AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತುಕತೆ ವಿಫಲವಾದರೆ ಇರಾನ್ ವಿರುದ್ಧ ಮತ್ತೆ ಕಠಿಣ ಮಿಲಿಟರಿ ದಾಳಿ, ಇರಾನ್​ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ

ಸ್ತುತ ನಡೆಯುತ್ತಿರುವ ರಾಜತಾಂತ್ರಿಕ ಮಾತುಕತೆಗಳು ಮತ್ತು ಚರ್ಚೆಗಳು ವಿಫಲವಾದರೆ ಇರಾನ್ ವಿರುದ್ಧ "ಅತ್ಯಂತ ಬಲವಾದ ಮಿಲಿಟರಿ ಕ್ರಮ" ಕೈಗೊಳ್ಳಲು ಅಮೆರಿಕ ಸಿದ್ಧವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಟೆಹ್ರಾನ್‌ಗೆ ಮತ್ತೊಂದು ಅವಕಾಶ ನೀಡುವ ಉದ್ದೇಶದಿಂದ ಶುಕ್ರವಾರ ನಡೆಸಬೇಕಿದ್ದ ಯೋಜಿತ ಮಿಲಿಟರಿ ದಾಳಿಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ. 'ಆಕ್ಸಿಯೋಸ್'ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, "ನಾವು ಇರಾನ್ ಜೊತೆ ಅತ್ಯಂತ ಆಳವಾದ ಮಾತುಕತೆ ನಡೆಸುತ್ತಿದ್ದೇವೆ. ಆದರೆ ಈ ರಾಜತಾಂತ್ರಿಕತೆಗೆ ನಾವು ಹೆಚ್ಚಿನ ಸಮಯ ನೀಡುವುದಿಲ್ಲ.

ಮಾತುಕತೆ ವಿಫಲವಾದರೆ ಇರಾನ್ ವಿರುದ್ಧ ಮತ್ತೆ ಕಠಿಣ ಮಿಲಿಟರಿ ದಾಳಿ, ಇರಾನ್​ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Jul 28, 2026 | 7:58 AM

Share

ವಾಷಿಂಗ್ಟನ್, ಜುಲೈ 28: ಪ್ರಸ್ತುತ ನಡೆಯುತ್ತಿರುವ ರಾಜತಾಂತ್ರಿಕ ಮಾತುಕತೆಗಳು ಮತ್ತು ಚರ್ಚೆಗಳು ವಿಫಲವಾದರೆ ಇರಾನ್ ವಿರುದ್ಧ “ಅತ್ಯಂತ ಬಲವಾದ ಮಿಲಿಟರಿ ಕ್ರಮ” ಕೈಗೊಳ್ಳಲು ಅಮೆರಿಕ ಸಿದ್ಧವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಎಚ್ಚರಿಸಿದ್ದಾರೆ. ಟೆಹ್ರಾನ್‌ಗೆ ಮತ್ತೊಂದು ಅವಕಾಶ ನೀಡುವ ಉದ್ದೇಶದಿಂದ ಶುಕ್ರವಾರ ನಡೆಸಬೇಕಿದ್ದ ಯೋಜಿತ ಮಿಲಿಟರಿ ದಾಳಿಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

‘ಆಕ್ಸಿಯೋಸ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, “ನಾವು ಇರಾನ್ ಜೊತೆ ಅತ್ಯಂತ ಆಳವಾದ ಮಾತುಕತೆ ನಡೆಸುತ್ತಿದ್ದೇವೆ. ಆದರೆ ಈ ರಾಜತಾಂತ್ರಿಕತೆಗೆ ನಾವು ಹೆಚ್ಚಿನ ಸಮಯ ನೀಡುವುದಿಲ್ಲ. ಮಾತುಕತೆ ಫಲಿಸದಿದ್ದರೆ ತಕ್ಷಣವೇ ಬಲವಾದ ಮಿಲಿಟರಿ ಕಾರ್ಯಾಚರಣೆಗೆ ಮರಳುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಧ್ಯಸ್ಥಿಕೆ ವಹಿಸಿರುವ ರಾಷ್ಟ್ರಗಳು: ಪ್ರಸ್ತುತ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ಓಮನ್ ಪ್ರಮುಖವಾಗಿ ನೇರ ಹಾಗೂ ಪರೋಕ್ಷ ಮಾತುಕತೆಗಳ ಮಧ್ಯಸ್ಥಿಕೆ ವಹಿಸುತ್ತಿದೆ. ಇದರ ಜೊತೆಗೆ ಕತಾರ್, ಪಾಕಿಸ್ತಾನ, ಈಜಿಪ್ಟ್ ಹಾಗೂ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಹಿರಿಯ ಸಲಹೆಗಾರ ಜೇರೆಡ್ ಕುಶ್ನರ್ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಜಾಗತಿಕ ತೈಲ ಸಾಗಣೆಗೆ ಅತ್ಯಂತ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯನ್ನು ಸುಗಮ ಸಂಚಾರಕ್ಕೆ ಮುಕ್ತಗೊಳಿಸುವುದು ಮತ್ತು ಇರಾನ್ ಜೊತೆ ಹೊಸ ಪರಮಾಣು ಒಪ್ಪಂದ ರೂಪಿಸುವುದು ಈ ಮಾತುಕತೆಯ ಮುಖ್ಯ ಉದ್ದೇಶವಾಗಿದೆ.

ಮತ್ತಷ್ಟು ಓದಿ: ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್

ಮಿಲಿಟರಿ ಕ್ರಮ ಕೈಗೊಳ್ಳುವ ಮೊದಲು ಶಮನಕ್ಕೆ ಮತ್ತೊಂದು ಅವಕಾಶ ನೀಡಿ ಎಂದು ಮಧ್ಯಸ್ಥಿಕೆ ರಾಷ್ಟ್ರಗಳು ಕೋರಿದ ಹಿನ್ನೆಲೆಯಲ್ಲಿ ದಾಳಿಯನ್ನು ಅಮಾನತಿನಲ್ಲಿಡಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಒಂದೆಡೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿದ್ದರೂ, ಮಂಗಳವಾರ ಮುಂಜಾನೆ ಉತ್ತರ ಇರಾಕ್‌ನ ಎರ್ಬಿಲ್‌ನಲ್ಲಿರುವ ಅಮೆರಿಕ ಕಾನ್ಸುಲೇಟ್ (ರಾಯಭಾರ ಕಚೇರಿ) ಬಳಿ ಇರಾನ್ ಬೆಂಬಲಿತ ಕನಿಷ್ಠ ನಾಲ್ಕು ಡ್ರೋನ್‌ಗಳು ಭೀಕರ ದಾಳಿ ನಡೆಸಿವೆ.

ದಾಳಿಯ ಪರಿಣಾಮವಾಗಿ ಖಲೀಫನ್ ಮತ್ತು ಸೊರಾನ್ ಪ್ರದೇಶಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಶಂಕಿತ ಇರಾನಿ ಡ್ರೋನ್ ದಾಳಿಗೆ ತಕ್ಷಣವೇ ತಿರುಗೇಟು ನೀಡಿದ ಅಮೆರಿಕ, ಎರ್ಬಿಲ್ ಆಕಾಶಭಾಗದಲ್ಲಿ 10 ಕ್ಕೂ ಹೆಚ್ಚು ಯುಎಸ್ ಯುದ್ಧವಿಮಾನಗಳು ಮತ್ತು ಡ್ರೋನ್‌ಗಳನ್ನು ಗಸ್ತು ತಿರುಗಲು ನಿಯೋಜಿಸಿದೆ.

ಇರಾನ್ ಮತ್ತು ಅಮೆರಿಕ ನಡುವಿನ ಈ ಸಂಘರ್ಷ ಶಮನದ ಸೂಚನೆ ಸಿಗುತ್ತಿದ್ದಂತೆಯೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್‌ಗೆ 92 ಡಾಲರ್‌ಗೆ ಇಳಿಕೆಯಾಗಿದ್ದವು. ಆದರೆ ಇರಾಕ್‌ನಲ್ಲಿ ಮತ್ತೆ ಡ್ರೋನ್ ದಾಳಿಗಳು ವರದಿಯಾಗಿರುವುದರಿಂದ ಇಂಧನ ಮಾರುಕಟ್ಟೆಯಲ್ಲಿ ಮತ್ತೆ ಅನಿಶ್ಚಿತತೆ ಮೂಡುವ ಲಕ್ಷಣಗಳು ಕಂಡುಬರುತ್ತಿವ ಮಧ್ಯಪ್ರಾಚ್ಯದಲ್ಲಿ ಯುದ್ಧ ಸಂಪೂರ್ಣವಾಗಿ ಭುಗಿಲೆದ್ದರೆ ಜಾಗತಿಕ ಪೂರೈಕೆ ಸರಪಳಿ ಹಾಗೂ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರುವ ಭೀತಿಯಿಂದಾಗಿ ಜಾಗತಿಕ ನಾಯಕರು ರಾಜತಾಂತ್ರಿಕ ಪರಿಹಾರಕ್ಕೆ ತೀವ್ರ ಒತ್ತಡ ಹೇರುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!