AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Blast ಇಸ್ತಾಂಬುಲ್‌ನಲ್ಲಿ ಬಾಂಬ್ ಇರಿಸಿದ್ದು ಸಿರಿಯಾದ ಮಹಿಳೆ: ಟರ್ಕಿ ಪೊಲೀಸ್

ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಈ ಬಾಂಬ್ ದಾಳಿಯ ಹಿಂದೆ ಭಯೋತ್ಪಾದನೆಯ ಕೈವಾಡದ ಶಂಕೆಯಿದೆ ಎಂದು ಹೇಳಿದ್ದರು. ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ.

Turkey Blast ಇಸ್ತಾಂಬುಲ್‌ನಲ್ಲಿ ಬಾಂಬ್ ಇರಿಸಿದ್ದು ಸಿರಿಯಾದ ಮಹಿಳೆ: ಟರ್ಕಿ ಪೊಲೀಸ್
ಇಸ್ತಾಂಬುಲ್ ಬಾಂಬ್ ಸ್ಫೋಟ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 14, 2022 | 2:22 PM

Share

ಟರ್ಕಿಯ ಇಸ್ತಾಂಬುಲ್‌ನಲ್ಲಿ(Turkey Blast) ನಡೆದ ಬಾಂಬ್ ಸ್ಫೋಟದ ರೂವಾರಿ ಸಿರಿಯಾದ ಮಹಿಳೆ ಎಂದು ಟರ್ಕಿ ಪೊಲೀಸರು ಹೇಳಿದ್ದಾರೆ. ಈ ಮಹಿಳೆ ಬಾಂಬ್ ಇರಿಸಿದ್ದಳು ಎಂದು ಪೊಲೀಸರು ಹೇಳಿರುವುದಾಗಿ ಎಎಫ್ ಪಿ ಸುದ್ದಿ ಸಂಸ್ಧೆ ವರದಿ ಮಾಡಿದೆ. ಟರ್ಕಿಯ ಇಸ್ತಾಂಬುಲ್‌ನ (Istanbul Blast) ಪ್ರಸಿದ್ಧ ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ನಲ್ಲಿ ಶನಿವಾರ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ದುರಂತದಲ್ಲಿ 6 ಜನರು ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದರು. ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ ಯಾವಾಗಲೂ ಪ್ರವಾಸಿಗರಿಂದ ತುಂಬಿರುವ ಸ್ಥಳವಾಗಿದ್ದರಿಂದ ಇದೇ ಪ್ರದೇಶವನ್ನು ಬಾಂಬ್ ಸ್ಫೋಟಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು.

ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಈ ಬಾಂಬ್ ದಾಳಿಯ ಹಿಂದೆ ಭಯೋತ್ಪಾದನೆಯ ಕೈವಾಡದ ಶಂಕೆಯಿದೆ ಎಂದು ಹೇಳಿದ್ದರು. ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಕಾರಣವಾದ ಶಂಕಿತನನ್ನು ಟರ್ಕಿಶ್ ಪೊಲೀಸರು ಬಂಧಿಸಿದ್ದಾರೆ ಎಂದು ಸರ್ಕಾರಿ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ: Istanbul Blast: ಟರ್ಕಿಯ ಇಸ್ತಾಂಬುಲ್​ನಲ್ಲಿ ಮಹಿಳಾ ಉಗ್ರರಿಂದ ಬಾಂಬ್ ಸ್ಫೋಟ; 6 ಜನ ಸಾವು, 81 ಮಂದಿಗೆ ಗಾಯ

“ಈ ಭೀಕರ ಭಯೋತ್ಪಾದಕ ದಾಳಿಗೆ ಕಾರಣರಾದವರ ವಿರುದ್ಧ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ” ಎಂದು ಟರ್ಕಿಶ್ ಅಧಿಕಾರಿಗಳು ಹೇಳಿದ್ದಾರೆ. ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ಮಹಿಳಾ ಭಯೋತ್ಪಾದಕರು ಶಾಪಿಂಗ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಿಸಿರುವ ಶಂಕೆ ಇದೆ ಎಂದು ಹೇಳಿದ್ದರು.

ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಗಳು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಹಿಳೆಯೊಬ್ಬರು ಸುಮಾರು 40 ನಿಮಿಷಗಳ ಕಾಲ ಬೆಂಚ್ ಮೇಲೆ ಕುಳಿತಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಆಕೆ ಈ ಬಾಂಬ್ ಸ್ಫೋಟ ನಡೆಯುವುದಕ್ಕೂ ಕೆಲವೇ ನಿಮಿಷಗಳ ಮೊದಲು ಆ ಜಾಗದಿಂದ ಹೊರಟುಹೋಗಿದ್ದಾರೆ. ಇಬ್ಬರು ಪುರುಷ ದಾಳಿಕೋರರು ಸಹ ಆ ಮಹಿಳೆಯೊಂದಿಗೆ ಸೇರಿ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು