AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪಿಟಲ್ ಬಿಲ್ಡಿಂಗ್‌ ಘರ್ಷಣೆ: ಟ್ರಂಪ್ ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆಗಳು ಬಂದ್

ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಟ್ವೀಟ್​ಗಳನ್ನು ಟ್ವಿಟ್ಟರ್ ಸಂಸ್ಥೆ ಡಿಲೀಟ್ ಮಾಡಿದೆ. ಅಲ್ಲದೆ 12 ಗಂಟೆಗಳ ಕಾಲ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದೆ. ಹಾಗೂ ಫೇಸ್‌ಬುಕ್ ಖಾತೆ, ಇನ್‌ಸ್ಟಾಗ್ರಾಂ ಖಾತೆ ಕೂಡ 24 ಗಂಟೆಗಳ ಕಾಲ ಬಂದ್ ಮಾಡಲಾಗಿದೆ.

ಕ್ಯಾಪಿಟಲ್ ಬಿಲ್ಡಿಂಗ್‌ ಘರ್ಷಣೆ: ಟ್ರಂಪ್ ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ  ಖಾತೆಗಳು ಬಂದ್
ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ನಡೆದ ಘರ್ಷಣೆ ದೃಶ್ಯ
ಆಯೇಷಾ ಬಾನು
| Edited By: |

Updated on:Jan 07, 2021 | 9:58 AM

Share

ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ ಹಿನ್ನೆಲೆಯಲ್ಲಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಟ್ವೀಟ್​ಗಳನ್ನು ಟ್ವಿಟ್ಟರ್ ಸಂಸ್ಥೆ ಡಿಲೀಟ್ ಮಾಡಿದೆ. ಅಲ್ಲದೆ 12 ಗಂಟೆಗಳ ಕಾಲ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದು ಫೇಸ್‌ಬುಕ್ ಖಾತೆ ಕೂಡ ಲಾಕ್ ಆಗಿದೆ.

ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್, ಸಂಯಮ, ಶಾಂತಿಯುತವಾಗಿ ಇರಬೇಕು. ನನ್ನ ಬೆಂಬಲಿಗರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಟ್ವೀಟ್ ಮಾಡಿದ್ದರು. ಆದ್ರೆ ಟ್ವಿಟ್ಟರ್ ಸಂಸ್ಥೆ, ಟ್ರಂಪ್ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಮಾಡಿದ್ದ ಟ್ವೀಟ್‌ಗಳನ್ನು ಡಿಲೀಟ್ ಮಾಡಿದೆ.

2 ಟ್ವೀಟ್ ಮತ್ತು ವಿಡಿಯೋವನ್ನು ಡಿಲೀಟ್ ಮಾಡಿದೆ. ಜೊತೆಗೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 12 ಗಂಟೆಗಳ ಕಾಲ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದೆ. ಇನ್ನು ಆಕ್ಷೇಪಾರ್ಹ ಸಂದೇಶ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಫೇಸ್‌ಬುಕ್ ಖಾತೆ, ಇನ್‌ಸ್ಟಾಗ್ರಾಂ ಖಾತೆ ಕೂಡ 24 ಗಂಟೆಗಳ ಕಾಲ ಬಂದ್ ಮಾಡಲಾಗಿದೆ.

ಘಟನೆ ಹಿನ್ನೆಲೆ: ಚುನಾವಣೆ ಫಲಿತಾಂಶ ದೃಢೀಕರಣ ವೇಳೆ ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ ಉಂಟಾಗಿ ಫೈರಿಂಗ್ ನಡೆದಿತ್ತು. ಫೈರಿಂಗ್‌ನಲ್ಲಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ.

ಅಮೆರಿಕ ಕಾಂಗ್ರೆಸ್‌ನಿಂದ ಫಲಿತಾಂಶ ದೃಢೀಕರಣ ಈ ವೇಳೆ ಜೋ ಬೈಡನ್ ಆಯ್ಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆಗ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಬಿಲ್ಡಿಂಗ್‌ಗೆ ನುಗ್ಗಿದ್ದರು. ಈ ವೇಳೆ ಟ್ರಂಪ್ ಬೆಂಬಲಿಗರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಉಂಟಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಫೈರಿಂಗ್‌ನಲ್ಲಿ ಮಹಿಳೆ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆಡಿಯೋ ಟೇಪ್​ ಲೀಕ್​: ಬಯಲಾಯ್ತು ಡೊನಾಲ್ಡ್ ಟ್ರಂಪ್ ಮೋಸ

Published On - 7:39 am, Thu, 7 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ