AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tsunami Warning: ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

ಇತ್ತೀಚಿನ ದಿನಗಳಲ್ಲಿ ಇಂಡೋನೇಷ್ಯಾದಲ್ಲಿ ಆಗಾಗ ಭೂಕಂಪ ವರದಿಯಾಗುತ್ತಲೇ ಇದೆ.

Tsunami Warning: ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ
ಭೂಕಂಪ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 11, 2022 | 7:36 AM

Share

ಜಕಾರ್ತಾ: ಇಂಡೋನೇಷ್ಯಾದ ಈಸ್ಟ್​ ಪಪುವಾ ಮತ್ತು ಆಸ್ಟ್ರೇಲಿಯಾದ ನ್ಯೂ ಗಿನಿಯಾ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.6 ರಷ್ಟು ಇತ್ತು. ಭೂಕಂಪದ ನಂತರ ಅಮೆರಿಕದ ಜಿಯೊಲಾಜಿಕಲ್ ಸರ್ವೇ ಸಂಸ್ಥೆಯು ಸುನಾಮಿ ಎಚ್ಚರಿಕೆಯ ಸಂದೇಶ ನೀಡಿದೆ. ‘ಕೈನಂಟು ಪಟ್ಟಣಕ್ಕೆ 67 ಕಿಲೋಮೀಟರ್ ದೂರದಲ್ಲಿ ಭೂಮಿಯ 61 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಸುತ್ತಲ 1,000 ಕಿಮೀ ವ್ಯಾಪ್ತಿಯಲ್ಲಿ ಸುನಾಮಿ ಅಪ್ಪಳಿಸಬಹುದು ಎಂದು ಜಿಯಾಲಾಜಿಕಲ್ ಸರ್ವೇ ಎಚ್ಚರಿಸಿದೆ.

ಇಂಡೋನೇಷ್ಯಾದ ವೆಸ್ಟ್​ ಪಪುವಾ ಪ್ರಾಂತ್ಯದಲ್ಲಿ ನಿನ್ನೆಯಷ್ಟೇ (ಸೆ.10) 6.2 ಹಾಗೂ 5.5 ತೀವ್ರತೆಯ ಎರಡು ಭೂಕಂಪಗಳು ವರದಿಯಾಗಿದ್ದವು. ಭೂಮಿಯಿಂದ 16 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರವಿತ್ತು. ನಿನ್ನೆಯ ಭೂಕಂಪದಿಂದ ಸುನಾಮಿ ಆತಂಕ ಇಲ್ಲ ಎಂದು ಇಂಡೋನೇಷ್ಯಾದ ಹವಾಮಾನ ಇಲಾಖೆ ಹೇಳಿತ್ತು. ಆಸ್ತಿಪಾಸ್ತಿಗೆ ಆದ ಹಾನಿ ಹಾಗೂ ಜೀವಹಾನಿಯ ಬಗ್ಗೆಯೂ ಯಾವುದೆ ಮಾಹಿತಿ ಲಭ್ಯವಾಗಿರಲಿಲ್ಲ.

ಇತ್ತೀಚಿನ ದಿನಗಳಲ್ಲಿ ಇಂಡೋನೇಷ್ಯಾದಲ್ಲಿ ಆಗಾಗ ಭೂಕಂಪ ವರದಿಯಾಗುತ್ತಲೇ ಇದೆ. ಸುಮಾರು 2.70 ಕೋಟಿ ಜನಸಂಖ್ಯೆಯ ದೇಶದಲ್ಲಿ ಜ್ವಾಲಾಮುಖಿ ಮತ್ತು ಸುನಾಮಿಗಳೂ ಆಗಾಗ ವರದಿಯಾಗುತ್ತಿವೆ. ಇಂಡೋನೇಷ್ಯಾ ದೇಶವು ಭೌಗೋಳಿಕವಾಗಿ ‘ಪೆಸಿಫಿಕ್ ರಿಂಗ್ ಆಫ್ ಫೈರ್’ ವಲಯದಲ್ಲಿ ಬರುತ್ತದೆ. ಇಲ್ಲಿ ಭೂಗರ್ಭದಲ್ಲಿರುವ ವೈವಿಧ್ಯಮಯ ಟೆಕ್ಟೊನಿಕ್ ಪ್ಲೇಟ್​ಗಳು ಸಂಧಿಸುತ್ತವೆ. ಇದರಿಂದ ಸರಪಳಿ ಪ್ರಕ್ರಿಯೆಗಳು ನಡೆದು, ಹಲವು ಸಂದರ್ಭದಲ್ಲಿ ಭೂಕಂಪಕ್ಕೆ ಕಾರಣವಾಗುತ್ತದೆ. ಇಂಡೋನೇಷ್ಯಾದ ಪಾಪುವಾ ಪ್ರದೇಶದಲ್ಲಿ ಜನಸಂಖ್ಯೆ ವಿರಳವಾಗಿದೆ. ಹೀಗಾಗಿ ಹೆಚ್ಚಿನ ಸಾವುನೋವು, ಅಪಾಯ ವರದಿಯಾಗಿಲ್ಲ.

Published On - 7:36 am, Sun, 11 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ