AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ನಾನು ಇಲ್ಲದೇ ಹೋಗಿದ್ದರೆ ನೀವು ಜೈಲಿನಲ್ಲಿ ಇರುತ್ತಿದ್ದಿರಿ, ಈಗ ಎಲ್ಲರೂ ನಿಮ್ಮನ್ನು ದ್ವೇಷಿಸುತ್ತಿದ್ದಾರೆ, ನೆತನ್ಯಾಹು ಕೆಣಕಿದ ಟ್ರಂಪ್

ಡೊನಾಲ್ಡ್ ಟ್ರಂಪ್ ಅವರ ನೇರ ಹಸ್ತಕ್ಷೇಪದಿಂದ ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಐತಿಹಾಸಿಕ ಕದನ ವಿರಾಮ ಏರ್ಪಟ್ಟಿದೆ. ಪ್ರಧಾನಿ ನೆತನ್ಯಾಹು ಅವರೊಂದಿಗಿನ ಕಠಿಣ ಮಾತುಕತೆಗಳ ನಂತರವೂ, ಇಸ್ರೇಲ್ ಸೈನಿಕರನ್ನು ವಾಪಸ್ ಕರೆಸಿಕೊಂಡಿತು. ಹಿಜ್ಬುಲ್ಲಾ ಕೂಡ ಎಲ್ಲಾ ದಾಳಿಗಳನ್ನು ನಿಲ್ಲಿಸಲು ಒಪ್ಪಿದೆ. ಈ ರಾಜತಾಂತ್ರಿಕ ಯಶಸ್ಸು ಪಶ್ಚಿಮ ಏಷ್ಯಾದಲ್ಲಿ ಶಾಂತಿಯನ್ನು ಮರುಸ್ಥಾಪಿಸಿದೆ, ಯುದ್ಧದ ಭೀತಿಯನ್ನು ದೂರ ಮಾಡಿದೆ.

ಅಂದು ನಾನು ಇಲ್ಲದೇ ಹೋಗಿದ್ದರೆ ನೀವು ಜೈಲಿನಲ್ಲಿ ಇರುತ್ತಿದ್ದಿರಿ, ಈಗ ಎಲ್ಲರೂ ನಿಮ್ಮನ್ನು ದ್ವೇಷಿಸುತ್ತಿದ್ದಾರೆ,  ನೆತನ್ಯಾಹು ಕೆಣಕಿದ ಟ್ರಂಪ್
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Jun 02, 2026 | 9:41 AM

Share

ವಾಷಿಂಗ್ಟನ್, ಜೂನ್ 02: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ನೇರ ಹಸ್ತಕ್ಷೇಪ ಮತ್ತು ಕಟ್ಟುನಿಟ್ಟಿನ ನಿಲುವಿನಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಭಾರಿ ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ. ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘಟನೆಗಳು ಪರಸ್ಪರ ದಾಳಿಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಒಪ್ಪಿಕೊಂಡಿವೆ. ಅದಕ್ಕೂ ಮುನ್ನ  ನಾನು ಇಲ್ಲದೇ ಇದ್ದಿದ್ದರೆ ನೀವು ಜೈಲಿನಲ್ಲಿ ಇರುತ್ತಿದ್ದಿರಿ, ನಾನು ನಿಮ್ಮನ್ನು ಉಳಿಸಿದ್ದೆ ಎಂದು ಇಸ್ರೇಲಿ ನಾಯಕನ ಭ್ರಷ್ಟಾಚಾರ ವಿಚಾರಣೆಯ ಸಮಯದಲ್ಲಿ ಅವರು ಕೊಟ್ಟ ಬೆಂಬಲದ ಬಗ್ಗೆ ಟ್ರಂಪ್ ಮಾತನಾಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರಂಭದಲ್ಲಿ, ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿದ್ದ ನಿರಂತರ ಮಿಲಿಟರಿ ದಾಳಿಗಳು ಮತ್ತು ನಾಗರಿಕ ಸಾವುನೋವುಗಳ ಬಗ್ಗೆ ಟ್ರಂಪ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆದ ಮಾತುಕತೆಯಲ್ಲಿ, ಇಸ್ರೇಲ್‌ನ ಈ ಕ್ರಮಗಳು ದೇಶವನ್ನು ಜಾಗತಿಕವಾಗಿ ಒಂಟಿಯಾಗಿಸುತ್ತವೆ ಮತ್ತು ಇರಾನ್ ಜೊತೆಗಿನ ಅಮೆರಿಕದ ಮಾತುಕತೆಗಳಿಗೆ ಅಡ್ಡಿಪಡಿಸುತ್ತವೆ ಎಂದು ಟ್ರಂಪ್ ಅತ್ಯಂತ ಕಠಿಣ ಪದಗಳಲ್ಲಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿತ್ತು. ಆದರೆ, ಈ ಎಲ್ಲಾ ಬಿರುಸಿನ ಮಾತುಕತೆಗಳ ಬಳಿಕ ಪರಿಸ್ಥಿತಿ ತಿಳಿಯಾಗಿದ್ದು, ಶಾಂತಿ ಸ್ಥಾಪನೆಯಾಗಿದೆ.

ಟ್ರಂಪ್ ಸಂಧಾನದ ಪ್ರಮುಖ ಮುಖ್ಯಾಂಶಗಳು ಇಸ್ರೇಲ್ ಪಡೆಗಳ ವಾಪಸಾತಿ: ಪ್ರಧಾನಿ ನೆತನ್ಯಾಹು ಅವರೊಂದಿಗೆ ಅತ್ಯಂತ ಯಶಸ್ವಿ ಮಾತುಕತೆ ನಡೆದಿದ್ದು, ಇಸ್ರೇಲ್ ಇನ್ನು ಮುಂದೆ ಬೈರುತ್‌ಗೆ ಯಾವುದೇ ಸೈನಿಕರನ್ನು ಕಳುಹಿಸುವುದಿಲ್ಲ ಮತ್ತು ಈಗಾಗಲೇ ಗಡಿಯಲ್ಲಿದ್ದ ಸೈನಿಕರನ್ನು ವಾಪಸ್ ಕರೆಸಿಕೊಳ್ಳಲಾಗಿದೆ.

ಮತ್ತಷ್ಟು ಓದಿ: ‘ನಮಗೆ ಬೇಕಾದ್ದು ದಕ್ಕದೇ ಹೋದರೆ ಬೇರೆ ಮಾರ್ಗದಲ್ಲಿ ಕೊನೆಗಾಣಿಸಬೇಕಾಗುತ್ತದೆ’- ಇರಾನ್​ಗೆ ಟ್ರಂಪ್ ವಾರ್ನಿಂಗ್

ಹಿಜ್ಬುಲ್ಲಾ ಕದನ ವಿರಾಮ: ಉನ್ನತ ಪ್ರತಿನಿಧಿಗಳ ಮೂಲಕ ಟ್ರಂಪ್ ಅವರು ಹಿಜ್ಬುಲ್ಲಾ ಸಂಘಟನೆಯೊಂದಿಗೂ ನೇರ ಸಂಪರ್ಕ ಸಾಧಿಸಿದ್ದು, ಅವರು ಕೂಡ ಇಸ್ರೇಲ್ ಮೇಲಿನ ಎಲ್ಲಾ ರೀತಿಯ ಶೂಟಿಂಗ್ ಮತ್ತು ದಾಳಿಗಳನ್ನು ತಕ್ಷಣದಿಂದಲೇ ನಿಲ್ಲಿಸಲು ಒಪ್ಪಿಗೆ ಸೂಚಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಪೋಸ್ಟ್ ತಮ್ಮ ‘ಟ್ರುತ್ ಸೋಶಿಯಲ್’ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಟ್ರಂಪ್, ಇಸ್ರೇಲ್ ಪ್ರಧಾನಿ ಬೀಬಿ ನೆತನ್ಯಾಹು ಅವರೊಂದಿಗೆ ನಾನು ಬಹಳ ಫಲಪ್ರದವಾದ ಮಾತುಕತೆ ನಡೆಸಿದ್ದೇನೆ. ಬೈರುತ್‌ಗೆ ಇನ್ನು ಯಾವುದೇ ಸೈನಿಕರು ಹೋಗುವುದಿಲ್ಲ. ಅದೇ ರೀತಿ ಹಿಜ್ಬುಲ್ಲಾ ಕೂಡ ಎಲ್ಲಾ ದಾಳಿಗಳನ್ನು ನಿಲ್ಲಿಸಲು ಒಪ್ಪಿಕೊಂಡಿದೆ. ಇಸ್ರೇಲ್ ಅವರ ಮೇಲೆ ದಾಳಿ ಮಾಡುವುದಿಲ್ಲ ಮತ್ತು ಅವರು ಇಸ್ರೇಲ್ ಮೇಲೆ ದಾಳಿ ಮಾಡುವುದಿಲ್ಲ, ಎಂದು ತಿಳಿಸಿದ್ದಾರೆ.

ಈ ಮಹತ್ವದ ಒಪ್ಪಂದದಿಂದಾಗಿ ಲೆಬನಾನ್ ಮತ್ತು ಇಸ್ರೇಲ್ ಗಡಿಯಲ್ಲಿ ದೀರ್ಘಕಾಲದಿಂದ ಉಂಟಾಗಿದ್ದ ಯುದ್ಧದ ಭೀತಿ ದೂರವಾಗಿದ್ದು, ಪ್ರಾದೇಶಿಕ ಶಾಂತಿ ಪುನಃಸ್ಥಾಪನೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ