದುವರಿಸಲು ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ನನ್ನನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ. ಇಮ್ರಾನ್ ಖಾನ್ ಜೈಲಿಗೆ ಹೋದರೆ ಜನ ನಿದ್ದೆ ಹೋಗುತ್ತಾರೆ ಎಂದು ಭಾವಿಸುತ್ತಾರೆ. ನೀವು ಅವರನ್ನು ತಪ್ಪು ಎಂದು ಸಾಬೀತುಪಡಿಸಬೇಕು, ಜನರು ಜೀವಂತವಾಗಿದ್ದಾರೆ ಎಂದು ನೀವು ಸಾಬೀತುಪಡಿಸಬೇಕು ಎಂದಿದ್ದಾರೆ ಖಾನ್. ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಕಾರ್ಯಕರ್ತರು ಹಿಂಸಾಚಾರವನ್ನು ಪ್ರಾರಂಭಿಸಿದ್ದು ಇದರಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳಿಗೆ ಗಾಯವಾಗಿದೆ ಎಂದು ಸರ್ಕಾರದ ವಕ್ತಾರ ಅಮೀರ್ ಮಿರ್ ರಾಯಿಟರ್ಸ್​​ಗೆ ತಿಳಿಸಿದ್ದಾರೆ. “ಇಮ್ರಾನ್ ಖಾನ್ ನ್ಯಾಯಾಲಯದಲ್ಲಿ ತನ್ನ ಉಪಸ್ಥಿತಿಯನ್ನು ಖಾತ್ರಿಪಡಿಸಿದರೆ ಒಳ್ಳೆಯದು, ಇಲ್ಲದಿದ್ದರೆ ಕಾನೂನು ಅದರ ರೀತಿಯಲ್ಲಿ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Galwan Clash: ಭಾರತವನ್ನು ಎದುರಿಸಲು ಗುಟ್ಟುಗುಟ್ಟಾಗಿ ಶಸ್ತ್ರಾಸ್ತ್ರಗಳ ಖರೀದಿಯಲ್ಲಿ ತೊಡಗಿದ ಚೀನಾ

ಖಾನ್ ತಮ್ಮ ಬೆಂಬಲಿಗರಿಗೆ ಕಾನೂನಿನ ಪರಮಾಧಿಕಾರಕ್ಕಾಗಿ ನಿಲ್ಲುವಂತೆ ಮತ್ತು ನಿಜವಾದ ಸ್ವಾತಂತ್ರ್ಯಕ್ಕಾಗಿ ಹೋರಾಡುವಂತೆ ಕರೆ ನೀಡಿದರು.

ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಅರೆಸೇನಾ ಪಡೆಗಳನ್ನು ಕರೆಸಿದೆ ಎಂದು ಮಿರ್ ಹೇಳಿದರು.

ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದಾಗ ಖಾನ್ ಅವರ ಹಲವಾರು ಬೆಂಬಲಿಗರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಳೆದ ವಾರವೂ ಇದೇ ರೀತಿಯ ಘರ್ಷಣೆಗಳು ನಡೆದಿದ್ದವು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Tue, 14 March 23

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ