AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ

ರಾಜಧಾನಿ ಢಾಕಾದಿಂದ ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ
ಬಾಂಗ್ಲಾದೇಶ ರೈಲು ಡಿಕ್ಕಿ
TV9 Web
| Edited By: |

Updated on:Oct 23, 2023 | 6:08 PM

Share

ಢಾಕಾ ಅಕ್ಟೋಬರ್23: ಬಾಂಗ್ಲಾದೇಶದಲ್ಲಿ (Bangladesh )ಸೋಮವಾರ ಎರಡು ರೈಲುಗಳು ಡಿಕ್ಕಿ ಹೊಡೆದು 15 ಜನರು ಸಾವಿಗೀಡಾಗಿದ್ದು , ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ (Dhaka) ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ (Bhairab) ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ನಾವು 15 ಶವಗಳನ್ನು ಹೊರತೆಗೆದಿದ್ದೇವೆ, ಅನೇಕರು ಗಾಯಗೊಂಡಿದ್ದಾರೆ” ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್​​ಪಿಗೆ ತಿಳಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತದೆೆ. ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಸಂಜೆ 4:00 ಗಂಟೆಗೆ (1000 GMT) ಸಂಭವಿಸಿದ ಈ ಅಪಘಾತವು ಒಂದು ರೈಲು ಇನ್ನೊಂದು ಮಾರ್ಗವನ್ನು ಪ್ರವೇಶಿಸಿದಾಗ ಸಂಭವಿಸಿದೆ ಎಂದು ರೆಹಮಾನ್ ಹೇಳಿದರು.

ರೈಲು ಅಪಘಾತಗಳು ಬಾಂಗ್ಲಾದೇಶದಲ್ಲಿ ಸಾಮಾನ್ಯವಾಗಿದೆ. ಸಾಮಾನ್ಯವಾಗಿ ಕಳಪೆ ಸಿಗ್ನಲಿಂಗ್, ನಿರ್ಲಕ್ಷ್ಯ, ಹಳೆಯ ಟ್ರ್ಯಾಕ್‌ಗಳು ಅಥವಾ ಇತರ ಕಡಿಮೆ ಮೂಲಸೌಕರ್ಯಗಳಿಂದ ಉಂಟಾಗುತ್ತದೆ.

ವರದಿಗಳ ಪ್ರಕಾರ, ಹಾನಿಗೊಳಗಾದ ಕೋಚ್‌ಗಳ ಕೆಳಗೆ ಗಾಯಗೊಂಡ ವ್ಯಕ್ತಿಗಳು ಇದ್ದು ಹಲವಾರು ಜನರು ರೈಲಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆಯನ್ನು ಕೂಲ್ ವೃತ್ತಿ ಎಂದ ಕಾಮಿಡಿಯನ್ ವಿದುಷಿ ಸ್ವರೂಪ್; ಜನರಿಂದ ಟೀಕೆ

ಎಗರೋಸಿಂಧೂರು ಗೋಧೂಳಿ ರೈಲಿನ ಎರಡು ಹಿಂಬದಿ ಬೋಗಿಗಳಿಗೆ ಹಾನಿಯಾಗಿದೆ. “ಘಟನೆಯು ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಢಾಕಾದಿಂದ ಚಿತ್ತಗಾಂಗ್, ಸಿಲ್ಹೆಟ್ ಮತ್ತು ಕಿಶೋರ್ಗಂಜ್ಗೆ ರೈಲು ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ” ಎಂದು ಭೈರಬ್ ಸ್ಟೇಷನ್ ಮಾಸ್ಟರ್ ಯೂಸುಫ್ ಹೇಳಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Mon, 23 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ