AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿ ಭೂಕಂಪದಲ್ಲಿ 912 ಮಂದಿ ಸಾವು; ರಕ್ಷಣಾ ಕಾರ್ಯ, ವೈದ್ಯಕೀಯ ಸಹಾಯ ನೀಡಲಿದೆ ಭಾರತ

ವಿಶೇಷ ತರಬೇತಿ ಪಡೆದ ಶ್ವಾನದಳಗಳು, ವೈದ್ಯಕೀಯ ತಂಡಗಳು ಮತ್ತು ಅಗತ್ಯ ಉಪಕರಣಗಳನ್ನು ಹೊಂದಿರುವ 100 ಸಿಬ್ಬಂದಿಗಳನ್ನು ಒಳಗೊಂಡಿರುವ ಎನ್‌ಡಿಆರ್‌ಎಫ್‌ನ ಎರಡು ತಂಡಗಳನ್ನು ಭಾರತ ಟರ್ಕಿಗೆ ಕಳುಹಿಸಲಿದೆ.

Turkey Earthquake: ಟರ್ಕಿ ಭೂಕಂಪದಲ್ಲಿ 912 ಮಂದಿ ಸಾವು; ರಕ್ಷಣಾ ಕಾರ್ಯ, ವೈದ್ಯಕೀಯ ಸಹಾಯ ನೀಡಲಿದೆ ಭಾರತ
ಟರ್ಕಿ ಭೂಕಂಪ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Feb 06, 2023 | 7:05 PM

Share

7.8 ತೀವ್ರತೆಯ ಭೂಕಂಪವು(earthquake) ಟರ್ಕಿಯನ್ನು (Turkey) ನಡುಗಿಸಿದ ನಂತರ ಮತ್ತೊಂದು ಪ್ರಬಲ ಭೂಕಂಪವು ಪ್ರದೇಶದ ಹಲವಾರು ಪ್ರಾಂತ್ಯಗಳಲ್ಲಿ ಅನುಭವಕ್ಕೆ ಬಂದಿದೆ. ಈ ಹಲವಾರು ಕಟ್ಟಡಗಳು ನೆಲಸಮವಾಗಿವೆ ಎಂದು ವರದಿಗಳು ತಿಳಿಸಿವೆ. ನೂರ್ಡಗಿ ಪಟ್ಟಣದಿಂದ ಸುಮಾರು 26 ಕಿಲೋಮೀಟರ್ (16 ಮೈಲಿ) ದೂರದಲ್ಲಿರುವ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರ ಬಿಂದು ಇದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ ಇದು 18 ಕಿಲೋಮೀಟರ್ (11 ಮೈಲಿ) ಆಳದಲ್ಲಿ ಕೇಂದ್ರೀಕೃತವಾಗಿತ್ತು.ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಸಂಸ್ಥೆಯು ಕಹ್ರಮನ್ಮರಸ್ ಪ್ರಾಂತ್ಯದ ಪಜಾರ್ಸಿಕ್ ಪಟ್ಟಣದಲ್ಲಿ ಕೇಂದ್ರೀಕೃತವಾಗಿತ್ತು. ಯುರೋಪಿಯನ್ ಯೂನಿಯನ್ ರಕ್ಷಣಾ ತಂಡಗಳನ್ನು ಕಳುಹಿಸುತ್ತಿದೆ ಮತ್ತು ಟರ್ಕಿಗೆ ಹೆಚ್ಚಿನ ಸಹಾಯವನ್ನು ನೀಡುತ್ತಿದೆ ಎಂದು ವಿಪತ್ತು ನಿರ್ವಹಣಾ ಆಯುಕ್ತರು ತಿಳಿಸಿದ್ದಾರೆ.

“ನೆದರ್ಲ್ಯಾಂಡ್ಸ್ ಮತ್ತು ರೊಮೇನಿಯಾದ ತಂಡಗಳು ಈಗಾಗಲೇ ಅಲ್ಲಿಂದ ಹೊರಟಿವೆ.ಯುರೋಪಿಯನ್ ಒಕ್ಕೂಟದ ತುರ್ತು ಪ್ರತಿಕ್ರಿಯೆ ಸಮನ್ವಯ ಕೇಂದ್ರವು ಅವರ ನಿಯೋಜನೆಯನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಆಯುಕ್ತ ಜಾನೆಜ್ ಲೆನಾರ್ಸಿಕ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Turkey Earthquake: ಟರ್ಕಿಯಲ್ಲಿ ಪ್ರಬಲ ಭೂಕಂಪ: 7.8 ತೀವ್ರತೆ ದಾಖಲು

ಹುಡುಕಾಟ ಮತ್ತು ರಕ್ಷಣಾ ತಂಡಗಳು, ವೈದ್ಯಕೀಯ ತಂಡಗಳನ್ನು ಟರ್ಕಿಗೆ ಕಳುಹಿಸಲಿದೆ ಭಾರತ

ವಿಶೇಷ ತರಬೇತಿ ಪಡೆದ ಶ್ವಾನದಳಗಳು, ವೈದ್ಯಕೀಯ ತಂಡಗಳು ಮತ್ತು ಅಗತ್ಯ ಉಪಕರಣಗಳನ್ನು ಹೊಂದಿರುವ 100 ಸಿಬ್ಬಂದಿಗಳನ್ನು ಒಳಗೊಂಡಿರುವ ಎನ್‌ಡಿಆರ್‌ಎಫ್‌ನ ಎರಡು ತಂಡಗಳನ್ನು ಟರ್ಕಿಯ ಸರ್ಕಾರ, ಅಂಕಾರಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಇಸ್ತಾನ್‌ಬುಲ್‌ನಲ್ಲಿರುವ ಕಾನ್ಸುಲೇಟ್ ಜನರಲ್ ಕಚೇರಿಯ ಸಮನ್ವಯದಲ್ಲಿ ಕಳುಹಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾಕ್ಕೆ ಪುಟಿನ್ ಸಹಾಯ ಹಸ್ತ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟರ್ಕಿಗೆ ಸಹಾಯ ಹಸ್ತ ಚಾಚಿದ್ದಾರೆ. ನಿಮ್ಮ ದೇಶದಲ್ಲಿ ಪ್ರಬಲ ಭೂಕಂಪದಿಂದ ಉಂಟಾದ ಹಲವಾರು ಮಾನವ ಸಾವುನೋವುಗಳು ಮತ್ತು ದೊಡ್ಡ ಪ್ರಮಾಣದ ವಿನಾಶದ ಬಗ್ಗೆ ದಯವಿಟ್ಟು ನನ್ನ ತೀವ್ರ ಸಂತಾಪವನ್ನು ಸ್ವೀಕರಿಸಿ ಎಂದು ಪುಟಿನ್ ಸಂದೇಶ ಕಳುಹಿಸಿದ್ದಾರೆ. ಸಿರಿಯಾದ ಅಸ್ಸಾದ್‌ಗೆ ಇದೇ ರೀತಿಯ ಸಂದೇಶ ಕಳುಹಿಸಿದ ಪುಟಿನ್ ರಷ್ಯಾ “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ದುಃಖ ಮತ್ತು ನೋವನ್ನು ಹಂಚಿಕೊಂಡಿದೆ” ಎಂದಿದ್ದಾರೆ

ದಾಖಲೆಯ ಕುಸಿತ ಕಂಡ ಟರ್ಕಿಶ್ ಕರೆನ್ಸಿ

ಟರ್ಕಿಯ ಲಿರಾ ಹೊಸ ದಾಖಲೆಯ ಕನಿಷ್ಠ ಮಟ್ಟಕ್ಕೆ ತಲುಪಿದೆ. ತೀವ್ರವಾದ ಭೂಕಂಪನ ಷೇರು ಮಾರುಕಟ್ಟೆಯ ಮೇಲೆ ಭಾರೀ ಪ್ರಭಾವ ಬೀರಿದೆ.

ಸಾವಿನ ಸಂಖ್ಯೆ  912 ಕ್ಕೆ ಏರಿಕೆ

ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 912 ಏರಿಕೆಯಾಗಿದೆ ಎಂದು ಟರ್ಕಿ ಅಧ್ಯಕ್ಷರು ಹೇಳಿದ್ದಾರೆ. ಟರ್ಕಿ, ಸಿರಿಯಾದಲ್ಲಿ ಒಟ್ಟಾರೆ ಸಾವಿನ ಸಂಖ್ಯೆಯನ್ನು 1,300 ಕ್ಕಿಂತ ಹೆಚ್ಚು ಎಂದು ಎಪಿ ವರದಿ ಮಾಡಿದೆ. ಇದುವರೆಗೆ 2,470 ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ. ಕುಸಿದ ಕಟ್ಟಡಗಳ ಸಂಖ್ಯೆ 2,818ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಹೇಳಿದ್ದಾರೆ.

ದೇಶಗಳು ಸಹಾಯ ಹಸ್ತ ಚಾಚಿವೆ

ನಾವು ಅಂತರಾಷ್ಟ್ರೀಯ ಸಹಾಯಕ್ಕಾಗಿ ಸಂಪರ್ಕಿಸಲು ಪ್ರಾರಂಭಿಸಿದ್ದೇವೆ. NATO ಮತ್ತು EU ನಿಂದ ಸಹಾಯದ ಕೊಡುಗೆಗಳನ್ನು ಹೊರತುಪಡಿಸಿ, 45 ದೇಶಗಳು ನಮ್ಮನ್ನು ತಲುಪಿವೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Mon, 6 February 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ