AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಟ್ವಿಟರ್​​ ಬ್ಯಾನ್: ಎಕ್ಸ್​​​ನಿಂದ ನಮ್ಮ​​​ ರಾಷ್ಟ್ರೀಯ ಭದ್ರತೆಗೆ ತೊಂದರೆ

ಪಾಕಿಸ್ತಾನ ಎಕ್ಸ್​​​​ನ್ನು (ಟ್ವಿಟರ್​​) ಬ್ಯಾನ್ ಮಾಡಿದೆ. ತನ್ನ ದೇಶದ ರಾಷ್ಟ್ರೀಯ ಭದ್ರತೆಗೆ ತೊಂದರೆ ಇದೆ ಎಂದು ಈ ಕ್ರಮವನ್ನು ತೆಗೆದುಕೊಂಡಿದೆ. ಆದರೆ ಇದಕ್ಕೆ ಅಲ್ಲಿ ಕೋರ್ಟ್​​ ವಿರೋಧ ವ್ಯಕ್ತಪಡಿಸಿದೆ. ಈ ಆದೇಶವನ್ನು ಒಂದು ವಾರದೊಳಗೆ ಹಿಂಪಡೆಯುವಂತೆ ಹೇಳಿದೆ.

ಪಾಕಿಸ್ತಾನದಲ್ಲಿ ಟ್ವಿಟರ್​​ ಬ್ಯಾನ್: ಎಕ್ಸ್​​​ನಿಂದ ನಮ್ಮ​​​ ರಾಷ್ಟ್ರೀಯ ಭದ್ರತೆಗೆ ತೊಂದರೆ
ಎಕ್ಸ್​​ ಬ್ಯಾನ್
ಅಕ್ಷಯ್​ ಪಲ್ಲಮಜಲು​​
|

Updated on: Apr 17, 2024 | 5:30 PM

Share

ಪಾಕಿಸ್ತಾನ (Pakistan) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪಾಕ್​ನಲ್ಲಿ ಎಕ್ಸ್​​​ ಬ್ಯಾನ್​​​ ಮಾಡಲಾಗಿದೆ. ರಾಷ್ಟ್ರೀಯ ಭದ್ರತೆ ಕಾರಣವನ್ನು ಹೇಳಿ ಅಲ್ಲಿ ಎಕ್ಸ್​​​ನ್ನು ಬ್ಯಾನ್​​​ ಮಾಡಲಾಗಿದೆ. ಪಾಕಿಸ್ತಾನ ಸರ್ಕಾರವು ಫೆಬ್ರವರಿಯಲ್ಲಿಯೇ ಎಕ್ಸ್​​​ನ್ನು ನಿಷೇಧಿಸುವುದಾಗಿ ಹೇಳಿತ್ತು. ಇದೀಗ ಈ ನಿಷೇಧವನ್ನು ಅಧಿಕೃತವಾಗಿ ದೃಢಪಡಿಸಿದೆ. ಎಲೋನ್ ಮಸ್ಕ್ ಒಡೆತನದ ಮೈಕ್ರೋ ಬ್ಲಾಗಿಂಗ್ ಸೈಟ್ ಎಕ್ಸ್ ಮೇಲಿನ ನಿಷೇಧವನ್ನು ರದ್ದುಗೊಳಿಸುವಂತೆ ಪಾಕಿಸ್ತಾನದ ಸಿಂಧ್ ಹೈಕೋರ್ಟ್ (ಎಸ್‌ಎಚ್‌ಸಿ) ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ವರದಿಯ ಪ್ರಕಾರ, ಒಂದು ವಾರದೊಳಗೆ ತನ್ನ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ನ್ಯಾಯಾಲಯವು ಪಾಕಿಸ್ತಾನ ಸರ್ಕಾರವನ್ನು ಕೇಳಿದೆ.

ಭದ್ರತಾ ಸಮಸ್ಯೆಗಳನ್ನು ಉಲ್ಲೇಖಿಸಿದ ಪಾಕಿಸ್ತಾನ ಸರ್ಕಾರ

ಪಾಕಿಸ್ತಾನ ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, X ಪ್ಲಾಟ್‌ಫಾರ್ಮ್‌ನ ದುರುಪಯೋಗದ ಬಗ್ಗೆ ತಿಳಿಸಿದೆ. ಪಾಕಿಸ್ತಾನದಲ್ಲಿ ಎಕ್ಸ್ ಜನರಿಗೆ ಸಾಮಾಜಿಕ ಜಾಲತಾಣ ನೀಡುವ ಭದ್ರತೆಯಲ್ಲಿ ವಿಫಲಗೊಂಡಿದೆ. ​​​ ಈ ಹಿಂದೆ ಈ ಬಗ್ಗೆ ಎಕ್ಸ್​​ಗೆ ತಿಳಿಸಿತ್ತು. ಇಲ್ಲಿಯವರೆಗೆ ಇದಕ್ಕೆ ಯಾವುದೇ ಪರಿಹಾರವನ್ನು ತಂದುಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದುಬೈನಲ್ಲಿ ಭಾರಿ ಮಳೆ, ವಿಮಾನಗಳ ಹಾರಾಟ ಸ್ಥಗಿತ, ಒಮಾನ್​ನಲ್ಲಿ 18 ಮಂದಿ ಸಾವು

ಈ ಹಿಂದೆ ಎಕ್ಸ್​​ನಲ್ಲಿ ಯಾವುದೇ ಪೋಸ್ಟ್​​​ನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪಾಕ್​​​​ ಜನರು ದೂರ ನೀಡಿದರು. ಆದರೆ ಇದು ಸರ್ಕಾರ ತೆಗೆದುಕೊಂಡ ಕ್ರಮ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ಎಲೋನ್ ಮಸ್ಕ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ