ಸೊಮಾಲಿಯಾದಲ್ಲಿ ಅವಳಿ ಸ್ಫೋಟ: 6 ಮಂದಿ ಸಾವು, 10 ಜನರಿಗೆ ಗಾಯ

ಮೊಗಾದಿಶು ಮತ್ತು ಸೊಮಾಲಿಯಾ ನಡುವಿನ ಶಾಬೆಲ್ಲೆ ಪ್ರದೇಶದಲ್ಲಿ  ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿವೆ. ವಾಯ್ಸ್ ಆಫ್ ಅಮೇರಿಕ ವರದಿಯ ಪ್ರಕಾರ, ಪೊಲೀಸ್ ವರದಿಗಳ ಪ್ರಕಾರ, ಮಾರಣಾಂತಿಕ ಸ್ಫೋಟಗಳಲ್ಲಿ ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.

ಸೊಮಾಲಿಯಾದಲ್ಲಿ ಅವಳಿ ಸ್ಫೋಟ: 6 ಮಂದಿ ಸಾವು, 10 ಜನರಿಗೆ ಗಾಯ
ಸ್ಫೋಟImage Credit source: Yahoo
Follow us
|

Updated on: Sep 29, 2024 | 10:37 AM

ಮೊಗಾದಿಶು ಮತ್ತು ಸೊಮಾಲಿಯಾ ನಡುವಿನ ಶಾಬೆಲ್ಲೆ ಪ್ರದೇಶದಲ್ಲಿ  ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿವೆ. ವಾಯ್ಸ್ ಆಫ್ ಅಮೇರಿಕ ವರದಿಯ ಪ್ರಕಾರ, ಪೊಲೀಸ್ ವರದಿಗಳ ಪ್ರಕಾರ, ಮಾರಣಾಂತಿಕ ಸ್ಫೋಟಗಳಲ್ಲಿ ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.

ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸ್ಫೋಟಗಳು ಸಂಭವಿಸಿವೆ – ಒಂದು ಮೊಗಾಡಿಶುವಿನ ನ್ಯಾಷನಲ್ ಥಿಯೇಟರ್ ಬಳಿ, ಅಧ್ಯಕ್ಷರ ಕಚೇರಿಯಿಂದ ಸುಮಾರು ಒಂದು ಕಿಲೋಮೀಟರ್, ಮತ್ತು ಇನ್ನೊಂದು ಜೊಹೋರ್ ನಗರದ ಜಾನುವಾರು ಮಾರುಕಟ್ಟೆಯಲ್ಲಿ ನಡೆದಿದೆ.

ಜಾನುವಾರು ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಗೊಂಡಾಗ ಸೋಮಾಲಿಯಾದ ಮಿಡಲ್ ಶಾಬೆಲ್ಲೆ ಪ್ರದೇಶದ ಜೋಹರ್ ನಗರದಲ್ಲಿ ದುರಂತ ಸಂಭವಿಸಿದೆ, ಒಬ್ಬ ನಾಗರಿಕ ಸಾವನ್ನಪ್ಪಿದ್ದಾನೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಜೋವರ್ ಪೊಲೀಸ್ ಕಮಾಂಡರ್ ಬಶೀರ್ ಹಸನ್ ಹೇಳಿದ್ದಾರೆ.

ಜನನಿಬಿಡ ಹಮರ್ ವೆಯ್ನ್ ಜಿಲ್ಲೆಯ ರೆಸ್ಟೋರೆಂಟ್ ಬಳಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಸ್ಫೋಟಕ ತುಂಬಿದ ವಾಹನವು ಸ್ಫೋಟಗೊಂಡಿತ್ತು. ದಾಳಿ ನಡೆಸಿದವರು ಯಾರು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ, ಇಸ್ಲಾಮಿ ಉಗ್ರಗಾಮಿ ಗುಂಪು ಅಲ್-ಶಬಾಬ್ ಮೊಗಾದಿಶುನಲ್ಲಿ ಬಾಂಬ್ ಸ್ಫೋಟಗಳು ಮತ್ತು ಗುಂಡಿನ ದಾಳಿಗಳನ್ನು ಹಲವು ಬಾರಿ ನಡೆಸಿದೆ.

ಮತ್ತಷ್ಟು ಓದಿ: ಕೊಲ್ಕತ್ತಾದಲ್ಲಿ ಹಾಡಹಗಲೇ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ

ಜುಲೈನಲ್ಲಿ ಮತ್ತೊಂದು ಘಟನೆ ನಡೆದಿತ್ತು ಸೊಮಾಲಿಯಾದಲ್ಲಿ ಬ್ಯುಸಿ ಕೆಫೆಯಲ್ಲಿ ಪ್ರಬಲ ಸ್ಫೋಟದಲ್ಲಿ 5 ಸಾವು ಸೊಮಾಲಿ ರಾಜಧಾನಿ ಮೊಗಾದಿಶುನಲ್ಲಿ ಭಾನುವಾರ ಕೆಫೆಯೊಂದರ ಹೊರಗೆ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದರು.

ಸ್ಪೇನ್ ಮತ್ತು ಇಂಗ್ಲೆಂಡ್ ನಡುವಿನ ಯುರೋಪಿಯನ್ ಫುಟ್ಬಾಲ್ ಫೈನಲ್ ಪಂದ್ಯವನ್ನು ಕೆಫೆಯೊಳಗಿನ ಪರದೆಯ ಮೇಲೆ ಕೆಲವರು ವೀಕ್ಷಿಸುತ್ತಿದ್ದಾಗ ಸ್ಫೋಟಕಗಳನ್ನು ತುಂಬಿದ ಕಾರು ಹೊರಗೆ ಸ್ಫೋಟಿಸಿತು ಎಂದು ಸೊಮಾಲಿ ಪೊಲೀಸ್ ವಕ್ತಾರ ಮೇಜರ್ ಅಬ್ದಿಫಿತಾ ಅಡೆನ್ ಹಸ್ಸಾ ಹೇಳಿದ್ದಾರೆ. ದಾಳಿಯಲ್ಲಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ