AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್ ನ್ಯಾಟೋ ದೇಶಗಳ ಮೇಲೆ ದಾಳಿ ಮಾಡುವುದಿಲ್ಲ: ಸಿಐಎ ಮುಖ್ಯಸ್ಥರ ರಷ್ಯಾ ಭೇಟಿ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅಭಯ

ಸಿಐಎ ಮುಖ್ಯಸ್ಥರ ರಷ್ಯಾ ಭೇಟಿ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್, ವ್ಲಾಡಿಮಿರ್ ಪುಟಿನ್ ನ್ಯಾಟೋ ದೇಶಗಳ ಮೇಲೆ ದಾಳಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಮೆರಿಕ ಮಾಧ್ಯಮಗಳ ಯುದ್ಧದ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದು, ಕ್ರೆಮ್ಲಿನ್ ಕೂಡ ಇದು ಕಟ್ಟುಕಥೆ ಎಂದಿದೆ. ಈ ಹೇಳಿಕೆಗಳು ರಷ್ಯಾ-ನ್ಯಾಟೋ ಸಂಘರ್ಷದ ಭೀತಿ, ಮೂರನೇ ಮಹಾಯುದ್ಧದ ಆತಂಕವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮಹತ್ವ ಪಡೆದಿವೆ.

ಪುಟಿನ್ ನ್ಯಾಟೋ ದೇಶಗಳ ಮೇಲೆ ದಾಳಿ ಮಾಡುವುದಿಲ್ಲ: ಸಿಐಎ ಮುಖ್ಯಸ್ಥರ ರಷ್ಯಾ ಭೇಟಿ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅಭಯ
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Aug 28, 2026 | 7:55 AM

Share

ವಾಷಿಂಗ್ಟನ್, ಆಗಸ್ಟ್​ 28: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆಯ (NATO) ಯಾವುದೇ ಸದಸ್ಯ ರಾಷ್ಟ್ರಗಳ ಮೇಲೆ ದಾಳಿ ನಡೆಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆ (CIA) ನಿರ್ದೇಶಕ ಜಾನ್ ರಾಟ್‌ಕ್ಲಿಫ್ ಅವರು ಇತ್ತೀಚೆಗೆ ರಷ್ಯಾದ ರಾಜಧಾನಿ ಮಾಸ್ಕೋಗೆ ಅನಿರೀಕ್ಷಿತ ಭೇಟಿ ನೀಡಿ ಮಾತುಕತೆ ನಡೆಸಿದ ಬೆನ್ನಲ್ಲೇ, ನ್ಯಾಟೋ ಮಿತ್ರರಾಷ್ಟ್ರಗಳ ಮೇಲೆ ರಷ್ಯಾ ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಅಂತರರಾಷ್ಟ್ರೀಯ ಮಾಧ್ಯಮಗಳ ಊಹಾಪೋಹಗಳನ್ನು ಟ್ರಂಪ್ ತಳ್ಳಿಹಾಕಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ನಾನು ಪುಟಿನ್ ಅವರೊಂದಿಗೆ ಉತ್ತಮ ಮಾತುಕತೆ ನಡೆಸಿದ್ದೇನೆ. ಅವರು ಯಾವುದೇ ಕಾರಣಕ್ಕೂ ನ್ಯಾಟೋ ಪ್ರದೇಶದ ಮೇಲೆ ದಾಳಿ ಮಾಡುವುದಿಲ್ಲ” ಎಂದು ಸ್ಪಷ್ಟವಾಗಿ ತಿಳಿಸಿದರು. ರಷ್ಯಾ ಸೀಮಿತ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದೆ ಎಂಬ ಅಮೆರಿಕದ ಮಾಧ್ಯಮಗಳ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ಅಂತಹ ಯಾವುದೇ ಆಕ್ರಮಣ ನಡೆಯುವುದಿಲ್ಲ ಎಂದು ಪುನರುಚ್ಚರಿಸಿದರು.

ಮತ್ತಷ್ಟು ಓದಿ: ‘ಹಾರ್ಮುಜ್ ಜಲಸಂಧಿ ಅಮೆರಿಕನ್ ಭೂಭಾಗ’: ಇದು ನಿಮ್ಮ ಭ್ರಮೆ ಎಂದು ಟ್ರಂಪ್​​ಗೆ ಟಾಂಗ್ ನೀಡಿದ ಇರಾನ್

ಜಾನ್ ರಾಟ್‌ಕ್ಲಿಫ್ ಭೇಟಿ: ಕಳೆದ ಐದು ವರ್ಷಗಳಲ್ಲಿ ರಷ್ಯಾಕ್ಕೆ ಭೇಟಿ ನೀಡಿದ ಎರಡನೇ ಸಿಐಎ ಮುಖ್ಯಸ್ಥರಾಗಿರುವ ಜಾನ್ ರಾಟ್‌ಕ್ಲಿಫ್ ಅವರು ಮಾಸ್ಕೋದಲ್ಲಿ ರಷ್ಯಾದ ವಿದೇಶಿ ಗುಪ್ತಚರ ಮುಖ್ಯಸ್ಥ ಸೆರ್ಗೆಯ್ ನರಿಶ್ಕಿನ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದರು.

ವಾಲ್ ಸ್ಟ್ರೀಟ್ ಜರ್ನಲ್ (WSJ), ಸಿಎನ್‌ಎನ್ ಮತ್ತು ಸಿಬಿಎಸ್ ನ್ಯೂಸ್ ವರದಿಗಳ ಪ್ರಕಾರ, ಉಕ್ರೇನ್ ಯುದ್ಧದ ನಡುವೆ ನ್ಯಾಟೋ ದೇಶಗಳ ಮೇಲೆ ಸಂಭವನೀಯ ರಷ್ಯಾ ದಾಳಿಯನ್ನು ತಡೆಯುವುದೇ ಈ ಭೇಟಿಯ ಮುಖ್ಯ ಉದ್ದೇಶವಾಗಿತ್ತು ಎಂದು ಹೇಳಲಾಗಿತ್ತು.

ಇದಕ್ಕೂ ಮೊದಲು ನವೆಂಬರ್ 2021 ರಲ್ಲಿ ಅಂದಿನ ಸಿಐಎ ನಿರ್ದೇಶಕ ವಿಲಿಯಂ ಬರ್ನ್ಸ್ ಮಾಸ್ಕೋಗೆ ಭೇಟಿ ನೀಡಿದ್ದರು. ಅವರ ಭೇಟಿಯ ಮೂರು ತಿಂಗಳ ನಂತರ ರಷ್ಯಾ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಮಿಲಿಟರಿ ಕಾರ್ಯಾಚರಣೆ ಆರಂಭಿಸಿತ್ತು.

ಡಿಮಿಟ್ರಿ ಪೆಸ್ಕೋವ್ ತಿರುಗೇಟು: ಅಮೆರಿಕ ಮಾಧ್ಯಮಗಳ ವರದಿಗಳನ್ನು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸಂಪೂರ್ಣವಾಗಿ ತಳ್ಳಿಹಾಕಿದ್ದು, ಇತ್ತೀಚೆಗೆ ಇಂತಹ ಅನೇಕ ಭಯಾನಕ ಮತ್ತು ಕಟ್ಟುಕಥೆಗಳು ಹರಡುತ್ತಿವೆ, ಇವುಗಳಿಗೂ ವಾಸ್ತವಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾದ ಗುಪ್ತಚರ ಮುಖ್ಯಸ್ಥ ಸೆರ್ಗೆಯ್ ನರಿಶ್ಕಿನ್ ಪ್ರತಿಕ್ರಿಯಿಸಿ, ಗುಪ್ತಚರ ಇಲಾಖೆಗೆ ಸಂಬಂಧಿಸಿದ ನಿಯಮಿತ ವಿಷಯಗಳ ಬಗ್ಗೆ ಮಾತ್ರ ಸಭೆ ನಡೆದಿದ್ದು, ಇದರಲ್ಲಿ ಯಾವುದೇ ಅಸಾಮಾನ್ಯತೆ ಇಲ್ಲ ಎಂದಿದ್ದಾರೆ.

ನ್ಯಾಟೋ ಒಪ್ಪಂದದ 5ನೇ ವಿಧಿಯ ಪ್ರಕಾರ, ಯಾವುದೇ ಒಂದು ನ್ಯಾಟೋ ಸದಸ್ಯ ದೇಶದ ಮೇಲೆ ದಾಳಿ ನಡೆದರೆ ಅದನ್ನು ಎಲ್ಲಾ ಸದಸ್ಯ ರಾಷ್ಟ್ರಗಳ (ಅಮೆರಿಕ ಸೇರಿದಂತೆ 32 ದೇಶಗಳು) ಮೇಲಿನ ದಾಳಿ ಎಂದು ಪರಿಗಣಿಸಲಾಗುತ್ತದೆ. ಈ ಕಾರಣದಿಂದಾಗಿ ರಷ್ಯಾ-ನ್ಯಾಟೋ ಮುಖಾಮುಖಿಯು ಮೂರನೇ ಮಹಾಯುದ್ಧಕ್ಕೆ ಕಾರಣವಾಗುವ ಸಾಧ್ಯತೆಯಿರುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ