AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಠ್ಮಂಡು ಹೋಟೆಲ್​ನಲ್ಲಿ ಪ್ರತಿಭಟನಾಕಾರರು ಹಚ್ಚಿದ ಬೆಂಕಿಯಿಂದ ಪಾರಾಗಲು ಹೋಗಿ ಭಾರತೀಯ ಮಹಿಳೆ ಸಾವು

ಕೆಲಸಕ್ಕೆ ರಜೆ ಹಾಕಿ ಪಶುಪತಿನಾಥನ ದರ್ಶನಕ್ಕೆ ಹೋದವರಿಗೆ ಅಕ್ಷರಶಃ ನರಕದರ್ಶನವಾಗಿದೆ. ನೇಪಾಳದ ಕಠ್ಮಂಡುವಿನಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ(Protest) ತೀವ್ರಗೊಂಡು, ಹಿಂಸಾಚಾರದ ರೂಪ ತಾಳಿತ್ತು. ಆ ಸಂದರ್ಭದಲ್ಲಿ ಪ್ರತಿಭಟನಾಕಾರರು  ಹಲವು ಹೋಟೆಲ್​​ಗಳು​, ಮನೆಗಳಿಗೆ ಬೆಂಕಿ ಹಚ್ಚಿದ್ದರು. ಈ ಸಂದರ್ಭದಲ್ಲಿ ಆ ಹೋಟೆಲ್​ನಲ್ಲಿ ಭಾರತದ ದಂಪತಿ ಕೂಡ ಇದ್ದರು. ಬೆಂಕಿಯಿಂದ ಬಚಾವಾಗಲು ಹೋಗಿ ಮಹಿಳೆ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ.

ಕಠ್ಮಂಡು ಹೋಟೆಲ್​ನಲ್ಲಿ ಪ್ರತಿಭಟನಾಕಾರರು ಹಚ್ಚಿದ ಬೆಂಕಿಯಿಂದ ಪಾರಾಗಲು ಹೋಗಿ ಭಾರತೀಯ ಮಹಿಳೆ ಸಾವು
ದಂಪತಿ
ನಯನಾ ರಾಜೀವ್
|

Updated on:Sep 12, 2025 | 12:27 PM

Share

ಕಠ್ಮಂಡು, ಸೆಪ್ಟೆಂಬರ್ 12: ನೇಪಾಳದ ಕಠ್ಮಂಡುವಿನಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ(Protest) ತೀವ್ರಗೊಂಡು, ಹಿಂಸಾಚಾರದ ರೂಪ ತಾಳಿತ್ತು. ಸಂದರ್ಭದಲ್ಲಿ ಪ್ರತಿಭಟನಾಕಾರರು  ಹಲವು ಹೋಟೆಲ್​​ಗಳು​, ಮನೆಗಳಿಗೆ ಬೆಂಕಿ ಹಚ್ಚಿದ್ದರು. ಸಂದರ್ಭದಲ್ಲಿ ಹೋಟೆಲ್ನಲ್ಲಿ ಭಾರತದ ದಂಪತಿ ಕೂಡ ಇದ್ದರು. ಬೆಂಕಿಯಿಂದ ಬಚಾವಾಗಲು ಹೋಗಿ ಮಹಿಳೆ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ.

ಪಶುಪತಿ ನಾಥ ದೇವಾಲಯಕ್ಕೆ ಭೇಟಿ ನೀಡಲು ನೇಪಾಳಕ್ಕೆ ಕೆಲಸಕ್ಕೆ ರಜೆ ಹಾಕಿ ತೆರಳಿದ್ದ ಗಾಜಿಯಾಬಾದ್‌ನ ದಂಪತಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದರುರಾಮ್‌ವೀರ್ ಸಿಂಗ್ ಗೋಲಾ ಮತ್ತು ಅವರ ಪತ್ನಿ ರಾಜೇಶ್ ಸೆಪ್ಟೆಂಬರ್ 7 ರಂದು ಕಠ್ಮಂಡು ತಲುಪಿದ್ದರು. ಸೆಪ್ಟೆಂಬರ್ 9 ರ ರಾತ್ರಿ, ಗಲಭೆಕೋರರು ಅವರು ತಂಗಿದ್ದ ಹೋಟೆಲ್‌ಗೆ ಬೆಂಕಿ ಹಚ್ಚಿದ್ದರು.

ಹಿಂಸಾಚಾರ ಭುಗಿಲೆದ್ದ ತಕ್ಷಣ, ಹೋಟೆಲ್ ಸಿಬ್ಬಂದಿ ಅತಿಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಪ್ರಾರಂಭಿಸಿದರು. ನನ್ನ ಅಪ್ಪ, ಅಮ್ಮ ಮೂರನೇ ಮಹಡಿಯಲ್ಲಿದ್ದರು. ಸಿಬ್ಬಂದಿ ಅವರನ್ನು ಕೆಳಗಿಳಿಸಲು ಹಗ್ಗಗಳನ್ನು ಬಳಸಿದ್ದರು ಮತ್ತು ಯಾವುದೇ ಗಾಯವಾಗದಂತೆ ಹಾಸಿಗೆಗಳನ್ನು ಕೆಳಗೆ ಇರಿಸಲಾಗಿತ್ತು. ಸ್ಥಳಾಂತರಿಸುವ ಸಮಯದಲ್ಲಿ, ನನ್ನ ತಾಯಿ ಜಾರಿ ಬಿದ್ದರು. ಅದು ಅಷ್ಟು ಗಂಭೀರವಾಗಿರಲಿಲ್ಲ. ಬಿದ್ದ ತಕ್ಷಣ ಅವರು ಎದ್ದು ನಿಂತರು ಎಂದು ಅವರ ಮಗ ವಿಶಾಲ್ ಹೇಳಿದರು.

ಮತ್ತಷ್ಟು ಓದಿ:  ನೇಪಾಳದಲ್ಲಿ ಏನಾಗುತ್ತಿದೆ ನೋಡಿ, ನಮ್ಮ ಸಂವಿಧಾನದ ಬಗ್ಗೆ ಹೆಮ್ಮೆಪಡಿ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಶ್ಲಾಘನೆ

ಆದರೆ, ಈ ಗೊಂದಲದ ನಡುವೆ, ಹೋಟೆಲ್ ಸಿಬ್ಬಂದಿ ತಾಯಿ ಮತ್ತು ತಂದೆಯನ್ನು ಬೇರೆ ಬೇರೆ ದಿಕ್ಕುಗಳಿಗೆ ಕರೆದೊಯ್ಯಬೇಕಾಯಿತು. ಪತಿಯಿಂದ ಹಠಾತ್ತನೆ ಬೇರ್ಪಟ್ಟ ಬಳಿಕ ಒತ್ತಡ ಮತ್ತು ಆಘಾತವು ತನ್ನ ತಾಯಿಯ ಸಾವಿಗೆ ಕಾರಣವಾಯಿತು ಎಂದು ವಿಶಾಲ್ ಹೇಳಿದರು.

ಅವರಿಗೆ ತಕ್ಷಣದ ಚಿಕಿತ್ಸೆ ಸಿಗಲಿಲ್ಲ, ಅವರು ಒಟ್ಟಿಗೆ ಇದ್ದಿದ್ದರೆ, ಅವರು ಸಾಯುತ್ತಿರಲಿಲ್ಲ ಎಂದು ವಿಶಾಲ್ ತಿಳಿಸಿದ್ದಾರೆ. ತುರ್ತು ಪರಿಸ್ಥಿತಿಯ ಹೊರತಾಗಿಯೂ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಅವರಿಗೆ ಯಾವುದೇ ಸಹಾಯ ಸಿಗಲಿಲ್ಲ ಎಂದು ವಿಶಾಲ್ ಆರೋಪಿಸಿದ್ದಾರೆ. ಅವರ ತಂದೆ ಈಗ ಮೃತದೇಹವನ್ನು ರಸ್ತೆ ಮೂಲಕ ಗಾಜಿಯಾಬಾದ್‌ಗೆ ತರುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಭಾರತ-ನೇಪಾಳ ಗಡಿಯನ್ನು ತಲುಪುವ ನಿರೀಕ್ಷೆಯಿದೆ. ನಾವು ನಮ್ಮ ತಂದೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:27 pm, Fri, 12 September 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!