AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪಿಟಲ್ ಬಿಲ್ಡಿಂಗ್‌ ಘರ್ಷಣೆ: ಟ್ರಂಪ್ ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆಗಳು ಬಂದ್

ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಟ್ವೀಟ್​ಗಳನ್ನು ಟ್ವಿಟ್ಟರ್ ಸಂಸ್ಥೆ ಡಿಲೀಟ್ ಮಾಡಿದೆ. ಅಲ್ಲದೆ 12 ಗಂಟೆಗಳ ಕಾಲ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದೆ. ಹಾಗೂ ಫೇಸ್‌ಬುಕ್ ಖಾತೆ, ಇನ್‌ಸ್ಟಾಗ್ರಾಂ ಖಾತೆ ಕೂಡ 24 ಗಂಟೆಗಳ ಕಾಲ ಬಂದ್ ಮಾಡಲಾಗಿದೆ.

ಕ್ಯಾಪಿಟಲ್ ಬಿಲ್ಡಿಂಗ್‌ ಘರ್ಷಣೆ: ಟ್ರಂಪ್ ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ  ಖಾತೆಗಳು ಬಂದ್
ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ನಡೆದ ಘರ್ಷಣೆ ದೃಶ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jan 07, 2021 | 9:58 AM

Share

ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ ಹಿನ್ನೆಲೆಯಲ್ಲಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಟ್ವೀಟ್​ಗಳನ್ನು ಟ್ವಿಟ್ಟರ್ ಸಂಸ್ಥೆ ಡಿಲೀಟ್ ಮಾಡಿದೆ. ಅಲ್ಲದೆ 12 ಗಂಟೆಗಳ ಕಾಲ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದು ಫೇಸ್‌ಬುಕ್ ಖಾತೆ ಕೂಡ ಲಾಕ್ ಆಗಿದೆ.

ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್, ಸಂಯಮ, ಶಾಂತಿಯುತವಾಗಿ ಇರಬೇಕು. ನನ್ನ ಬೆಂಬಲಿಗರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಟ್ವೀಟ್ ಮಾಡಿದ್ದರು. ಆದ್ರೆ ಟ್ವಿಟ್ಟರ್ ಸಂಸ್ಥೆ, ಟ್ರಂಪ್ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಮಾಡಿದ್ದ ಟ್ವೀಟ್‌ಗಳನ್ನು ಡಿಲೀಟ್ ಮಾಡಿದೆ.

2 ಟ್ವೀಟ್ ಮತ್ತು ವಿಡಿಯೋವನ್ನು ಡಿಲೀಟ್ ಮಾಡಿದೆ. ಜೊತೆಗೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 12 ಗಂಟೆಗಳ ಕಾಲ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದೆ. ಇನ್ನು ಆಕ್ಷೇಪಾರ್ಹ ಸಂದೇಶ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಫೇಸ್‌ಬುಕ್ ಖಾತೆ, ಇನ್‌ಸ್ಟಾಗ್ರಾಂ ಖಾತೆ ಕೂಡ 24 ಗಂಟೆಗಳ ಕಾಲ ಬಂದ್ ಮಾಡಲಾಗಿದೆ.

ಘಟನೆ ಹಿನ್ನೆಲೆ: ಚುನಾವಣೆ ಫಲಿತಾಂಶ ದೃಢೀಕರಣ ವೇಳೆ ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ ಉಂಟಾಗಿ ಫೈರಿಂಗ್ ನಡೆದಿತ್ತು. ಫೈರಿಂಗ್‌ನಲ್ಲಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ.

ಅಮೆರಿಕ ಕಾಂಗ್ರೆಸ್‌ನಿಂದ ಫಲಿತಾಂಶ ದೃಢೀಕರಣ ಈ ವೇಳೆ ಜೋ ಬೈಡನ್ ಆಯ್ಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆಗ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಬಿಲ್ಡಿಂಗ್‌ಗೆ ನುಗ್ಗಿದ್ದರು. ಈ ವೇಳೆ ಟ್ರಂಪ್ ಬೆಂಬಲಿಗರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಉಂಟಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಫೈರಿಂಗ್‌ನಲ್ಲಿ ಮಹಿಳೆ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆಡಿಯೋ ಟೇಪ್​ ಲೀಕ್​: ಬಯಲಾಯ್ತು ಡೊನಾಲ್ಡ್ ಟ್ರಂಪ್ ಮೋಸ

Published On - 7:39 am, Thu, 7 January 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ