AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರನಿಗಿಂತ ಕೆಟ್ಟದಾಗಿ ನಡೆಸಿಕೊಂಡರು; ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿರುದ್ಧ ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್ ಆರೋಪ

ಆಗಸ್ಟ್ 2023ರಿಂದ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಮಗೆ ಏನಾದರೂ ಸಂಭವಿಸಿದರೆ ಅದಕ್ಕೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅಸಿಮ್ ಮುನೀರ್ ನನ್ನ ಜೊತೆ ಬಹಳ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಅವರಿಗೆ ನನ್ನ ಧಿಕ್ಕಾರವಿದೆ ಎಂದು ಹೇಳಿದ್ದಾರೆ.

ಉಗ್ರನಿಗಿಂತ ಕೆಟ್ಟದಾಗಿ ನಡೆಸಿಕೊಂಡರು; ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿರುದ್ಧ ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್ ಆರೋಪ
Imran Khan
ಸುಷ್ಮಾ ಚಕ್ರೆ
|

Updated on: Jul 18, 2025 | 10:31 PM

Share

ಇಸ್ಲಮಾಬಾದ್, ಜುಲೈ 18: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)ರಾವಲ್ಪಿಂಡಿಯ ಅಡಿಯಾಲಾ ಜೈಲಿನಿಂದ ಕಠಿಣ ಎಚ್ಚರಿಕೆ ನೀಡಿದ್ದಾರೆ. ಜೈಲಿನಲ್ಲಿ ತಮಗೆ ಏನಾದರೂ ಸಂಭವಿಸಿದರೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೇ ಜವಾಬ್ದಾರರು ಎಂದಿದ್ದ ಅವರು ಇದೀಗ ಜೈಲಿನಲ್ಲಿ ನನ್ನನ್ನು ಉಗ್ರನಿಗಿಂತ ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಬಹು ಪ್ರಕರಣಗಳಲ್ಲಿ ಕೇಸ್ ದಾಖಲಾಗಿದ್ದರಿಂದ ಆಗಸ್ಟ್ 2023ರಿಂದ ಜೈಲಿನಲ್ಲಿರುವ 72 ವರ್ಷದ ಕ್ರಿಕೆಟಿಗ ಹಾಗೂ ರಾಜಕಾರಣಿ ಇಮ್ರಾನ್ ಖಾನ್ ಈ ಹಿಂದೆ ಪಾಕಿಸ್ತಾನದ ಪ್ರಧಾನಿಯಾಗಿದ್ದರು. ಮಾಜಿ ಪ್ರಧಾನಿಯಾದರೂ ನನ್ನನ್ನು ಭಯೋತ್ಪಾದಕನಿಗಿಂತ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ನನ್ನ ಹಾಗೂ ನನ್ನ ಪತ್ನಿ ಬುಷ್ರಾ ಬೀಬಿ ಅವರ ಮೇಲಿನ ದೌರ್ಜನ್ಯ ತೀವ್ರಗೊಳ್ಳುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ನನ್ನ ಮೂಲಭೂತ ಹಕ್ಕುಗಳನ್ನು ವ್ಯವಸ್ಥಿತವಾಗಿ ಕಸಿದುಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಜೈಲಿನಲ್ಲಿ ನಾನು ಎದುರಿಸುತ್ತಿರುವ ಕಠಿಣ ವರ್ತನೆ ತೀವ್ರಗೊಂಡಿದೆ. ನನ್ನ ಪತ್ನಿ ಬುಷ್ರಾ ಬೀಬಿಗೂ ಇದು ಅನ್ವಯಿಸುತ್ತದೆ. ಅವರ ಸೆಲ್‌ನಲ್ಲಿನ ಟಿವಿಯೂ ಇಲ್ಲ. ಮಾನವ ಮತ್ತು ಕೈದಿಗಳಿಗೆ ಕಾನೂನುಬದ್ಧವಾಗಿ ನೀಡಲಾದ ಎಲ್ಲಾ ಮೂಲಭೂತ ಹಕ್ಕುಗಳನ್ನು ನಮ್ಮಿಬ್ಬರಿಂದು ಕಸಿದುಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲೇ ಪಾಕ್​ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕೊಲ್ಲಲು ಪಿತೂರಿ, ಅಲೀಮಾ ಹೇಳಿದ್ದೇನು?

ಕೊಲೆಗೆ ಶಿಕ್ಷೆ ಅನುಭವಿಸುತ್ತಿರುವ ಮಿಲಿಟರಿ ಅಧಿಕಾರಿಯೊಬ್ಬರು ಜೈಲಿನಲ್ಲಿ ವಿಐಪಿ ಚಿಕಿತ್ಸೆಯನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದ ಅವರು ಶಿಕ್ಷೆಗೊಳಗಾದ ಭಯೋತ್ಪಾದಕರಿಗಿಂತ ಕೆಟ್ಟದಾಗಿ ತನ್ನನ್ನು ನಡೆಸಿಕೊಳ್ಳಲಾಗುತ್ತಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ನಾನು ನಿರಂತರ ನಿಂದನೆಗೆ ಒಳಗಾಗಿದ್ದೇನೆ. ಆದರೆ ಅವರು ಏನೇ ಮಾಡಿದರೂ, ನಾನು ಎಂದಿಗೂ ದಬ್ಬಾಳಿಕೆಯ ಮುಂದೆ ತಲೆಬಾಗಿಲ್ಲ, ಮುಂದೆಯೂ ತಲೆಬಾಗುವುದಿಲ್ಲ” ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!