AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿ, ಸಿರಿಯಾ ಭೂಕಂಪ: ಮೃತರ ಸಂಖ್ಯೆ 21 ಸಾವಿರಕ್ಕೆ ಏರಿಕೆ

ಟರ್ಕಿ ಹಾಗೂ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು, ಅದರಲ್ಲಿ ಮೃತಪಟ್ಟಿರುವವರ ಸಂಖ್ಯೆ 21 ಸಾವಿರಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ

Turkey Earthquake: ಟರ್ಕಿ, ಸಿರಿಯಾ ಭೂಕಂಪ: ಮೃತರ ಸಂಖ್ಯೆ 21 ಸಾವಿರಕ್ಕೆ ಏರಿಕೆ
ಟರ್ಕಿ ಭೂಕಂಪ
ನಯನಾ ರಾಜೀವ್
|

Updated on: Feb 10, 2023 | 7:37 AM

Share

ಟರ್ಕಿ ಹಾಗೂ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು, ಅದರಲ್ಲಿ ಮೃತಪಟ್ಟಿರುವವರ ಸಂಖ್ಯೆ 21 ಸಾವಿರಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಸಿರಿಯಾಕ್ಕೆ ತೆರಳುತ್ತಿದ್ದಾರೆ, ಚಳಿಯಿಂದಾಗಿ ರಕ್ಷಣಾ ಕಾರ್ಯಾಚರಣೆ ನಿಧಾನವಾಗುತ್ತಿದೆ. ಆಶ್ರಯ ಮತ್ತು ಕುಡಿಯುವ ನೀರಿಲ್ಲದ ಅನೇಕ ಮಂದಿ ಸಮಸ್ಯೆ ಎದುರಿಸುತ್ತಿದ್ದಾರೆ.

ಟರ್ಕಿಯ ದಕ್ಷಿಣ ನಗರವಾದ ಅಂಟಾಕ್ಯಾದಲ್ಲಿನ ಆಸ್ಪತ್ರೆಯ ಬಳಿ ಇರಿಸಲಾಗಿದ್ದ, ಮೃತದೇಹಗಳನ್ನು ಸಂಬಂಧಿಕರು ಹುಡುಕುತ್ತಿದ್ದರು. ಭೂಕಂಪ ಸಂಭವಿಸಿ 72 ಗಂಟೆಯಾಗಿದ್ದರಿಂದ ಅವಶೇಷಗಳಡಿ ಬದುಕುಳಿದಿರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಭೂಕಂಪನದಿಂದಾಗಿ ನೆಲಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜರನ್ನು ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ರಕ್ಷಿಸಲು ಟರ್ಕಿಯಲ್ಲಿ ಅತೀವ ಪ್ರಯತ್ನ ಮುಂದುರೆಸಿದ್ದಾರೆ. ಆದರೆ, ಇಂತಹ ಸಿಬ್ಬಂದಿ ಸಂಖ್ಯೆ ಕೇವಲ 60 ಸಾವಿರದಷ್ಟಿದೆ. ಭೂಕಂಪದಿಂದ ಹಾನಿಗೆ ಒಳಗಾದ ಪ್ರದೇಶಗಳು ಅಪಾರವಾಗಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ.

ಮತ್ತಷ್ಟು ಓದಿ: Turkey Earthquake: ಟರ್ಕಿಯಲ್ಲಿ ಬೆಂಗಳೂರಿನ ಒಬ್ಬ ವ್ಯಕ್ತಿ ನಾಪತ್ತೆ, ದೂರಸ್ಥಳದಲ್ಲಿ ಸಿಲುಕಿದ ಇತರ 10 ಮಂದಿ

ಅವರ ಆಕ್ರಂದನ ಮುಗಿಲು ಮುಟ್ಟಿದೆ. ಇದೀಗ ಎರಡು ಡಜನ್ ರಾಷ್ಟ್ರಗಳಿಂದ ರಕ್ಷಣಾ ಸಿಬ್ಬಂದಿ ಟರ್ಕಿ ಹಾಗೂ ಸಿರಿಯಾಗೆ ತೆರಳಿ, ಜನರ ರಕ್ಷಣೆಗೆ ನೆರವಾಗುತ್ತಿದ್ದಾರೆ.

ಟರ್ಕಿಯಲ್ಲಿ 8.5 ಕೋಟಿ ಜನಸಂಖ್ಯೆ ಇದ್ದು, ಆ ಪೈಕಿ 1.3 ಕೋಟಿ ಜನರು ಭೂಕಂಪನದಿಂದ ಬಾಧಿತರಾಗಿದ್ದಾರೆ. 10 ಪ್ರಾಂತ್ಯಗಳಲ್ಲಿ ಟರ್ಕಿ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಸದ್ಯ 3.8 ಲಕ್ಷ ಜನರು ಮಾತ್ರ ಸರ್ಕಾರಿ ನಿರಾಶ್ರಿತ ಕೇಂದ್ರ ಅಥವಾ ಹೋಟೆಲ್ ಗಳಲ್ಲಿ ಆಶ್ರಯ ಪಡೆದಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಸಿರಿಯಾಕ್ಕೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ. 2011ರಲ್ಲಿ ಜಪಾನ್ ನಲ್ಲಿ ಭೂಕಂಪನ ಹಾಗೂ ಅದರಿಂದ ಸೃಷ್ಟಿಯಾದ ಸುನಾಮಿಗೆ 20000 ಮಂದಿ ಬಲಿಯಾಗಿದ್ದರು. ಅದಾದ ನಂತರ ಕಳೆದೊಂದು ದಶಕದ ಅವಧಿಯಲ್ಲಿ ಸಂಭವಿಸಿದ ಘೋರ ಪ್ರಕೃತಿ ವಿಕೋಪ ಈ ಭೂಕಂಪವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್