AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tsunami Warning: ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

ಇತ್ತೀಚಿನ ದಿನಗಳಲ್ಲಿ ಇಂಡೋನೇಷ್ಯಾದಲ್ಲಿ ಆಗಾಗ ಭೂಕಂಪ ವರದಿಯಾಗುತ್ತಲೇ ಇದೆ.

Tsunami Warning: ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ
ಭೂಕಂಪ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 11, 2022 | 7:36 AM

Share

ಜಕಾರ್ತಾ: ಇಂಡೋನೇಷ್ಯಾದ ಈಸ್ಟ್​ ಪಪುವಾ ಮತ್ತು ಆಸ್ಟ್ರೇಲಿಯಾದ ನ್ಯೂ ಗಿನಿಯಾ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.6 ರಷ್ಟು ಇತ್ತು. ಭೂಕಂಪದ ನಂತರ ಅಮೆರಿಕದ ಜಿಯೊಲಾಜಿಕಲ್ ಸರ್ವೇ ಸಂಸ್ಥೆಯು ಸುನಾಮಿ ಎಚ್ಚರಿಕೆಯ ಸಂದೇಶ ನೀಡಿದೆ. ‘ಕೈನಂಟು ಪಟ್ಟಣಕ್ಕೆ 67 ಕಿಲೋಮೀಟರ್ ದೂರದಲ್ಲಿ ಭೂಮಿಯ 61 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಸುತ್ತಲ 1,000 ಕಿಮೀ ವ್ಯಾಪ್ತಿಯಲ್ಲಿ ಸುನಾಮಿ ಅಪ್ಪಳಿಸಬಹುದು ಎಂದು ಜಿಯಾಲಾಜಿಕಲ್ ಸರ್ವೇ ಎಚ್ಚರಿಸಿದೆ.

ಇಂಡೋನೇಷ್ಯಾದ ವೆಸ್ಟ್​ ಪಪುವಾ ಪ್ರಾಂತ್ಯದಲ್ಲಿ ನಿನ್ನೆಯಷ್ಟೇ (ಸೆ.10) 6.2 ಹಾಗೂ 5.5 ತೀವ್ರತೆಯ ಎರಡು ಭೂಕಂಪಗಳು ವರದಿಯಾಗಿದ್ದವು. ಭೂಮಿಯಿಂದ 16 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರವಿತ್ತು. ನಿನ್ನೆಯ ಭೂಕಂಪದಿಂದ ಸುನಾಮಿ ಆತಂಕ ಇಲ್ಲ ಎಂದು ಇಂಡೋನೇಷ್ಯಾದ ಹವಾಮಾನ ಇಲಾಖೆ ಹೇಳಿತ್ತು. ಆಸ್ತಿಪಾಸ್ತಿಗೆ ಆದ ಹಾನಿ ಹಾಗೂ ಜೀವಹಾನಿಯ ಬಗ್ಗೆಯೂ ಯಾವುದೆ ಮಾಹಿತಿ ಲಭ್ಯವಾಗಿರಲಿಲ್ಲ.

ಇತ್ತೀಚಿನ ದಿನಗಳಲ್ಲಿ ಇಂಡೋನೇಷ್ಯಾದಲ್ಲಿ ಆಗಾಗ ಭೂಕಂಪ ವರದಿಯಾಗುತ್ತಲೇ ಇದೆ. ಸುಮಾರು 2.70 ಕೋಟಿ ಜನಸಂಖ್ಯೆಯ ದೇಶದಲ್ಲಿ ಜ್ವಾಲಾಮುಖಿ ಮತ್ತು ಸುನಾಮಿಗಳೂ ಆಗಾಗ ವರದಿಯಾಗುತ್ತಿವೆ. ಇಂಡೋನೇಷ್ಯಾ ದೇಶವು ಭೌಗೋಳಿಕವಾಗಿ ‘ಪೆಸಿಫಿಕ್ ರಿಂಗ್ ಆಫ್ ಫೈರ್’ ವಲಯದಲ್ಲಿ ಬರುತ್ತದೆ. ಇಲ್ಲಿ ಭೂಗರ್ಭದಲ್ಲಿರುವ ವೈವಿಧ್ಯಮಯ ಟೆಕ್ಟೊನಿಕ್ ಪ್ಲೇಟ್​ಗಳು ಸಂಧಿಸುತ್ತವೆ. ಇದರಿಂದ ಸರಪಳಿ ಪ್ರಕ್ರಿಯೆಗಳು ನಡೆದು, ಹಲವು ಸಂದರ್ಭದಲ್ಲಿ ಭೂಕಂಪಕ್ಕೆ ಕಾರಣವಾಗುತ್ತದೆ. ಇಂಡೋನೇಷ್ಯಾದ ಪಾಪುವಾ ಪ್ರದೇಶದಲ್ಲಿ ಜನಸಂಖ್ಯೆ ವಿರಳವಾಗಿದೆ. ಹೀಗಾಗಿ ಹೆಚ್ಚಿನ ಸಾವುನೋವು, ಅಪಾಯ ವರದಿಯಾಗಿಲ್ಲ.

Published On - 7:36 am, Sun, 11 September 22

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?