AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಯುಕೆ ಭೇಟಿ; ಲಂಡನ್‌ನಲ್ಲಿ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿ

ಆರ್​ಎಸ್​ಎಸ್​ ಶತಮಾನೋತ್ಸವ ವರ್ಷದ ಅಂಗವಾಗಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಕೈಗೊಂಡಿರುವ ವಿದೇಶಿ ಪ್ರವಾಸದ ಭಾಗವಾಗಿ ಸೆಪ್ಟೆಂಬರ್‌ 2ರಂದು ಯುಕೆಗೆ ಭೇಟಿ ನೀಡಿದ್ದಾರೆ. ಮೋಹನ್ ಭಾಗವತ್ ಅವರ ಇಂಗ್ಲೆಂಡ್ ಭೇಟಿಯ ಬಗ್ಗೆ ಇಂದು ಲಂಡನ್​​ನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಅವರು ಲಂಡನ್​ನ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಯುಕೆ ಭೇಟಿ; ಲಂಡನ್‌ನಲ್ಲಿ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿ
ಲಂಡನ್‌ನಲ್ಲಿ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿ
ಸುಷ್ಮಾ ಚಕ್ರೆ
|

Updated on: Sep 04, 2026 | 4:48 PM

Share

ಲಂಡನ್, ಸೆಪ್ಟೆಂಬರ್ 4: ಆರ್‌ಎಸ್‌ಎಸ್ ಶತಮಾನೋತ್ಸವ ವರ್ಷದ ಆಚರಣೆಗಳ ಜಾಗತಿಕ ಸಂಪರ್ಕ ಅಭಿಯಾನದ ಭಾಗವಾಗಿ, ಆರ್​ಎಸ್​ಎಸ್​ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಇಂದು ಲಂಡನ್‌ನಲ್ಲಿ ಪತ್ರಿಕಾಗೋಷ್ಠಿ ಮತ್ತು ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡರು. ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಅವರ ಯುಕೆ ಪ್ರವಾಸದ ಹಿನ್ನೆಲೆಯಲ್ಲಿ ಸುನಿಲ್ ಅಂಬೇಕರ್ ಲಂಡನ್‌ಗೆ ಆಗಮಿಸಿದ್ದು, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

“ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರ ಯುಕೆ ಪ್ರವಾಸಕ್ಕೆ ಇದು ಸೂಕ್ತ ಸಂದರ್ಭವಾಗಿದೆ. ಅವರು ಈಗಾಗಲೇ ಸೆಪ್ಟೆಂಬರ್ 2ರಂದು ಬ್ರಿಟನ್‌ಗೆ ತಲುಪಿದ್ದಾರೆ. ಅವರ ಈ ಪ್ರವಾಸವು ಸೆಪ್ಟೆಂಬರ್ 7ವರೆಗೆ ನಡೆಯಲಿದೆ. ಈ ಪ್ರವಾಸವನ್ನು ಆರ್‌ಎಸ್‌ಎಸ್‌ನ ಶತಾಬ್ದಿ ವರ್ಷದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಸುನಿಲ್ ಅಂಬೇಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸುವವರು ಹಿಂದೂಗಳೇ ಅಲ್ಲ’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಇಂದಿನ ಜಾಗತಿಕ ಸಂಘರ್ಷಗಳಿಗೆ ಹಾಗೂ ಪರಿಸರ ಸವಾಲುಗಳಿಗೆ ಭಾರತೀಯ ಸಂಸ್ಕೃತಿ ಮತ್ತು ಕುಟುಂಬ ಮೌಲ್ಯಗಳಲ್ಲಿ ಉತ್ತಮ ಪರಿಹಾರಗಳಿವೆ ಎಂದ ಸುನಿಲ್ ಅಂಬೇಕರ್, ಯೋಗ, ಸಾಮಾಜಿಕ ಸಾಮರಸ್ಯ ಮತ್ತು ‘ವಸುಧೈವ ಕುಟುಂಬಕಂ’ ನಿಲುವನ್ನು ವಿಶ್ವ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲು ಆರ್‌ಎಸ್‌ಎಸ್ ಉತ್ಸುಕವಾಗಿದೆ ಎಂದರು. ಹಾಗೇ, ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ಹಾಗೂ ಹಿಂದೂಗಳು ತಾವು ವಾಸಿಸುವ ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ಆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಜೊತೆಗೆ ತಮ್ಮ ಸಾಂಸ್ಕೃತಿಕ ಬೇರುಗಳನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರ ಲಂಡನ್ ಭೇಟಿಯನ್ನು ಜಾಗತಿಕ ನಾಗರಿಕ ಸಂವಾದದ ಭಾಗವಾಗಿ ಬಿಂಬಿಸಲಾಗುತ್ತಿದೆ. ಈ ಪ್ರವಾಸದಲ್ಲಿ ಅವರು ಯುಕೆ ಮೂಲದ ಅನಿವಾಸಿ ಭಾರತೀಯರು, ಚಿಂತಕರು, ನೀತಿ ನಿರೂಪಕರು ಹಾಗೂ ವಿವಿಧ ಸಮುದಾಯಗಳ ನಾಯಕರೊಂದಿಗೆ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ಕುರಿತು ಲಂಡನ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸುನಿಲ್ ಅಂಬೇಕರ್, ಭಾರತೀಯ ಸಂಸ್ಕೃತಿ ಮತ್ತು ಆರ್‌ಎಸ್‌ಎಸ್‌ನ ತತ್ವಶಾಸ್ತ್ರ, ವಿಶ್ವಬಂಧುತ್ವ ಹಾಗೂ ಭಾರತೀಯ ಜೀವನಪದ್ಧತಿಯ ಕುರಿತು ಮುಕ್ತ ಸಂವಾದ ನಡೆಸಲು ಈ ವೇದಿಕೆಯನ್ನು ಬಳಸಿಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ನ್ಯೂಯಾರ್ಕ್​ನಲ್ಲಿ ಆಗಸ್ಟ್ 29ರಂದು ಏಕತಾ ಆಚರಣೆಯಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿ

ಅಮೆರಿಕ ಹಾಗೂ ಕೆನಡಾ ಪ್ರವಾಸಗಳ ನಂತರ ಮೋಹನ್ ಭಾಗವತ್ ಅವರು ಲಂಡನ್​​ಗೆ ಭೇಟಿ ನೀಡಿದ್ದಾರೆ. ಭಾರತದ ಹೊರಗಿನ ಸಮುದಾಯಗಳೊಂದಿಗೆ ಬಾಂಧವ್ಯವನ್ನು ಬಲಪಡಿಸುವುದು ಮತ್ತು ಆರ್‌ಎಸ್‌ಎಸ್ ಬಗ್ಗೆ ಇರುವ ಜಾಗತಿಕ ದೃಷ್ಟಿಕೋನವನ್ನು ಹಂಚಿಕೊಳ್ಳುವುದು ಈ ಅಂತಾರಾಷ್ಟ್ರೀಯ ಭೇಟಿಗಳ ಮುಖ್ಯ ಉದ್ದೇಶವಾಗಿದೆ. ಆರ್‌ಎಸ್‌ಎಸ್ ನಾಯಕರ ಈ ಜಾಗತಿಕ ಮಾತುಕತೆಯು ಲಂಡನ್​​ನಲ್ಲಿರುವ ಭಾರತೀಯ ಸಮುದಾಯ ಮತ್ತು ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ