Pahalgam Terror Attack: ಪಾಕಿಸ್ತಾನಕ್ಕೆ ಭಾರಿ ಹಿನ್ನಡೆ, ಶಸ್ತ್ರಾಸ್ತ್ರ ಸರಬರಾಜು ನಿಲ್ಲಿಸಿದ ಟರ್ಕಿ

ಯುದ್ಧದ ಹೊಸ್ತಿಲಲ್ಲಿರುವಾಗ ಟರ್ಕಿಯು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳ ಸರಬರಾಜು ಮಾಡಿಲ್ಲ ಎಂದು ಹೇಳಿದೆ. ಭಾರತದೊಂದಿಗಿನ ಯುದ್ಧದ ಭೀತಿ ನಡುವೆಯೇ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನುವ ವರದಿಯನ್ನು ಟರ್ಕಿ ತಳ್ಳಿ ಹಾಕಿದೆ. ಟರ್ಕಿಯಲ್ಲಿ ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಭಾರತವು ಸಾಕಷ್ಟು ಸಹಾಯ ಮಾಡಿತ್ತು ಆದರೆ ಭಾರತದ ರಕ್ತ ಹರಿಸಲು ಟರ್ಕಿಯು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು.

Pahalgam Terror Attack: ಪಾಕಿಸ್ತಾನಕ್ಕೆ ಭಾರಿ ಹಿನ್ನಡೆ, ಶಸ್ತ್ರಾಸ್ತ್ರ ಸರಬರಾಜು ನಿಲ್ಲಿಸಿದ ಟರ್ಕಿ
ವಿಮಾನ
Image Credit source: Dailysabah

Updated on: Apr 29, 2025 | 9:36 AM

ಟರ್ಕಿ, ಏಪ್ರಿಲ್ 29: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​(Pahalgam)ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧದ ಭೀತಿಯೂ ಇದೆ. ಈ ನಡುವೆ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳ ಸರಬರಾಜು ಮಾಡಿಲ್ಲ ಹೇಳಿಕೆ ನೀಡಿದೆ. ಇದು ಪಾಕಿಸ್ತಾನಕ್ಕೆ ಬಹುದೊಡ್ಡ ಹಿನ್ನಡೆ ಎಂದೇ ಹೇಳಬಹುದು. ಭಾರತದೊಂದಿಗಿನ ಯುದ್ಧದ ಭೀತಿ ನಡುವೆಯೇ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನುವ ವರದಿಯನ್ನು ಟರ್ಕಿ ತಳ್ಳಿ ಹಾಕಿದೆ.

ಟರ್ಕಿಯಲ್ಲಿ ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಭಾರತವು ಸಾಕಷ್ಟು ಸಹಾಯ ಮಾಡಿತ್ತು ಆದರೆ ಭಾರತದ ರಕ್ತ ಹರಿಸಲು ಟರ್ಕಿಯು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನವ ವಿಚಾರ ಎಲ್ಲೆಡೆ ಹರಿದಾಡಿತ್ತು. ಆದರೆ ಟರ್ಕಿ ಇದಕ್ಕೆ ಸ್ಪಷ್ಟನೆ ನಿಡಿದ್ದು, ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ ಎಂದು ಹೇಳಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತ ಟರ್ಕಿಶ್ ವಾಯುಪಡೆಯ ಸಿ -130 ಹರ್ಕ್ಯುಲಸ್ ಮಿಲಿಟರಿ ಸಾರಿಗೆ ವಿಮಾನ ಭಾನುವಾರ ಕರಾಚಿಗೆ ಬಂದಿಳಿದಿತ್ತು ಎನ್ನಲಾಗಿತ್ತು, ಆದರೆ ಟರ್ಕಿಯಿಂದ ಹೊರಟ ಸರಕು ವಿಮಾನ ಇಂಧನ ತುಂಬಲು ಪಾಕಿಸ್ತಾನದಲ್ಲಿ ಇಳಿದಿತ್ತು, ಯಾವುದೇ ಊಹಾಪೋಹಗಳಿಗೂ ಕಿವಿಗೊಡಬೇಡಿ ಎಂದು ಹೇಳಿದೆ.

ಮುಸ್ಲಿಂ ಬಹುಸಂಖ್ಯಾತರಾಗಿರುವ ಈ ಪ್ರದೇಶವು ಭಾರತ ಮತ್ತು ಪಾಕಿಸ್ತಾನದ ನಡುವಿನ ದೀರ್ಘಕಾಲದ ವಿವಾದದ ಕೇಂದ್ರವಾಗಿದೆ. ನಡೆಯುತ್ತಿರುವ ಪ್ರಾದೇಶಿಕ ವಿವಾದವು ಈ ಪರಮಾಣು-ಸಶಸ್ತ್ರ ನೆರೆಹೊರೆಯವರ ನಡುವಿನ ಸಂಬಂಧವನ್ನು ಬಿಗಡಾಯಿಸಿದೆ.

ಇದನ್ನೂ ಓದಿ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೊಬ್ಬ ಕನ್ನಡಿಗ ಬಲಿ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ

ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಗಮನಾರ್ಹವಾಗಿ ಹದಗೆಟ್ಟಿದ್ದು, ಸಂಭಾವ್ಯ ಮಿಲಿಟರಿ ಸಂಘರ್ಷಗಳ ಬಗ್ಗೆ ವಿಶ್ಲೇಷಕರಲ್ಲಿ ಕಳವಳವನ್ನು ಹುಟ್ಟುಹಾಕಿದೆ. ಎರಡೂ ದೇಶಗಳು ತಮ್ಮ ಸಂಕೀರ್ಣ ಭೌಗೋಳಿಕ ರಾಜಕೀಯ ಚಲನಶೀಲತೆಯನ್ನು ಮುಂದುವರೆಸುತ್ತಿರುವುದರಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

ಇದಕ್ಕೂ ಮೊದಲು, ಚೀನಾ ಪಾಕಿಸ್ತಾನಕ್ಕೆ ಪಿಎಲ್ -15 ಕ್ಷಿಪಣಿಗಳನ್ನು ಕಳುಹಿಸಿತ್ತು, ಪಾಕಿಸ್ತಾನ ತನ್ನ ಜೆಎಫ್ -17 ಯುದ್ಧ ವಿಮಾನಗಳಲ್ಲಿ ಇವುಗಳನ್ನು ಅಳವಡಿಸಿದೆ. ಪಾಕಿಸ್ತಾನ ಮತ್ತು ಟರ್ಕಿಯೆ ನಡುವೆ ಈಗಾಗಲೇ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳು ನಡೆದಿವೆ. ಇತ್ತೀಚೆಗೆ, ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ, ಶಸ್ತ್ರಾಸ್ತ್ರಗಳ ಕುರಿತು ಎರಡೂ ದೇಶಗಳ ನಡುವೆ ಒಪ್ಪಂದವೂ ಏರ್ಪಟ್ಟಿತು.

ಮತ್ತಷ್ಟು ಓದಿ: ಭಾರತದೊಂದಿಗೆ ಯುದ್ಧ ಮಾಡದಿರುವುದೇ ಉತ್ತಮ, ಪಾಕ್ ಪ್ರಧಾನಿಗೆ ನವಾಜ್ ಷರೀಫ್ ಸಲಹೆ

ಟರ್ಕಿ ಮತ್ತು ಪಾಕಿಸ್ತಾನಗಳು ಇಸ್ಲಾಮಿಕ್ ಸಹೋದರತ್ವದ ಆಧಾರದ ಮೇಲೆ ತಮ್ಮ ಸ್ನೇಹವನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಪರಿವರ್ತಿಸಲು ನಿರ್ಧರಿಸಿದ್ದವು. ಟರ್ಕಿ ಹಲವಾರು ಶಸ್ತ್ರಾಸ್ತ್ರ ಒಪ್ಪಂದಗಳಿಗೆ ಸಹಿ ಹಾಕಿದೆ. ಭಾರತದೊಂದಿಗೆ ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ವಾಯುಪಡೆಯು ಪೆನ್ಸಿ, ಸ್ಕಾರ್ಡು ಮತ್ತು ಸ್ವಾತ್ ಸೇರಿದಂತೆ ಪ್ರಮುಖ ವಾಯುನೆಲೆಗಳನ್ನು ಸಕ್ರಿಯಗೊಳಿಸಿದೆ. ಈ ಹಿಂದೆ ಟರ್ಕಿ ಜತೆಗೆ ಪಾಕಿಸ್ತಾನ ಕೆಲವು ಒಪ್ಪಂದ ಮಾಡಿಕೊಂಡಿತ್ತು.

ಪ್ರಸ್ತುತ, ಈ ನೆಲೆಗಳಲ್ಲಿ ಎಫ್ -16, ಜೆ -10 ಮತ್ತು ಜೆಎಫ್ -17 ಯುದ್ಧ ವಿಮಾನಗಳನ್ನು ನಿಯೋಜಿಸಲಾಗಿದ್ದು, ಯುದ್ಧ ವಾಯು ಗಸ್ತು (ಸಿಎಪಿ) ಈಗಾಗಲೇ ನಡೆಯುತ್ತಿದೆ. ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:23 am, Tue, 29 April 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us