AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗರೂಕರಾಗಿರಿ ಇಲ್ಲದಿದ್ದರೆ ರಣಾಂಗಣದಲ್ಲಿ ನೀವು ಒಂಟಿಯಾಗ್ತೀರಿ, ನೆತನ್ಯಾಹುಗೆ ಟ್ರಂಪ್ ಎಚ್ಚರಿಕೆ

ಅಧ್ಯಕ್ಷ ಟ್ರಂಪ್ ಅವರ ನೇರ ಮಧ್ಯಪ್ರವೇಶದಿಂದ ಇಸ್ರೇಲ್ ಮತ್ತು ಇರಾನ್ ನಡುವೆ ಸಂಭವಿಸಬಹುದಾಗಿದ್ದ ಭೀಕರ ಯುದ್ಧ ತಪ್ಪಿದೆ. ನೆತನ್ಯಾಹುವಿಗೆ 'ನೀವು ಒಬ್ಬಂಟಿಯಾಗ್ತೀರಿ' ಎಂದು ಟ್ರಂಪ್ ನೀಡಿದ ಎಚ್ಚರಿಕೆಯಿಂದ ಇಸ್ರೇಲ್ ಪ್ರತೀಕಾರದ ದಾಳಿಯ ನಿರ್ಧಾರದಿಂದ ಹಿಂದೆ ಸರಿದಿದೆ. ಈಗ ಗಡಿಭಾಗದಲ್ಲಿ ಶಾಂತಿ ಮರಳಿದ್ದು, ರಾಜತಾಂತ್ರಿಕ ಮಾತುಕತೆಗಳಿಗೆ ಆದ್ಯತೆ ನೀಡಲಾಗುತ್ತಿದೆ, ಜಾಗತಿಕ ಸಮುದಾಯದಲ್ಲಿ ನಿರಾಳತೆ ತಂದಿದೆ.

ಜಾಗರೂಕರಾಗಿರಿ ಇಲ್ಲದಿದ್ದರೆ ರಣಾಂಗಣದಲ್ಲಿ ನೀವು ಒಂಟಿಯಾಗ್ತೀರಿ, ನೆತನ್ಯಾಹುಗೆ ಟ್ರಂಪ್ ಎಚ್ಚರಿಕೆ
ಡೊನಾಲ್ಡ್​ ಟ್ರಂಪ್-ನೆತನ್ಯಾಹುImage Credit source: NPR
ನಯನಾ ರಾಜೀವ್
|

Updated on: Jun 09, 2026 | 8:09 AM

Share

ಟೆಲ್ ಅವಿವ್, ಜೂನ್ 09: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಭೀಕರ ಯುದ್ಧದ ಮುನ್ಸೂಚನೆ ನೀಡಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯು, ಜಾಗತಿಕ ನಾಯಕರ ತತ್‌ಕ್ಷಣದ ರಾಜತಾಂತ್ರಿಕ ಹಸ್ತಕ್ಷೇಪದಿಂದಾಗಿ ಸದ್ಯಕ್ಕೆ ಶಾಂತಿಯುತ ನಿಯಂತ್ರಣಕ್ಕೆ ಬಂದಿದೆ. ಇರಾನ್ ವಿರುದ್ಧ ಇಸ್ರೇಲ್ ಸಿದ್ಧಪಡಿಸುತ್ತಿದ್ದ ಬೃಹತ್ ಮಟ್ಟದ ಪ್ರತೀಕಾರದ ದಾಳಿಯ ಅಲೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ನೇರ ಹಾಗೂ ಪ್ರಭಾವಶಾಲಿ ಮಾತುಕತೆಯು ಯಶಸ್ವಿಯಾಗಿ ತಡೆದಿದೆ.

ಯುದ್ಧದ ಹಾದಿಯನ್ನು ಬದಿಗಿಟ್ಟು ಪ್ರಾದೇಶಿಕ ಸ್ಥಿರತೆ ಮತ್ತು ಸೌಹಾರ್ದತೆಗೆ ಆದ್ಯತೆ ನೀಡುವಂತೆ ಟ್ರಂಪ್ ನೀಡಿದ ಕಟ್ಟುನಿಟ್ಟಿನ ಸಂದೇಶಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಜಾಗತಿಕ ಮಟ್ಟದಲ್ಲಿ ದೊಡ್ಡ ನಿರಾಳತೆಯನ್ನು ತಂದಿದೆ.

ಜಾಗರೂಕರಾಗಿರಿ, ಟ್ರಂಪ್ ನೀಡಿದ ಬಲವಾದ ಮುನ್ನೆಚ್ಚರಿಕೆ ಅಮೆರಿಕದ ಪ್ರತಿಷ್ಠಿತ ‘ಆಕ್ಸಿಯಾಸ್’ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ನಡೆಸಿದ ರಹಸ್ಯ ದೂರವಾಣಿ ಸಂಭಾಷಣೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಟ್ರಂಪ್ ಅವರು ಇಸ್ರೇಲ್ ಇನ್ನು ಮುಂದೆ ಏಕಪಕ್ಷೀಯವಾಗಿ ಮಿಲಿಟರಿ ಕ್ರಮ ತೆಗೆದುಕೊಳ್ಳಬಾರದು ಎಂದು ಒತ್ತಿಹೇಳಿದ್ದಾರೆ.

ಮತ್ತಷ್ಟು ಓದಿ: ಇಸ್ರೇಲ್-ಇರಾನ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಟ್ರಂಪ್ ಘೋಷಣೆ

ನಾನು ಅವರಿಗೆ ನೇರವಾಗಿ ಕರೆ ಮಾಡಿ ಹೇಳಿದೆ, ನೀವು ಈ ಪರಿಸ್ಥಿತಿಯಲ್ಲಿ ಅತ್ಯಂತ ಜಾಗರೂಕರಾಗಿರಬೇಕು. ಒಂದು ವೇಳೆ ನೀವು ಇರಾನ್ ಜೊತೆ ಮತ್ತೊಂದು ವ್ಯಾಪಕ ಸಂಘರ್ಷವನ್ನು ಹುಟ್ಟುಹಾಕಿದರೆ, ಶೀಘ್ರದಲ್ಲೇ ನೀವು ಈ ಯುದ್ಧದಲ್ಲಿ ಒಬ್ಬಂಟಿಯಾಗಿರಬೇಕಾಗುತ್ತದೆ ಎಂದು ಹೇಳಿದ್ದಾಗಿ ಟ್ರಂಪ್ ಹೇಳಿಕೊಂಡಿದ್ದಾರೆ.

ಆರಂಭದಲ್ಲಿ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಮೂಡಿದರೂ, ಅಂತಿಮವಾಗಿ ಇರಾನ್ ಹೆಚ್ಚುವರಿ ದಾಳಿಗಳನ್ನು ನಡೆಸದಂತೆ ತಡೆಯುವ ರಾಜತಾಂತ್ರಿಕ ಚೌಕಟ್ಟಿಗೆ ನೆತನ್ಯಾಹು ಒಪ್ಪಿಗೆ ನೀಡಿದರು.

ಉತ್ತರ ಇಸ್ರೇಲ್ ಮೇಲೆ ಸಾವಿರಾರು ಹೋರಾಟಗಾರರನ್ನು ಬಳಸಿ ಭಾರಿ ಕ್ಷಿಪಣಿ ದಾಳಿ ನಡೆಸಲು ಹಿಜ್ಬುಲ್ಲಾ ರೂಪಿಸಿದ್ದ ಬೃಹತ್ ಸಂಚನ್ನು ಇಸ್ರೇಲಿ ಪಡೆಗಳು ಅತ್ಯಂತ ಯಶಸ್ವಿಯಾಗಿ ನಿಗ್ರಹಿಸಿವೆ. ಇರಾನ್ ತನ್ನ ಪರಮಾಣು ಶಸ್ತ್ರಾಸ್ತ್ರ ಕಾರ್ಯಕ್ರಮವನ್ನು ಮುಂದುವರೆಸದಂತೆ ಇಸ್ರೇಲ್‌ನ ಪೂರ್ವಭಾವಿ ಕಾರ್ಯಾಚರಣೆಗಳು ತಡೆದಿವೆ ಎಂದು ನೆತನ್ಯಾಹು ವಿವರಿಸಿದ್ದಾರೆ.

ಪ್ರಸ್ತುತ ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕ್ಷಿಪಣಿ ವಿನಿಮಯಗಳು ಸಂಪೂರ್ಣವಾಗಿ ನಿಂತಿದ್ದು, ಗಡಿ ಭಾಗಗಳಲ್ಲಿ ಶಾಂತಿ ಮರಳುತ್ತಿದೆ. ಭವಿಷ್ಯದಲ್ಲಿ ಯಾವುದೇ ಆಕ್ರಮಣ ಎದುರಾದರೂ ಇಸ್ರೇಲ್ ಸನ್ನದ್ಧವಾಗಿದೆ ಎಂದು ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದರೂ, ಸದ್ಯಕ್ಕೆ ಯುದ್ಧದ ಕಾರ್ಮೋಡ ಸರಿದು ರಾಜತಾಂತ್ರಿಕ ಮಾತುಕತೆಗಳಿಗೆ ಹೆಚ್ಚಿನ ಆದ್ಯತೆ ಸಿಗುತ್ತಿರುವುದು ವಿಶ್ವ ಸಂಸ್ಥೆ ಹಾಗೂ ಜಾಗತಿಕ ಸಮುದಾಯದ ಪ್ರಶಂಸೆಗೆ ಪಾತ್ರವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು