AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕ್ ವಿಭಜನೆ ವೇಳೆ ಬೇರ್ಪಟ್ಟು 76 ವರ್ಷಗಳ ನಂತರ ಒಂದಾದ ಸೋದರ ಸಂಬಂಧಿಗಳು

ಮೊಹಮ್ಮದ್ ಇಸ್ಮಾಯಿಲ್ ಲಾಹೋರ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಪಂಜಾಬ್‌ನ ಸಾಹಿವಾಲ್ ಜಿಲ್ಲೆಗೆ ಸೇರಿದವರು ಮತ್ತು ಸುರೀಂದರ್ ಕೌರ್ ಜಲಂಧರ್‌ನವರು. ಮೊಹಮ್ಮದ್ ಇಸ್ಮಾಯಿಲ್ ಮತ್ತು ಸುರೀಂದರ್ ಕೌರ್ ಅವರ ಕುಟುಂಬಗಳು ವಿಭಜನೆಯ ಮೊದಲು ಜಲಂಧರ್ ಜಿಲ್ಲೆಯ ಶಾಕೋಟ್ ಪಟ್ಟಣದಲ್ಲಿ ವಾಸಿಸುತ್ತಿದ್ದು ಗಲಭೆಗಳಿಂದಾಗಿ ಅವರಿಬ್ಬರೂ ಬೇರ್ಪಡಬೇಕಾಯಿತು.

ಭಾರತ- ಪಾಕ್ ವಿಭಜನೆ ವೇಳೆ ಬೇರ್ಪಟ್ಟು 76 ವರ್ಷಗಳ ನಂತರ ಒಂದಾದ ಸೋದರ ಸಂಬಂಧಿಗಳು
ಮೊಹಮ್ಮದ್ ಇಸ್ಮಾಯಿಲ್ ಮತ್ತು ಅವರ ಸೋದರಸಂಬಂಧಿ ಸುರೀಂದರ್ ಕೌರ್
Follow us
ರಶ್ಮಿ ಕಲ್ಲಕಟ್ಟ
|

Updated on:Oct 23, 2023 | 8:31 PM

ಲಾಹೋರ್ ಅಕ್ಟೋಬರ್ 23: 76 ವರ್ಷಗಳ ಹಿಂದೆ ಭಾರತ- ಪಾಕಿಸ್ತಾನ (India- Pakisatan) ವಿಭಜನೆಯ ಸಂದರ್ಭದಲ್ಲಿ ಬೇರ್ಪಟ್ಟ ಇಬ್ಬರು ಸೋದರ ಸಂಬಂಧಿಗಳು ಕರ್ತಾರ್‌ಪುರ ಕಾರಿಡಾರ್‌ನಲ್ಲಿ (Kartarpur Corridor) ಒಂದಾಗಿದ್ದಾರೆ. ಈ ಭಾವನಾತ್ಮಕ ಭೇಟಿಗೆ ಕಾರಣವಾಗಿದ್ದು ಸಾಮಾಜಿಕ ಮಾಧ್ಯಮ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. 80 ರ ಹರೆಯದವರಾಗಿರುವ ಮೊಹಮ್ಮದ್ ಇಸ್ಮಾಯಿಲ್ ಮತ್ತು ಅವರ ಸೋದರಸಂಬಂಧಿ ಸುರೀಂದರ್ ಕೌರ್,  ಪಾಕಿಸ್ತಾನ ಮತ್ತು ಭಾರತದ ತಮ್ಮ ನಗರಗಳಿಂದ ಕರ್ತಾರ್‌ಪುರದ ಗುರುದ್ವಾರ ದರ್ಬಾರ್ ಸಾಹಿಬ್(Gurdwara Darbar Sahib )ತಲುಪಿ ಭಾನುವಾರ ಪರಸ್ಪರ ಭೇಟಿಯಾಗಿದ್ದಾರೆ.

ಕರಾತಾರ್‌ಪುರ ಸಾಹಿಬ್ ಆಡಳಿತವು ಸೋದರಸಂಬಂಧಿಗಳ ಪುನರ್ಮಿಲನಕ್ಕೆ ಅನುಕೂಲ ಮಾಡಿಕೊಟ್ಟಿತು ಮತ್ತು ಅವರಿಗೆ ಸಿಹಿತಿಂಡಿಗಳು ಮತ್ತು ಲಾಂಗರ್ ನೀಡಿತು ಎಂದು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮೊಹಮ್ಮದ್ ಇಸ್ಮಾಯಿಲ್ ಲಾಹೋರ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಪಂಜಾಬ್‌ನ ಸಾಹಿವಾಲ್ ಜಿಲ್ಲೆಗೆ ಸೇರಿದವರು ಮತ್ತು ಸುರೀಂದರ್ ಕೌರ್ ಜಲಂಧರ್‌ನವರು. ಮೊಹಮ್ಮದ್ ಇಸ್ಮಾಯಿಲ್ ಮತ್ತು ಸುರೀಂದರ್ ಕೌರ್ ಅವರ ಕುಟುಂಬಗಳು ವಿಭಜನೆಯ ಮೊದಲು ಜಲಂಧರ್ ಜಿಲ್ಲೆಯ ಶಾಕೋಟ್ ಪಟ್ಟಣದಲ್ಲಿ ವಾಸಿಸುತ್ತಿದ್ದು ಗಲಭೆಗಳಿಂದಾಗಿ ಅವರಿಬ್ಬರೂ ಬೇರ್ಪಡಬೇಕಾಯಿತು.

ಪಾಕಿಸ್ತಾನಿ ಪಂಜಾಬಿ ಯೂಟ್ಯೂಬ್ ಚಾನೆಲ್ ಮೊಹಮ್ಮದ್ ಇಸ್ಮಾಯಿಲ್ ಕಥೆಯನ್ನು ಪೋಸ್ಟ್ ಮಾಡಿದ್ದು, ಅದರ ನಂತರ ಆಸ್ಟ್ರೇಲಿಯಾದ ಸರ್ದಾರ್ ಮಿಷನ್ ಸಿಂಗ್ ಅವರನ್ನು ಸಂಪರ್ಕಿಸಿ ಭಾರತದಲ್ಲಿ ಕಾಣೆಯಾದ ಅವರ ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ನೀಡಿದರು.

ಸಿಂಗ್ ಮೊಹಮ್ಮದ್ ಇಸ್ಮಾಯಿಲ್‌ಗೆ ಸುರೀಂದರ್ ಕೌರ್ ಅವರ ದೂರವಾಣಿ ಸಂಖ್ಯೆಯನ್ನು ನೀಡಿದರು, ನಂತರ ಇಬ್ಬರೂ ಸೋದರಸಂಬಂಧಿಗಳು ಮಾತನಾಡಿದ್ದು ಕರ್ತಾರ್‌ಪುರ ಕಾರಿಡಾರ್ ಮೂಲಕ ಗುರುದ್ವಾರ ದರ್ಬಾರ್ ಸಾಹಿಬ್‌ನಲ್ಲಿ ಭೇಟಿಯಾಗಲು ನಿರ್ಧರಿಸಿದರು.

ಇದನ್ನೂ ಓದಿ: Viral Video: 22 ವರ್ಷಗಳ ನಂತರ ಒಡಹುಟ್ಟಿದವರ ಪುನರ್ಮಿಲನ

ಅವರ ಮಿಲನದ ಸಂದರ್ಭದಲ್ಲಿ ಭಾವನಾತ್ಮಕ ದೃಶ್ಯಗಳು ಕಂಡುಬಂದವು.

ಭಾರತದ ಸುರಿಂದರ್ ಕೌರ್ ಮತ್ತು ಅವರ ಕುಟುಂಬ ಸದಸ್ಯರು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು.ಕರ್ತಾರ್‌ಪುರ ಕಾರಿಡಾರ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗುರುದ್ವಾರ ದರ್ಬಾರ್ ಸಾಹಿಬ್ ಅನ್ನು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಅಂತಿಮ ವಿಶ್ರಾಂತಿ ಸ್ಥಳವನ್ನು ಭಾರತದ ಪಂಜಾಬ್ ರಾಜ್ಯದ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇಗುಲದೊಂದಿಗೆ ಸಂಪರ್ಕಿಸುತ್ತದೆ. ಭಾರತೀಯ ಸಿಖ್ ಯಾತ್ರಿಕರು 4 ಕಿಮೀ ಉದ್ದದ ಕಾರಿಡಾರ್ ಅನ್ನು ಪ್ರವೇಶಿಸಬಹುದು ಮತ್ತು ವೀಸಾಗಳಿಲ್ಲದೆ ದರ್ಬಾರ್ ಸಾಹಿಬ್ ಅನ್ನು ಭೇಟಿ ಮಾಡಬಹುದು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Mon, 23 October 23

ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ