AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್ ಪತನ; ಪಾಕಿಸ್ತಾನ ಸೇನೆಯ ಇಬ್ಬರು ಮೇಜರ್​ಗಳ ಸಾವು

ಸಿಯಾಚಿನ್ ಹಿಮನದಿಯಲ್ಲಿ ಇಂದು ಹೆಲಿಕಾಪ್ಟರ್ ಪತನವಾಗಿದ್ದು, ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೇಬ್ ಹುತಾತ್ಮರಾಗಿದ್ದಾರೆ.

ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್ ಪತನ; ಪಾಕಿಸ್ತಾನ ಸೇನೆಯ ಇಬ್ಬರು ಮೇಜರ್​ಗಳ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 06, 2021 | 4:45 PM

ನವದೆಹಲಿ: ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್​ ಪತನವಾಗಿ ಪಾಕಿಸ್ತಾನ ಸೇನೆಯ ಇಬ್ಬರು ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಇಂದು ಹೆಲಿಕಾಪ್ಟರ್ ಪತನವಾಗಿದ್ದು, ಇಬ್ಬರು ಪಾಕಿಸ್ತಾನಿ ಸೇನಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ಮಾಹಿತಿ ನೀಡಿದೆ. ಈ ಘಟನೆಯಲ್ಲಿ ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೇಬ್ ಹುತಾತ್ಮರಾಗಿದ್ದಾರೆ ಎಂದು ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಷನ್ಸ್ ಪಾಕಿಸ್ತಾನ್ ತಿಳಿಸಿದೆ.

ಸಿಯಾಚಿನ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಕನಿಷ್ಠ ಇಬ್ಬರು ಪಾಕಿಸ್ತಾನದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಸೋಮವಾರ ಹೇಳಿಕೆ ತಿಳಿಸಿದೆ. ಪಾಕಿಸ್ತಾನ ಸೇನೆಯು ಹುತಾತ್ಮರಾದ ಅಧಿಕಾರಿಗಳನ್ನು ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೆಬ್ ಎಂದು ಗುರುತಿಸಿದೆ.

ಸುಮಾರು ಒಂದು ವರ್ಷದ ಹಿಂದೆ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಪ್ರದೇಶದಲ್ಲಿ ಗಾಯಾಳುಗಳನ್ನು ಸ್ಥಳಾಂತರಿಸುವಾಗ ತಾಂತ್ರಿಕ ಕಾರಣಗಳಿಂದಾಗಿ ಪಾಕಿಸ್ತಾನ ಸೇನೆಯ ಏವಿಯೇಷನ್ ​​ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಸಿಯಾಚಿನ್ ಹಿಮನದಿಯು ಪ್ರಪಂಚದ ಎತ್ತರದ ಶಿಖರಗಳಿಂದ ಆವೃತವಾಗಿದೆ. ಕಾಶ್ಮೀರದ ಮಿಲಿಟರಿ ಪ್ರದೇಶದಲ್ಲಿ ಭಾರತದ ವಾಸ್ತವಿಕ ಗಡಿಯ ಸಮೀಪದಲ್ಲಿದೆ. ಇದು 1947ರಲ್ಲಿ ಸ್ವಾತಂತ್ರ್ಯ ಸಿಕ್ಕ ನಂತರ ಎರಡು ದೇಶಗಳ ನಡುವೆ 2-3 ಯುದ್ಧಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ

ಚಳಿಗಾಲದಲ್ಲಿ ಪ್ರವಾಸ ಹೋಗಬಹುದಾದ ಈ ಸ್ಥಳಗಳು ನಿಸ್ಸಂದೇಹವಾಗಿ ಭೂಮಿ ಮೇಲಿನ ಸ್ವರ್ಗಗಳು!

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು