AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ರೋಗಿಗಳಿಗೆ ಕೂದಲು ದಾನ ಮಾಡಿದ ಎರಡು ವರ್ಷದ ಬಾಲಕ!

ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್​ ಹೆಸರಿನ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಈ ಆಂದೋಲನಕ್ಕೆ ತಕ್ಷ್​ ಕೂಡ ಬೆಂಬಲ ಸೂಚಿಸಿದ್ದಾನೆ.

ಕ್ಯಾನ್ಸರ್​ ರೋಗಿಗಳಿಗೆ ಕೂದಲು ದಾನ ಮಾಡಿದ ಎರಡು ವರ್ಷದ ಬಾಲಕ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 8:15 PM

Share

ದುಬೈ: ಭಾರತ ಮೂಲದ ಎರಡು ವರ್ಷದ ಬಾಲಕ ಯುಎಇನಲ್ಲಿ ಕ್ಯಾನ್ಸರ್​ ರೋಗಿಗಳಿಗೆ ಕೂದಲನ್ನು ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾನೆ. ಅಷ್ಟೇ ಅಲ್ಲ, ಕ್ಯಾನರ್​ ರೋಗಿಗೆ ಕೂದಲು ನೀಡಿದ ಅತಿ ಸಣ್ಣ ವಯಸ್ಸಿನ ಹುಡುಗ ಈತ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ.

ಭಾರತ ಮೂಲದ ತಕ್ಷ್​ ಜೈನ್​ ಕೂದಲು ದಾನ ಮಾಡಿದ ಬಾಲಕ. ಈತನ ವಯಸ್ಸು ಕೇವಲ 2 ವರ್ಷದ ಹತ್ತು ತಿಂಗಳು. ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್​ ಹೆಸರಿನ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಈ ಆಂದೋಲನಕ್ಕೆ ತಕ್ಷ್​ ಕೂಡ ಬೆಂಬಲ ಸೂಚಿಸಿದ್ದಾನೆ.

ನನ್ನ ಮಗಳು 2019ರಲ್ಲಿ ಕ್ಯಾನ್ಸರ್​ ರೋಗಿಗಳಿಗೆ ಕೂದಲು ನೀಡಿದ್ದಳು. ಇದನ್ನು ನೋಡಿ ತಕ್ಷ್​ ಸ್ಫೂರ್ತಿ ಪಡೆದುಕೊಂಡಿದ್ದ. ಆತ ಸದಾ ಕೂದಲು ದಾನ ನೀಡಬೇಕು ಎಂದು ಹೇಳಿಕೊಳ್ಳುತ್ತಿದ್ದ. ಇದು ನನಗೆ ತುಂಬಾ ಖುಷಿ ನೀಡಿತ್ತು. ಹೀಗಾಗಿ, ಆತನ ತಲೆ ಕೂದಲನ್ನು ಬೆಳೆಯಲು ಬಿಟ್ಟಿದ್ದೆ ಎಂದು ಹೇಳಿದ್ದಾರೆ ತಕ್ಷ್​ನ ತಾಯಿ.

ಗುರುವಾರ ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಯುಎಇನ ಒಟ್ಟು 7 ಶಾಲೆಗಳು ಇದರ ಭಾಗವಾಗಿದೆ. ತಕ್ಷ್​ ಕೆಲಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇವರ ಕೆಲಸದಿಂದ ಸ್ಫೂರ್ತಿ ಪಡೆದ ಅನೇಕರು ಕೂದಲು ದಾನ ಮಾಡಲು ಮುಂದೆ ಬಂದಿದ್ದಾರೆ.

World Cancer Day 2021 ‘ಕ್ಯಾನ್ಸರ್ ಬಂದಾಕ್ಷಣ ಹೆದರಬೇಡ್ರಿ’- ಖ್ಯಾತ ಕ್ಯಾನ್ಸರ್​ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?