AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡದಿದ್ದರೆ, ದೇಶದಲ್ಲಿ ರಕ್ತಪಾತ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್
ಡೊನಾಲ್ಡ್​ ಟ್ರಂಪ್​
Follow us
ನಯನಾ ರಾಜೀವ್
|

Updated on: Mar 17, 2024 | 8:26 AM

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುವುದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯ ಒಳಾರ್ಥವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಸ್ತವವಾಗಿ, ಅವರು ಈ ಎಚ್ಚರಿಕೆಯನ್ನು ನೀಡಿದ ಸಮಯದಲ್ಲಿ, ಆಟೋಮೊಬೈಲ್ ಉದ್ಯಮದ ಬಗ್ಗೆ ಮಾತನಾಡುತ್ತಿದ್ದರು.

ತಾವು ಮರು ಆಯ್ಕೆಯಾದರೆ ಚೀನಾವು ಯುಎಸ್​ನಿಂದ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯು ಅಮೆರಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಎಂದು ಹೇಳಿದರು. ರಿಪಬ್ಲಿಕನ್ ಅಭ್ಯರ್ಥಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಕೆಲವು ದಿನಗಳ ನಂತರ ಈ ಹೇಳಿಕೆ ಹೊರ ಬಂದಿದ್ದು, ಒಂದೊಮ್ಮೆ ನಾನು ಅಧ್ಯಕ್ಷನಾಗಿ ನೇಮಕವಾಗದಿದ್ದರೆ ಇಲ್ಲಿ ರಕ್ತಪಾತ ಖಚಿತ ಎಂದಿದ್ದಾರೆ.

ಮತ್ತಷ್ಟು ಓದಿ: Presidents’ Day: ಅಮೆರಿಕದ ಅತೀ ಕೆಟ್ಟ ನಾಯಕ ಡೊನಾಲ್ಡ್ ಟ್ರಂಪ್, ಪಟ್ಟಿಯಲ್ಲಿ ಬೈಡನ್​​ಗೆ 14ನೇ ಸ್ಥಾನ

ಕಳೆದ ಬಾರಿಗಿಂತ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ. ದೇಶಕ್ಕೆ ನನ್ನ ಅವಶ್ಯಕತೆ ಇದೆ. ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತದ ಕೋಡಿಯೇ ಹರಿಯುತ್ತದೆ ಎಂದರು.

ಭವಿಷ್ಯದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಿಲ್ಲ ಎಂದು ಮೈಕ್ ಪೆನ್ಸ್ ಘೋಷಿಸಿದರು. ಏಕೆಂದರೆ ಡೊನಾಲ್ಡ್ ಟ್ರಂಪ್ ಸ್ಪಷ್ಟವಾಗಿಲ್ಲದ ಕಾರ್ಯಸೂಚಿಯೊಂದಿಗೆ ಮುಂದುವರಿಯಲು ಬಯಸುತ್ತಾರೆ. ಕಳೆದ ನಾಲ್ಕರಲ್ಲಿ ನಾವು ಸಂಪ್ರದಾಯವಾದಿ ಅಜೆಂಡಾಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದ್ದಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್