AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್ ಪತನ; ಪಾಕಿಸ್ತಾನ ಸೇನೆಯ ಇಬ್ಬರು ಮೇಜರ್​ಗಳ ಸಾವು

ಸಿಯಾಚಿನ್ ಹಿಮನದಿಯಲ್ಲಿ ಇಂದು ಹೆಲಿಕಾಪ್ಟರ್ ಪತನವಾಗಿದ್ದು, ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೇಬ್ ಹುತಾತ್ಮರಾಗಿದ್ದಾರೆ.

ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್ ಪತನ; ಪಾಕಿಸ್ತಾನ ಸೇನೆಯ ಇಬ್ಬರು ಮೇಜರ್​ಗಳ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 06, 2021 | 4:45 PM

Share

ನವದೆಹಲಿ: ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್​ ಪತನವಾಗಿ ಪಾಕಿಸ್ತಾನ ಸೇನೆಯ ಇಬ್ಬರು ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಇಂದು ಹೆಲಿಕಾಪ್ಟರ್ ಪತನವಾಗಿದ್ದು, ಇಬ್ಬರು ಪಾಕಿಸ್ತಾನಿ ಸೇನಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ಮಾಹಿತಿ ನೀಡಿದೆ. ಈ ಘಟನೆಯಲ್ಲಿ ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೇಬ್ ಹುತಾತ್ಮರಾಗಿದ್ದಾರೆ ಎಂದು ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಷನ್ಸ್ ಪಾಕಿಸ್ತಾನ್ ತಿಳಿಸಿದೆ.

ಸಿಯಾಚಿನ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಕನಿಷ್ಠ ಇಬ್ಬರು ಪಾಕಿಸ್ತಾನದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಸೋಮವಾರ ಹೇಳಿಕೆ ತಿಳಿಸಿದೆ. ಪಾಕಿಸ್ತಾನ ಸೇನೆಯು ಹುತಾತ್ಮರಾದ ಅಧಿಕಾರಿಗಳನ್ನು ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೆಬ್ ಎಂದು ಗುರುತಿಸಿದೆ.

ಸುಮಾರು ಒಂದು ವರ್ಷದ ಹಿಂದೆ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಪ್ರದೇಶದಲ್ಲಿ ಗಾಯಾಳುಗಳನ್ನು ಸ್ಥಳಾಂತರಿಸುವಾಗ ತಾಂತ್ರಿಕ ಕಾರಣಗಳಿಂದಾಗಿ ಪಾಕಿಸ್ತಾನ ಸೇನೆಯ ಏವಿಯೇಷನ್ ​​ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಸಿಯಾಚಿನ್ ಹಿಮನದಿಯು ಪ್ರಪಂಚದ ಎತ್ತರದ ಶಿಖರಗಳಿಂದ ಆವೃತವಾಗಿದೆ. ಕಾಶ್ಮೀರದ ಮಿಲಿಟರಿ ಪ್ರದೇಶದಲ್ಲಿ ಭಾರತದ ವಾಸ್ತವಿಕ ಗಡಿಯ ಸಮೀಪದಲ್ಲಿದೆ. ಇದು 1947ರಲ್ಲಿ ಸ್ವಾತಂತ್ರ್ಯ ಸಿಕ್ಕ ನಂತರ ಎರಡು ದೇಶಗಳ ನಡುವೆ 2-3 ಯುದ್ಧಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ

ಚಳಿಗಾಲದಲ್ಲಿ ಪ್ರವಾಸ ಹೋಗಬಹುದಾದ ಈ ಸ್ಥಳಗಳು ನಿಸ್ಸಂದೇಹವಾಗಿ ಭೂಮಿ ಮೇಲಿನ ಸ್ವರ್ಗಗಳು!

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?