AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Typhoon Rai: ಫಿಲಿಪೈನ್ಸ್​ನಲ್ಲಿ ರೈ ಚಂಡಮಾರುತದ ಅಟ್ಟಹಾಸ; 75 ಜನ ಸಾವು, ಹೈ ಅಲರ್ಟ್​ ಘೋಷಣೆ

Philippines Typhoon: ಈ ಪ್ರಬಲ ಚಂಡಮಾರುತ ಅಪ್ಪಳಿಸುವ ಮೊದಲೇ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Typhoon Rai: ಫಿಲಿಪೈನ್ಸ್​ನಲ್ಲಿ ರೈ ಚಂಡಮಾರುತದ ಅಟ್ಟಹಾಸ; 75 ಜನ ಸಾವು, ಹೈ ಅಲರ್ಟ್​ ಘೋಷಣೆ
ರೈ ಚಂಡಮಾರುತ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 19, 2021 | 10:33 AM

Share

ಮನಿಲಾ: ಫಿಲಿಪೈನ್ಸ್​ನಲ್ಲಿ ಪ್ರಬಲ ರೈ ಚಂಡಮಾರುತ ಅಪ್ಪಳಿಸಿದ್ದು, ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ವರ್ಷ ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಪ್ರಬಲ ಚಂಡಮಾರುತದಲ್ಲಿ ಕನಿಷ್ಠ 75 ಜನರು ಸಾವನ್ನಪ್ಪಿದ್ದಾರೆ. ತೀವ್ರ ಹಾನಿಗೊಳಗಾದ ದ್ವೀಪಗಳಿಗೆ ನೀರು ಮತ್ತು ಆಹಾರವನ್ನು ತಲುಪಿಸುವ ಪ್ರಯತ್ನಗಳು ತೀವ್ರಗೊಂಡಿವೆ. ಚಂಡಮಾರುತದ ಪ್ರಭಾವದಿಂದ ಭಾರೀ ಗಾಳಿಯಿಂದ ಮನೆಯ ಚಾವಣಿಗಳು ಹಾರಿದ್ದು, ಪ್ರವಾಹದಲ್ಲಿ ಗ್ರಾಮಗಳು ಮುಳುಗಿ ಹೋಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪ್ರಬಲ ಚಂಡಮಾರುತ ಅಪ್ಪಳಿಸುವ ಮೊದಲೇ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಮತ್ತು ಮಧ್ಯದ್ವೀಪ ಪ್ರಾಂತ್ಯಗಳಲ್ಲಿ ವಿದ್ಯುತ್ ಕಡಿತಗೊಂಡಿದ್ದು, ಮೊಬೈಲ್ ನೆಟ್‌ವರ್ಕ್ ಇಲ್ಲದೆ ಜನ ಸಂಪರ್ಕ ಕಳೆದುಕೊಂಡಿದ್ದಾರೆ.

ಫಿಲಿಪೈನ್ಸ್​ನ ಜನಪ್ರಿಯ ಪ್ರವಾಸಿ ತಾಣವಾಗಿರುವ ಬೋಹೋಲ್‌ನ ಗವರ್ನರ್ ಆರ್ಥರ್ ಯಾಪ್ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಹಾನಿಗೊಳಗಾದ ದ್ವೀಪದ ಮೇಯರ್‌ಗಳು ತಮ್ಮ ಪಟ್ಟಣಗಳಲ್ಲಿ 49 ಜನ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ರೈ ಟೈಫೂನ್ (ಚಂಡಮಾರುತ) ದ್ವೀಪಸಮೂಹದ ದಕ್ಷಿಣ ಮತ್ತು ಮಧ್ಯ ಪ್ರದೇಶಗಳನ್ನು ಧ್ವಂಸಗೊಳಿಸಿದ್ದರಿಂದ 3,00,000ಕ್ಕೂ ಹೆಚ್ಚು ಜನರು ತಮ್ಮ ಮನೆಗಳು ಮತ್ತು ಬೀಚ್‌ಫ್ರಂಟ್ ರೆಸಾರ್ಟ್‌ಗಳನ್ನು ತೊರೆದಿದ್ದಾರೆ.

ಕಳೆದ ದಶಕಗಳಲ್ಲಿ ಫಿಲಿಪೈನ್ಸ್​ಗೆ ಅಪ್ಪಳಿಸಿದ ಅತ್ಯಂತ ಶಕ್ತಿಶಾಲಿ ಚಂಡಮಾರುತ ಇದಾಗಿದೆ. 18 ಸಾವಿರಕ್ಕೂ ಹೆಚ್ಚು ಮಿಲಿಟರಿ, ಪೊಲೀಸ್, ಕೋಸ್ಟ್ ಗಾರ್ಡ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಚಂಡಮಾರುತದಿಂದ ಹಾನಿಯಾದ ಪ್ರದೇಶಗಳಿಗೆ ತಲುಪಿದ್ದಾರೆ.

ಗಂಟೆಗೆ 195 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸೂಪರ್ ಟೈಫೂನ್ ಆಗಿ ಗುರುವಾರ ಚಂಡಮಾರುತವು ಫಿಲಿಪೈನ್ಸ್​ಗೆ ಅಪ್ಪಳಿಸಿದೆ. ಪ್ರವಾಹ ಪೀಡಿತ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಬಹುದು. ಅಲ್ಲಿ ಕೆಲವು ನಿವಾಸಿಗಳನ್ನು ಅವರ ಮೇಲ್ಛಾವಣಿಯಿಂದ ರಕ್ಷಿಸಲಾಯಿತು. ವಿಶಾಲವಾದ ದ್ವೀಪಸಮೂಹದ ಕೆಟ್ಟ ಪೀಡಿತ ಪ್ರದೇಶಗಳಲ್ಲಿ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳಲ್ಲಿ ಸಹಾಯ ಮಾಡಲು ಸಾವಿರಾರು ಮಿಲಿಟರಿ, ಪೊಲೀಸ್, ಕೋಸ್ಟ್ ಗಾರ್ಡ್ ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.

ಚಂಡಮಾರುತದಿಂದ ಸರಕುಗಳು ಮತ್ತು ಇತರ ಪರಿಹಾರ ಸಾಮಗ್ರಿಗಳನ್ನು ಸಾಗಿಸುವ ಫಿಲಿಪೈನ್ ನೌಕಾಪಡೆಯ ಹಡಗು ಸೋಮವಾರ ಬೋಹೋಲ್‌ಗೆ ಹೊರಡಲಿದೆ.

ಇದನ್ನೂ ಓದಿ: ಅಮೇರಿಕಾ: ಚಂಡಮಾರುತಕ್ಕೆ ನಲುಗಿದ ಐದು ರಾಜ್ಯಗಳು; 80ಕ್ಕೂ ಅಧಿಕ ಜನರ ದುರ್ಮರಣ

Cyclone Jawad: ಜವಾದ್​ ಚಂಡಮಾರುತದಿಂದ ಒಡಿಶಾದಲ್ಲಿ ವಿಪರೀತ ಮಳೆ; ಆಂಧ್ರದ ಕರಾವಳಿ ತೀರಗಳಿಂದ 54 ಸಾವಿರ ಜನರ ಸ್ಥಳಾಂತರ

ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ