AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic Syrup: ಭಾರತದ 7 ಸಿರಪ್​ಗಳ ಕುರಿತು ತ್ವರಿತ ತನಿಖೆ ಆರಂಭಿಸಿದ ವಿಶ್ವ ಆರೋಗ್ಯ ಸಂಸ್ಥೆ

ವಿಶ್ವ ಆರೋಗ್ಯ ಸಂಸ್ಥೆಯು ಭಾರತ ನಿರ್ಮಿತ 7 ಸಿರಪ್​ಗಳ ಕುರಿತು ತನಿಖೆ ಆರಂಭಿಸಿದೆ. ಗ್ಯಾಂಬಿಯಾದಲ್ಲಿ ಭಾರತ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ 66 ಮಕ್ಕಳು ಸಾವನ್ನಪ್ಪಿರುವ ಕುರಿತಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ.

Toxic Syrup: ಭಾರತದ 7 ಸಿರಪ್​ಗಳ ಕುರಿತು ತ್ವರಿತ ತನಿಖೆ ಆರಂಭಿಸಿದ ವಿಶ್ವ ಆರೋಗ್ಯ ಸಂಸ್ಥೆ
ಸಿರಪ್​Image Credit source: NDTV
Follow us
ನಯನಾ ರಾಜೀವ್
|

Updated on:Jun 20, 2023 | 11:18 AM

ವಿಶ್ವ ಆರೋಗ್ಯ ಸಂಸ್ಥೆಯು ಭಾರತ ನಿರ್ಮಿತ 7 ಸಿರಪ್​ಗಳ ಕುರಿತು ತನಿಖೆ ಆರಂಭಿಸಿದೆ. ಗ್ಯಾಂಬಿಯಾದಲ್ಲಿ ಭಾರತ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ 66 ಮಕ್ಕಳು ಸಾವನ್ನಪ್ಪಿರುವ ಕುರಿತಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಜಾಗತಿಕವಾಗಿ 300 ಕ್ಕೂ ಹೆಚ್ಚು ಸಾವುಗಳಿಗೆ ಸಂಬಂಧಿಸಿದ ವಿಷಪೂರಿತ ಔಷಧಗಳು ಮತ್ತು ಸಿರಪ್‌ಗಳ ತನಿಖೆಯ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಇಂದು ಏಳು ಭಾರತ ನಿರ್ಮಿತ ಸಿರಪ್‌ಗಳನ್ನು ಮುಖ್ಯವಾಗಿ ತನಿಖೆ ಮಾಡಬೇಕೆಂದು ಕೇಳಿದೆ.

ಭಾರತ ಮತ್ತು ಇಂಡೋನೇಷ್ಯಾದಿಂದ ತಯಾರಿಸಿದ 20 ಸಿರಪ್‌ಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಗುರುತಿಸಿದೆ. ಈ ಔಷಧಿಗಳಲ್ಲಿ ಕೆಮ್ಮು ಸಿರಪ್‌ಗಳು ಮತ್ತು ವಿವಿಧ ಔಷಧಿಗಳಿಂದ ತಯಾರಿಸಲಾದ ವಿಟಮಿನ್‌ಗಳು ಸೇರಿವೆ.

ಮತ್ತಷ್ಟು ಓದಿ: Cough Syrup: ಭಾರತದಲ್ಲಿ ತಯಾರಾದ ಶೀತ-ಕೆಮ್ಮಿನ ಔಷಧಿ ಸೇವಿಸಿ ಆಫ್ರಿಕಾದಲ್ಲಿ 66 ಮಕ್ಕಳ ಸಾವು

ಉಜ್ಬೇಕಿಸ್ತಾನ್, ಗ್ಯಾಂಬಿಯಾ ಮತ್ತು ನೈಜೀರಿಯಾ ಸೇರಿದಂತೆ ಕೆಲವು ದೇಶಗಳು ಇತ್ತೀಚೆಗೆ ಭಾರತದಲ್ಲಿ ತಯಾರಿಸಿದ ಔಷಧಿಗಳನ್ನು ಸೇವಿಸಿ ಸಾವು ಸಂಭವಿಸಿತ್ತು. ಈ ಹಿಂದೆ ಗ್ಯಾಂಬಿಯಾ ಮತ್ತು ಉಜ್ಬೇಕಿಸ್ತಾನದಲ್ಲಿ ಸಂಭವಿಸಿದ ಸಾವುಗಳಿಗೆ ಸಂಬಂಧಿಸಿದಂತೆ ಭಾರತ ನಿರ್ಮಿತ ಕೆಮ್ಮಿನ ಸಿರಪ್‌ಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ವೈದ್ಯಕೀಯ ಉತ್ಪನ್ನ ಎಚ್ಚರಿಕೆಗಳನ್ನು ಎತ್ತಿದೆ.

ಭಾರತದ ಡ್ರಗ್ ಕಂಟ್ರೋಲರ್ ನೋಯ್ಡಾದ ಮರಿಯನ್ ಬಯೋಟೆಕ್, ಹರಿಯಾಣ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್, ಚೆನ್ನೈ ಮೂಲದ ಗ್ಲೋಬಲ್ ಫಾರ್ಮಾ ಮತ್ತು ಪಂಜಾಬ್‌ನ ಕ್ಯೂಪಿ ಫಾರ್ಮಾಕೆಮ್ ಸೇರಿದಂತೆ ತಯಾರಕರ ಮೇಲೆ ತ್ವರಿತ ತನಿಖೆಯನ್ನು ಪ್ರಾರಂಭಿಸಿದೆ, ಅವುಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:17 am, Tue, 20 June 23

ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ