AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mali Gold Mine Collapse: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ, 70 ಮಂದಿ ಸಾವು

ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು 70 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಣಿಕುಸಿತದ ಅಪಾಯವಿರುವ ಪ್ರದೇಶದಲ್ಲೇ ಈ ಅವಘಡ ಸಂಭವಿಸಿದೆ. ನೈಋತ್ಯ ಕೌಲಿಕೊರೊ ಪ್ರದೇಶದ ಕಂಗಾಬಾ ಜಿಲ್ಲೆಯಲ್ಲಿ ಹಲವಾರು ಗಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.

Mali Gold Mine Collapse: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ, 70 ಮಂದಿ ಸಾವು
ಚಿನ್ನದಗಣಿImage Credit source: NDTV
ನಯನಾ ರಾಜೀವ್
|

Updated on: Jan 25, 2024 | 9:05 AM

Share

ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ(Gold Mine) ಕುಸಿದು 70 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಣಿಕುಸಿತದ ಅಪಾಯವಿರುವ ಪ್ರದೇಶದಲ್ಲೇ ಈ ಅವಘಡ ಸಂಭವಿಸಿದೆ. ನೈಋತ್ಯ ಕೌಲಿಕೊರೊ ಪ್ರದೇಶದ ಕಂಗಾಬಾ ಜಿಲ್ಲೆಯಲ್ಲಿ ಹಲವಾರು ಗಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಅಪಘಾತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ ಮಾಲಿ ಸಚಿವಾಲಯವು ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಕೇಳಿಕೊಂಡಿದೆ.

ಸುರಕ್ಷತಾ ಮಾನದಂಡಗಳನ್ನು ಅನುಸರಿಸದೆ ಗಣಿಗಾರರು ಗ್ಯಾಲರಿಯನ್ನು ಅಗೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಸಚಿವಾಲಯ ವಕ್ತಾರ ಬೇ ಕೌಲಿಬಾಲಿ ಹೇಳಿದ್ದಾರೆ.

ಇದಕ್ಕೂ ಮೊದಲು ಸುರಕ್ಷತಾ ಮಾನದಂಡಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಹಲವು ಬಾರಿ ಕಾರ್ಮಿಕರಿಗೆ ಸಲಹೆ ನೀಡಲಾಗಿತ್ತು ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆ ಅಲ್​ಜಜೀರಾ ವರದಿ ಪ್ರಕಾರ, ಗಣಿಗಾರಿಕೆ ಸ್ಥಳಗಳ ಸಮೀಪ ವಾಸಿಸುವ ಸಮುದಾಯಗಳು ಹಾಗೂ ಚಿನ್ನದ ಗಣಿಯಲ್ಲಿ ಕೆಲಸ ಮಾಡುವವರು ಪ್ರಾಮಾಣಿಕವಾಗಿ ಸುರಕ್ಷತಾ ಮಾನದಂಡಗಳನ್ನು ಪೂರೈಸುವಂತೆ ಸರ್ಕಾರ ಮನವಿ ಮಾಡಿದೆ.

ಮತ್ತಷ್ಟು ಓದಿ:ಕೆಆರ್​​​​ಎಸ್ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ: ಕರ್ನಾಟಕ ಹೈಕೋರ್ಟ್ ಆದೇಶ

ವಿಶ್ವದ ಬಡ ದೇಶಗಳಲ್ಲಿ ಒಂದಾಗಿರುವ ಮಾಲಿ, ಆಫ್ರಿಕಾದ ಪ್ರಮುಖ ಚಿನ್ನದ ಉತ್ಪಾದಕರಲ್ಲಿ ಒಂದಾಗಿದೆ. ಈ ಪ್ರದೇಶದಲ್ಲಿ 200ಕ್ಕೂ ಅಧಿಕ ಕಾರ್ಮಿಕರಿದ್ದರು. ಹುಡುಕಾಟ ಮುಂದುವರೆದಿದೆ. ಮಾಲಿಯ ಗಣಿ ಸಚಿವಾಲಯ ಮಂಗಳವಾರ ಹೇಳಿಕೆಯಲ್ಲಿ ಹಲವಾರು ಗಣಿಗಾರರ ಸಾವನ್ನು ಘೋಷಿಸಿದೆ ಆದರೆ ನಿಖರವಾದ ಅಂಕಿಅಂಶಗಳನ್ನು ನೀಡಿಲ್ಲ. ಸಹೇಲ್ ಪ್ರದೇಶದಲ್ಲಿ ಚಿನ್ನದ ಗಣಿಗಾರಿಕೆ ತುಂಬಾ ಅಪಾಯಕಾರಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ