AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tsunami: ಆಗ್ನೇಯ ಏಷ್ಯಾದಲ್ಲಿ 6.1 ತೀವ್ರತೆಯ ಭೂಕಂಪನ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ

ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ವಿಭಜನೆಯಾಗಿರುವ ಟಿಮೋರ್ ದ್ವೀಪದ ಪೂರ್ವ ತುದಿಯಿಂದ 51.4 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

Tsunami: ಆಗ್ನೇಯ ಏಷ್ಯಾದಲ್ಲಿ 6.1 ತೀವ್ರತೆಯ ಭೂಕಂಪನ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ
ಸುನಾಮಿ ಭೀತಿImage Credit source: Live Mint
TV9 Web
| Edited By: |

Updated on: May 27, 2022 | 12:17 PM

Share

ನವದೆಹಲಿ: ಪೂರ್ವ ಟಿಮೋರ್ ಕರಾವಳಿಯಲ್ಲಿ ಇಂದು (ಶುಕ್ರವಾರ) 6.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುನಾಮಿ (Tsunami)  ಉಂಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ವಿಭಜನೆಯಾಗಿರುವ ಟಿಮೋರ್ ದ್ವೀಪದ ಪೂರ್ವ ತುದಿಯಿಂದ 51.4 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಹೀಗಾಗಿ, ಹಿಂದೂ ಮಹಾಸಾಗರದ ಸುನಾಮಿ ಎಚ್ಚರಿಕೆ ಮತ್ತು ತಗ್ಗಿಸುವಿಕೆ ವ್ಯವಸ್ಥೆ (IOTWMS) ಈ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಪೂರ್ವ ಟಿಮೋರ್ ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿ ನೆಲೆಸಿದೆ. ಇದು ಆಗಾಗ ಭೂಕಂಪ ಉಂಟಾಗಲು ಕಾರಣವಾಗುತ್ತದೆ. ಫೆಬ್ರವರಿಯಲ್ಲಿ ನೆರೆಯ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ 6.2 ತೀವ್ರತೆಯ ಭೂಕಂಪ ಉಂಟಾಗಿತ್ತು. ಈ ಭೂಕಂಪದಲ್ಲಿ 12 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ

2004ರಲ್ಲಿ 9.1 ತೀವ್ರತೆಯ ಭೂಕಂಪವು ಸುಮಾತ್ರಾ ಕರಾವಳಿಯನ್ನು ಅಪ್ಪಳಿಸಿತು. ಪೂರ್ವ ಟಿಮೋರ್ 1.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಇದು ಆಗ್ನೇಯ ಏಷ್ಯಾದ ಅತ್ಯಂತ ಕಿರಿಯ ದೇಶವಾಗಿದೆ. ಈ ದೇಶ ಸ್ವಾತಂತ್ರ್ಯದ 20ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಹಿಂದಿನ ಪೋರ್ಚುಗೀಸ್ ವಸಾಹತು 24 ವರ್ಷಗಳ ಆಕ್ರಮಣದ ನಂತರ 2002ರಲ್ಲಿ ಇಂಡೋನೇಷ್ಯಾದಿಂದ ಸ್ವತಂತ್ರವಾಯಿತು.

ವ್ಯಾಪಕವಾದ ಪ್ರವಾಹವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿರುವ ಸುನಾಮಿ ಸನ್ನಿಹಿತವಾದಾಗ ಸುನಾಮಿ ಎಚ್ಚರಿಕೆಯನ್ನು ನೀಡಲಾಗುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ