AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಠ್ಮಂಡು ಹೋಟೆಲ್​ನಲ್ಲಿ ಪ್ರತಿಭಟನಾಕಾರರು ಹಚ್ಚಿದ ಬೆಂಕಿಯಿಂದ ಪಾರಾಗಲು ಹೋಗಿ ಭಾರತೀಯ ಮಹಿಳೆ ಸಾವು

ಕೆಲಸಕ್ಕೆ ರಜೆ ಹಾಕಿ ಪಶುಪತಿನಾಥನ ದರ್ಶನಕ್ಕೆ ಹೋದವರಿಗೆ ಅಕ್ಷರಶಃ ನರಕದರ್ಶನವಾಗಿದೆ. ನೇಪಾಳದ ಕಠ್ಮಂಡುವಿನಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ(Protest) ತೀವ್ರಗೊಂಡು, ಹಿಂಸಾಚಾರದ ರೂಪ ತಾಳಿತ್ತು. ಆ ಸಂದರ್ಭದಲ್ಲಿ ಪ್ರತಿಭಟನಾಕಾರರು  ಹಲವು ಹೋಟೆಲ್​​ಗಳು​, ಮನೆಗಳಿಗೆ ಬೆಂಕಿ ಹಚ್ಚಿದ್ದರು. ಈ ಸಂದರ್ಭದಲ್ಲಿ ಆ ಹೋಟೆಲ್​ನಲ್ಲಿ ಭಾರತದ ದಂಪತಿ ಕೂಡ ಇದ್ದರು. ಬೆಂಕಿಯಿಂದ ಬಚಾವಾಗಲು ಹೋಗಿ ಮಹಿಳೆ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ.

ಕಠ್ಮಂಡು ಹೋಟೆಲ್​ನಲ್ಲಿ ಪ್ರತಿಭಟನಾಕಾರರು ಹಚ್ಚಿದ ಬೆಂಕಿಯಿಂದ ಪಾರಾಗಲು ಹೋಗಿ ಭಾರತೀಯ ಮಹಿಳೆ ಸಾವು
ದಂಪತಿ
ನಯನಾ ರಾಜೀವ್
|

Updated on:Sep 12, 2025 | 12:27 PM

Share

ಕಠ್ಮಂಡು, ಸೆಪ್ಟೆಂಬರ್ 12: ನೇಪಾಳದ ಕಠ್ಮಂಡುವಿನಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ(Protest) ತೀವ್ರಗೊಂಡು, ಹಿಂಸಾಚಾರದ ರೂಪ ತಾಳಿತ್ತು. ಸಂದರ್ಭದಲ್ಲಿ ಪ್ರತಿಭಟನಾಕಾರರು  ಹಲವು ಹೋಟೆಲ್​​ಗಳು​, ಮನೆಗಳಿಗೆ ಬೆಂಕಿ ಹಚ್ಚಿದ್ದರು. ಸಂದರ್ಭದಲ್ಲಿ ಹೋಟೆಲ್ನಲ್ಲಿ ಭಾರತದ ದಂಪತಿ ಕೂಡ ಇದ್ದರು. ಬೆಂಕಿಯಿಂದ ಬಚಾವಾಗಲು ಹೋಗಿ ಮಹಿಳೆ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ.

ಪಶುಪತಿ ನಾಥ ದೇವಾಲಯಕ್ಕೆ ಭೇಟಿ ನೀಡಲು ನೇಪಾಳಕ್ಕೆ ಕೆಲಸಕ್ಕೆ ರಜೆ ಹಾಕಿ ತೆರಳಿದ್ದ ಗಾಜಿಯಾಬಾದ್‌ನ ದಂಪತಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದರುರಾಮ್‌ವೀರ್ ಸಿಂಗ್ ಗೋಲಾ ಮತ್ತು ಅವರ ಪತ್ನಿ ರಾಜೇಶ್ ಸೆಪ್ಟೆಂಬರ್ 7 ರಂದು ಕಠ್ಮಂಡು ತಲುಪಿದ್ದರು. ಸೆಪ್ಟೆಂಬರ್ 9 ರ ರಾತ್ರಿ, ಗಲಭೆಕೋರರು ಅವರು ತಂಗಿದ್ದ ಹೋಟೆಲ್‌ಗೆ ಬೆಂಕಿ ಹಚ್ಚಿದ್ದರು.

ಹಿಂಸಾಚಾರ ಭುಗಿಲೆದ್ದ ತಕ್ಷಣ, ಹೋಟೆಲ್ ಸಿಬ್ಬಂದಿ ಅತಿಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಪ್ರಾರಂಭಿಸಿದರು. ನನ್ನ ಅಪ್ಪ, ಅಮ್ಮ ಮೂರನೇ ಮಹಡಿಯಲ್ಲಿದ್ದರು. ಸಿಬ್ಬಂದಿ ಅವರನ್ನು ಕೆಳಗಿಳಿಸಲು ಹಗ್ಗಗಳನ್ನು ಬಳಸಿದ್ದರು ಮತ್ತು ಯಾವುದೇ ಗಾಯವಾಗದಂತೆ ಹಾಸಿಗೆಗಳನ್ನು ಕೆಳಗೆ ಇರಿಸಲಾಗಿತ್ತು. ಸ್ಥಳಾಂತರಿಸುವ ಸಮಯದಲ್ಲಿ, ನನ್ನ ತಾಯಿ ಜಾರಿ ಬಿದ್ದರು. ಅದು ಅಷ್ಟು ಗಂಭೀರವಾಗಿರಲಿಲ್ಲ. ಬಿದ್ದ ತಕ್ಷಣ ಅವರು ಎದ್ದು ನಿಂತರು ಎಂದು ಅವರ ಮಗ ವಿಶಾಲ್ ಹೇಳಿದರು.

ಮತ್ತಷ್ಟು ಓದಿ:  ನೇಪಾಳದಲ್ಲಿ ಏನಾಗುತ್ತಿದೆ ನೋಡಿ, ನಮ್ಮ ಸಂವಿಧಾನದ ಬಗ್ಗೆ ಹೆಮ್ಮೆಪಡಿ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಶ್ಲಾಘನೆ

ಆದರೆ, ಈ ಗೊಂದಲದ ನಡುವೆ, ಹೋಟೆಲ್ ಸಿಬ್ಬಂದಿ ತಾಯಿ ಮತ್ತು ತಂದೆಯನ್ನು ಬೇರೆ ಬೇರೆ ದಿಕ್ಕುಗಳಿಗೆ ಕರೆದೊಯ್ಯಬೇಕಾಯಿತು. ಪತಿಯಿಂದ ಹಠಾತ್ತನೆ ಬೇರ್ಪಟ್ಟ ಬಳಿಕ ಒತ್ತಡ ಮತ್ತು ಆಘಾತವು ತನ್ನ ತಾಯಿಯ ಸಾವಿಗೆ ಕಾರಣವಾಯಿತು ಎಂದು ವಿಶಾಲ್ ಹೇಳಿದರು.

ಅವರಿಗೆ ತಕ್ಷಣದ ಚಿಕಿತ್ಸೆ ಸಿಗಲಿಲ್ಲ, ಅವರು ಒಟ್ಟಿಗೆ ಇದ್ದಿದ್ದರೆ, ಅವರು ಸಾಯುತ್ತಿರಲಿಲ್ಲ ಎಂದು ವಿಶಾಲ್ ತಿಳಿಸಿದ್ದಾರೆ. ತುರ್ತು ಪರಿಸ್ಥಿತಿಯ ಹೊರತಾಗಿಯೂ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಅವರಿಗೆ ಯಾವುದೇ ಸಹಾಯ ಸಿಗಲಿಲ್ಲ ಎಂದು ವಿಶಾಲ್ ಆರೋಪಿಸಿದ್ದಾರೆ. ಅವರ ತಂದೆ ಈಗ ಮೃತದೇಹವನ್ನು ರಸ್ತೆ ಮೂಲಕ ಗಾಜಿಯಾಬಾದ್‌ಗೆ ತರುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಭಾರತ-ನೇಪಾಳ ಗಡಿಯನ್ನು ತಲುಪುವ ನಿರೀಕ್ಷೆಯಿದೆ. ನಾವು ನಮ್ಮ ತಂದೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:27 pm, Fri, 12 September 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ