Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ

ರಾಜಧಾನಿ ಢಾಕಾದಿಂದ ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ
ಬಾಂಗ್ಲಾದೇಶ ರೈಲು ಡಿಕ್ಕಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 23, 2023 | 6:08 PM

ಢಾಕಾ ಅಕ್ಟೋಬರ್23: ಬಾಂಗ್ಲಾದೇಶದಲ್ಲಿ (Bangladesh )ಸೋಮವಾರ ಎರಡು ರೈಲುಗಳು ಡಿಕ್ಕಿ ಹೊಡೆದು 15 ಜನರು ಸಾವಿಗೀಡಾಗಿದ್ದು , ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ (Dhaka) ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ (Bhairab) ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ನಾವು 15 ಶವಗಳನ್ನು ಹೊರತೆಗೆದಿದ್ದೇವೆ, ಅನೇಕರು ಗಾಯಗೊಂಡಿದ್ದಾರೆ” ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್​​ಪಿಗೆ ತಿಳಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತದೆೆ. ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಸಂಜೆ 4:00 ಗಂಟೆಗೆ (1000 GMT) ಸಂಭವಿಸಿದ ಈ ಅಪಘಾತವು ಒಂದು ರೈಲು ಇನ್ನೊಂದು ಮಾರ್ಗವನ್ನು ಪ್ರವೇಶಿಸಿದಾಗ ಸಂಭವಿಸಿದೆ ಎಂದು ರೆಹಮಾನ್ ಹೇಳಿದರು.

ರೈಲು ಅಪಘಾತಗಳು ಬಾಂಗ್ಲಾದೇಶದಲ್ಲಿ ಸಾಮಾನ್ಯವಾಗಿದೆ. ಸಾಮಾನ್ಯವಾಗಿ ಕಳಪೆ ಸಿಗ್ನಲಿಂಗ್, ನಿರ್ಲಕ್ಷ್ಯ, ಹಳೆಯ ಟ್ರ್ಯಾಕ್‌ಗಳು ಅಥವಾ ಇತರ ಕಡಿಮೆ ಮೂಲಸೌಕರ್ಯಗಳಿಂದ ಉಂಟಾಗುತ್ತದೆ.

ವರದಿಗಳ ಪ್ರಕಾರ, ಹಾನಿಗೊಳಗಾದ ಕೋಚ್‌ಗಳ ಕೆಳಗೆ ಗಾಯಗೊಂಡ ವ್ಯಕ್ತಿಗಳು ಇದ್ದು ಹಲವಾರು ಜನರು ರೈಲಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆಯನ್ನು ಕೂಲ್ ವೃತ್ತಿ ಎಂದ ಕಾಮಿಡಿಯನ್ ವಿದುಷಿ ಸ್ವರೂಪ್; ಜನರಿಂದ ಟೀಕೆ

ಎಗರೋಸಿಂಧೂರು ಗೋಧೂಳಿ ರೈಲಿನ ಎರಡು ಹಿಂಬದಿ ಬೋಗಿಗಳಿಗೆ ಹಾನಿಯಾಗಿದೆ. “ಘಟನೆಯು ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಢಾಕಾದಿಂದ ಚಿತ್ತಗಾಂಗ್, ಸಿಲ್ಹೆಟ್ ಮತ್ತು ಕಿಶೋರ್ಗಂಜ್ಗೆ ರೈಲು ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ” ಎಂದು ಭೈರಬ್ ಸ್ಟೇಷನ್ ಮಾಸ್ಟರ್ ಯೂಸುಫ್ ಹೇಳಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Mon, 23 October 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!