AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಅವಶೇಷಗಳಡಿ ಸಿಲುಕಿದ್ದ 6ರ ಬಾಲಕಿ 80 ಗಂಟೆಗಳ ಬಳಿಕವೂ ಬದುಕಿ ಬಂದಿದ್ದು ಹೇಗೆ?

ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 37 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕೆಲವು ಮಂದಿ ಪವಾಡವೆಂಬಂತೆ ಬದುಕಿ ಬಂದಿದ್ದಾರೆ.

Turkey Earthquake: ಅವಶೇಷಗಳಡಿ ಸಿಲುಕಿದ್ದ 6ರ ಬಾಲಕಿ 80 ಗಂಟೆಗಳ ಬಳಿಕವೂ ಬದುಕಿ ಬಂದಿದ್ದು ಹೇಗೆ?
ರೋಮಿಯೋ-ಜೂಲಿ ಶ್ವಾನಗಳು
ನಯನಾ ಎಸ್​ಪಿ
| Edited By: |

Updated on: Feb 14, 2023 | 12:14 PM

Share

ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 37 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕೆಲವು ಮಂದಿ ಪವಾಡವೆಂಬಂತೆ ಬದುಕಿ ಬಂದಿದ್ದಾರೆ. ಎನ್​ಡಿಆರ್​ಎಫ್​ನ ರೋಮಿಯೋ ಹಾಗೂ ಜೂಲಿ ಶ್ವಾನದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆಯುತ್ತಿದೆ. ಭೂಕಂಪ ಸಂಭವಿಸಿ ಸತತ 80 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿ ನರಳುತ್ತಿದ್ದ 6 ವರ್ಷದ ಬಾಲಕಿಯನ್ನು ಹುಡುಕಿ ಜೀವಂತವಾಗಿ ರಕ್ಷಿಸಲು ಈ ಶ್ವಾನಗಳು ಸಹಾಯ ಮಾಡಿವೆ.

ಇವರಿಬ್ಬರ ಜೋಡಿ ಟರ್ಕಿಯ 6 ವರ್ಷದ ಬಾಲಕಿಯ ಜೀವ ಉಳಿಸಿದೆ. ಇಬ್ಬರ ಸಹಾಯದಿಂದ 80 ಗಂಟೆಗಳ ನಂತರ ಬಾಲಕಿಯನ್ನು ಅವಶೇಷಗಳಿಂದ ಹೊರತೆಗೆಯಲಾಯಿತು. ಮೂರು ದಿನಗಳ ಕಾಲ ಟನ್​ಗಟ್ಟಲೆ ಅವಶೇಷಗಳಡಿ ಸಿಲುಕಿದ್ದ ಬಾಲಕಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಬಾಲಕಿಯನ್ನು ಬೆರೆನ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: Turkey Earthquake: ಸಾವಿನ ಸಂಖ್ಯೆ 37,000ಕ್ಕೂ ಹೆಚ್ಚು; ಟರ್ಕಿಗೆ ಆದ ನಷ್ಟ ಎಷ್ಟು?

ರೋಮಿಯೋ ಹಾಗೂ ಜೂಲಿ ಎಂಬ ಎರಡು ಸ್ನಿಫರ್ ಡಾಗ್​ಗಳು ಭಾರತೀಯ ಎನ್​ಡಿಆರ್​ಎಫ್​ ತಂಡದ ಭಾಗವಾಗಿದ್ದವು. ಬಾಲಕಿಯನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿದ್ದವು.

7.8 ತೀವ್ರತೆಯ ಭೂಕಂಪದಿಂದ ದೇಶವು ನಲುಗಿದ ನಂತರ ಎನ್​ಡಿಆರ್​ಎಫ್ ಟರ್ಕಿಗೆ ತೆರಳಿದೆ. ಅಲ್ಲಿ ವಿಪತ್ತು ಕಾರ್ಯಾಚರಣೆ ನಡೆಸುತ್ತಿದೆ. ನಿವೇಶನವೊಂದರಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದುಬಿದ್ದಿತ್ತು, ಜೂಲಿ, ರೋಮಿಯೋ ಅವರನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿತ್ತು. ಜೂಲಿಯನ್ನು ಅವಶೇಷಗಳಡಿ ಹೋಗಲು ಸೂಚನೆ ನೀಡಲಾಗಿತ್ತು, ಒಳಗೆ ಹೋದ ಶ್ವಾನವು ಬೊಗಳಲು ಶುರು ಮಾಡಿತ್ತು.

ಬಳಿಕ ಮತ್ತೊಂದು ಶ್ವಾನವನ್ನು ದೃಢೀಕರಣಕ್ಕಾಗಿ ಕಳುಹಿಸಲಾಗಿತ್ತು. ಬಾಲಕಿ ಜೀವಂತವಾಗಿರುವುದನ್ನು ದೃಢಪಡಿಸಿದ್ದವು. ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಎನ್​ಡಿಆರ್​ಎಫ್ ಸಿಬ್ಬಂದಿ ಬೆರೆನ್​ನ ಜೀವವನ್ನು ಉಳಿಸುವಲ್ಲಿ ಯಶಸ್ವಿಯಾದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್