AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ

ರಾಜಧಾನಿ ಢಾಕಾದಿಂದ ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ
ಬಾಂಗ್ಲಾದೇಶ ರೈಲು ಡಿಕ್ಕಿ
TV9 Web
| Edited By: |

Updated on:Oct 23, 2023 | 6:08 PM

Share

ಢಾಕಾ ಅಕ್ಟೋಬರ್23: ಬಾಂಗ್ಲಾದೇಶದಲ್ಲಿ (Bangladesh )ಸೋಮವಾರ ಎರಡು ರೈಲುಗಳು ಡಿಕ್ಕಿ ಹೊಡೆದು 15 ಜನರು ಸಾವಿಗೀಡಾಗಿದ್ದು , ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ (Dhaka) ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ (Bhairab) ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ನಾವು 15 ಶವಗಳನ್ನು ಹೊರತೆಗೆದಿದ್ದೇವೆ, ಅನೇಕರು ಗಾಯಗೊಂಡಿದ್ದಾರೆ” ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್​​ಪಿಗೆ ತಿಳಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತದೆೆ. ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಸಂಜೆ 4:00 ಗಂಟೆಗೆ (1000 GMT) ಸಂಭವಿಸಿದ ಈ ಅಪಘಾತವು ಒಂದು ರೈಲು ಇನ್ನೊಂದು ಮಾರ್ಗವನ್ನು ಪ್ರವೇಶಿಸಿದಾಗ ಸಂಭವಿಸಿದೆ ಎಂದು ರೆಹಮಾನ್ ಹೇಳಿದರು.

ರೈಲು ಅಪಘಾತಗಳು ಬಾಂಗ್ಲಾದೇಶದಲ್ಲಿ ಸಾಮಾನ್ಯವಾಗಿದೆ. ಸಾಮಾನ್ಯವಾಗಿ ಕಳಪೆ ಸಿಗ್ನಲಿಂಗ್, ನಿರ್ಲಕ್ಷ್ಯ, ಹಳೆಯ ಟ್ರ್ಯಾಕ್‌ಗಳು ಅಥವಾ ಇತರ ಕಡಿಮೆ ಮೂಲಸೌಕರ್ಯಗಳಿಂದ ಉಂಟಾಗುತ್ತದೆ.

ವರದಿಗಳ ಪ್ರಕಾರ, ಹಾನಿಗೊಳಗಾದ ಕೋಚ್‌ಗಳ ಕೆಳಗೆ ಗಾಯಗೊಂಡ ವ್ಯಕ್ತಿಗಳು ಇದ್ದು ಹಲವಾರು ಜನರು ರೈಲಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆಯನ್ನು ಕೂಲ್ ವೃತ್ತಿ ಎಂದ ಕಾಮಿಡಿಯನ್ ವಿದುಷಿ ಸ್ವರೂಪ್; ಜನರಿಂದ ಟೀಕೆ

ಎಗರೋಸಿಂಧೂರು ಗೋಧೂಳಿ ರೈಲಿನ ಎರಡು ಹಿಂಬದಿ ಬೋಗಿಗಳಿಗೆ ಹಾನಿಯಾಗಿದೆ. “ಘಟನೆಯು ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಢಾಕಾದಿಂದ ಚಿತ್ತಗಾಂಗ್, ಸಿಲ್ಹೆಟ್ ಮತ್ತು ಕಿಶೋರ್ಗಂಜ್ಗೆ ರೈಲು ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ” ಎಂದು ಭೈರಬ್ ಸ್ಟೇಷನ್ ಮಾಸ್ಟರ್ ಯೂಸುಫ್ ಹೇಳಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Mon, 23 October 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!