AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಅನ್ನು 'ಮಧ್ಯಪ್ರಾಚ್ಯದ ಸೋಲಪ್ಪಿದ ರಾಷ್ಟ್ರ' ಎಂದು ಲೇವಡಿ ಮಾಡಿ, 'ಭೀಕರ ದಾಳಿ' ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್‌ನ ನಿರಂತರ ದಾಳಿಯಿಂದಾಗಿ ಇರಾನ್ ಶರಣಾಗಬೇಕು ಎಂದು ಟ್ರಂಪ್ ಹೇಳಿದ್ದಾರೆ. ಆದರೆ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಶರಣಾಗತಿ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳ ನಡುವೆ, ದುಬೈನಲ್ಲಿ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ವಿಮಾನ ನಿಲ್ದಾಣವನ್ನು ತೆರವುಗೊಳಿಸಲಾಗಿದೆ.

ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್
ಡೊನಾಲ್ಡ್ ಟ್ರಂಪ್
ಅಕ್ಷಯ್​ ಪಲ್ಲಮಜಲು​​
|

Updated on:Mar 07, 2026 | 6:41 PM

Share

ವಾಷಿಂಗ್ಟನ್ ಮಾ.7: ಇಸ್ರೇಲ್ ಮತ್ತು ಅಮೆರಿಕದ ದಾಳಿಯಿಂದ ಜರ್ಜರಿತವಾಗಿರುವ ಇರಾನ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ” (Loser of the Middle East) ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಇಂದು (ಮಾರ್ಚ್ 7) ಇರಾನ್ ಮೇಲೆ “ಅತ್ಯಂತ ಭೀಕರ ದಾಳಿ” ನಡೆಯಲಿದೆ ಎಂದು ಅವರು ಎಚ್ಚರಿಸಿದ್ದಾರೆ.

“ನರಕದಂತೆ ಹೊಡೆತ ತಿಂದಿರುವ ಇರಾನ್, ಈಗ ನೆರೆರಾಷ್ಟ್ರಗಳ ಕ್ಷಮೆಯಾಚಿಸಿ ಶರಣಾಗಿದೆ. ಅಮೆರಿಕ ಮತ್ತು ಇಸ್ರೇಲ್‌ನ ನಿರಂತರ ದಾಳಿಯಿಂದಾಗಿ ಮಾತ್ರ ಇರಾನ್ ಈ ಭರವಸೆ ನೀಡಿದೆ,” ಎಂದು ಟ್ರಂಪ್ ಬರೆದಿದ್ದಾರೆ. ಇರಾನ್ ಇನ್ನು ಮುಂದೆ ಮಧ್ಯಪ್ರಾಚ್ಯದ ದಬಾಯಿಸುವ ರಾಷ್ಟ್ರವಾಗಿ ಉಳಿದಿಲ್ಲ, ಅದು ಸಂಪೂರ್ಣವಾಗಿ ಕುಸಿಯುವವರೆಗೂ ‘ಲೂಸರ್’ ಆಗಿಯೇ ಇರಲಿದೆ ಎಂದು ಟ್ರಂಪ್ ಕಿಚಾಯಿಸಿದ್ದಾರೆ.

ಶುಕ್ರವಾರವಷ್ಟೇ ಇರಾನ್ ಮುಂದೆ ಕಠಿಣ ಷರತ್ತು ವಿಧಿಸಿದ್ದ ಟ್ರಂಪ್, “ಬೇಷರತ್ ಶರಣಾಗತಿ” ಮಾತ್ರ ಯುದ್ಧ ಅಂತ್ಯಕ್ಕೆ ಇರುವ ಏಕೈಕ ದಾರಿ ಎಂದಿದ್ದಾರೆ.ಇರಾನ್ ಶರಣಾಗಿ ಹೊಸ ನಾಯಕತ್ವವನ್ನು ಒಪ್ಪಿಕೊಂಡರೆ, ಆ ದೇಶದ ಆರ್ಥಿಕತೆಯನ್ನು ಮತ್ತೆ ಕಟ್ಟಲು ಅಮೆರಿಕ ಸಹಾಯ ಮಾಡಲಿದೆ ಎಂಬ ಆಮಿಷವನ್ನೂ ಒಡ್ಡಿದ್ದಾರೆ.ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ನೆರೆರಾಷ್ಟ್ರಗಳ ಕ್ಷಮೆ ಕೇಳಿದ್ದರೂ, “ಶರಣಾಗತಿಯ ಕನಸನ್ನು ಶತ್ರುಗಳು ತಮ್ಮ ಸಮಾಧಿಗೆ ತೆಗೆದುಕೊಂಡು ಹೋಗಲಿ” ಎಂದು ಹೇಳುವ ಮೂಲಕ ಶರಣಾಗತಿಯನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಶನಿವಾರ ಬೆಳಿಗ್ಗೆ ದುಬೈನಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ಯುಎಇ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ. ವಿಶ್ವದ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಪ್ರಯಾಣಿಕರನ್ನು ಸುರಕ್ಷಿತ ಸುರಂಗಗಳಿಗೆ ಸ್ಥಳಾಂತರಿಸಲಾಗಿದೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Sat, 7 March 26

Follow Us
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ