AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಪ್ರವಾಸದ ವೇಳೆ ಪತ್ನಿ ಹಾಗೂ ಮಗ ಸಾವು, ಪತಿಗೆ 50 ಲಕ್ಷ ರೂ. ಪರಿಹಾರ ಪಾವತಿಸಲಿದೆ ಟ್ರಾವೆಲ್ ಏಜೆನ್ಸಿ

ಪ್ರವಾಸಕ್ಕೆಂದು ಶ್ರೀಲಂಕಾಗೆ ತೆರಳಿದ್ದ ತಾಯಿ, ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದರು, ಇದೀಗ ಮೃತ ಮಹಿಳೆಯ ಪತಿಗೆ 50 ಲಕ್ಷ ರೂ ಪರಿಹಾರ ನೀಡುವಂತೆ ಟ್ರಾವೆಲ್ ಏಜೆನ್ಸಿಗೆ ಆದೇಶಿಸಲಾಗಿದೆ.  2019ರ ಡಿಸೆಂಬರ್​ನಲ್ಲಿ ಕನುಪ್ರಿಯಾ ಸೈಗಲ್ ಅವರು ಇಂಗ್ಲಿಷ್ ಸುದ್ದಿವಾಹಿನಿಯ ನಿರೂಪಕಿಯಾಗಿದ್ದರು.

ಶ್ರೀಲಂಕಾ ಪ್ರವಾಸದ ವೇಳೆ ಪತ್ನಿ ಹಾಗೂ ಮಗ ಸಾವು, ಪತಿಗೆ  50 ಲಕ್ಷ ರೂ. ಪರಿಹಾರ ಪಾವತಿಸಲಿದೆ ಟ್ರಾವೆಲ್ ಏಜೆನ್ಸಿ
ಕಾನುಪ್ರಿಯImage Credit source: India.com
Follow us
ನಯನಾ ರಾಜೀವ್
|

Updated on:Aug 22, 2023 | 12:38 PM

ಪ್ರವಾಸಕ್ಕೆಂದು ಶ್ರೀಲಂಕಾಗೆ ತೆರಳಿದ್ದ ತಾಯಿ, ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದರು, ಇದೀಗ ಮೃತ ಮಹಿಳೆಯ ಪತಿಗೆ 50 ಲಕ್ಷ ರೂ ಪರಿಹಾರ ನೀಡುವಂತೆ ಟ್ರಾವೆಲ್ ಏಜೆನ್ಸಿಗೆ ಆದೇಶಿಸಲಾಗಿದೆ.  2019ರ ಡಿಸೆಂಬರ್​ನಲ್ಲಿ ಕನುಪ್ರಿಯಾ ಸೈಗಲ್ ಅವರು ಇಂಗ್ಲಿಷ್ ಸುದ್ದಿವಾಹಿನಿಯ ನಿರೂಪಕಿಯಾಗಿದ್ದರು. ಆಕೆಯ ಮಗ ಶ್ರೇಯಾ ಸೈಗಲ್ ಮತ್ತು ತಂದೆ, ಪ್ರಸಿದ್ಧ ಹಿಂದಿ ಸಾಹಿತಿ ಗಂಗಾ ಪ್ರಸಾದ್ ವಿಮಲ್ ಅವರು ಪ್ರಯಾಣಿಸುತ್ತಿದ್ದ ವ್ಯಾನ್ ಕೊಲಂಬೊದಲ್ಲಿ ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಸಾವನ್ನಪ್ಪಿದ್ದರು.

ದುರಂತದಲ್ಲಿ ಅವರ ಪತಿ ಯೋಗೇಶ್ ಸೈಗಲ್ ಮತ್ತು ಅವರ ಪುತ್ರಿ ಐಶ್ವರ್ಯಾ ಸೈಗಲ್ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದಲ್ಲಿ 52 ವರ್ಷದ ವ್ಯಾನ್ ಚಾಲಕ ಕೂಡ ಸಾವನ್ನಪ್ಪಿದ್ದ. ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ನಾಲ್ಕು ವರ್ಷಗಳ ನಂತರ ಯೋಗೇಶ್ ಸೈಗಲ್ ಅವರಿಗೆ ಪರಿಹಾರ ನೀಡುವಂತೆ ಟ್ರಾವೆಲ್ ಏಜೆನ್ಸಿಗೆ ಆದೇಶಿಸಿದೆ.

ಅಪಘಾತದಲ್ಲಿ ಸೇಗಲ್ ಅವರಿಗೆ ಗಂಭೀರ ಗಾಯಗಳಾಗಿತ್ತು. ಸಾಕಷ್ಟು ದಿನಗಳ ಕಾಲ ಚಿಕಿತ್ಸೆ ಪಡೆದು ಬಳಿಕ ಚೇತರಿಸಿಕೊಂಡಿದ್ದರು. ತಮ್ಮ ಪತ್ನಿ ಮತ್ತು ಮಗನ ಸಮಾಧಿ ಮತ್ತು ಅಂತಿಮ ವಿಧಿವಿಧಾನಗಳಿಗಾಗಿ ದೆಹಲಿಗೆ ಹೋಗಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: ಐಸ್​ಕ್ರೀಂ ತಿನ್ನಿಸಲು ಮೂವರು ಮಕ್ಕಳನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ, ಪಿಕ್​ಅಪ್​ ವ್ಯಾನ್ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ಮಗಳು ಹಾಗೂ ಗಂಡನನ್ನು ಕಳೆದುಕೊಂಡು ಅತ್ತೆಯ ದೈಹಿಕ ಮತ್ತು ಮಾನಸಿಕ ಸ್ಥಿತಿ ಹದಗೆಟ್ಟಿದೆ. ಮಗಳಿಗೂ ಕೂಡ ಮಾನಸಿಕವಾಗಿ ತುಂಬಾ ಆಘಾತವಾಗಿದೆ. ನಿದ್ರೆಯನ್ನೂ ಮಾಡುತ್ತಿಲ್ಲ ನಾಲ್ಕು ಜನರ ಜತೆ ಕುಳಿತು ಮಾತನಾಡುತ್ತಲೂ ಇಲ್ಲ.

ಟ್ರಾವೆಲ್ ಏಜೆಂಟ್‌ಗಳು 50 ಲಕ್ಷ ಪರಿಹಾರವನ್ನು ಮೂರು ತಿಂಗಳೊಳಗೆ ಪಾವತಿಸಬೇಕು, ಇಲ್ಲದಿದ್ದರೆ ಅವರು ಹೆಚ್ಚುವರಿ 10 ಲಕ್ಷವನ್ನು ಪಾವತಿಸಬೇಕು ಎಂದು ಫೋರಂ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:35 pm, Tue, 22 August 23

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್