AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ರೋಗಿಗಳಿಗೆ ಕೂದಲು ದಾನ ಮಾಡಿದ ಎರಡು ವರ್ಷದ ಬಾಲಕ!

ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್​ ಹೆಸರಿನ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಈ ಆಂದೋಲನಕ್ಕೆ ತಕ್ಷ್​ ಕೂಡ ಬೆಂಬಲ ಸೂಚಿಸಿದ್ದಾನೆ.

ಕ್ಯಾನ್ಸರ್​ ರೋಗಿಗಳಿಗೆ ಕೂದಲು ದಾನ ಮಾಡಿದ ಎರಡು ವರ್ಷದ ಬಾಲಕ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 8:15 PM

Share

ದುಬೈ: ಭಾರತ ಮೂಲದ ಎರಡು ವರ್ಷದ ಬಾಲಕ ಯುಎಇನಲ್ಲಿ ಕ್ಯಾನ್ಸರ್​ ರೋಗಿಗಳಿಗೆ ಕೂದಲನ್ನು ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾನೆ. ಅಷ್ಟೇ ಅಲ್ಲ, ಕ್ಯಾನರ್​ ರೋಗಿಗೆ ಕೂದಲು ನೀಡಿದ ಅತಿ ಸಣ್ಣ ವಯಸ್ಸಿನ ಹುಡುಗ ಈತ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ.

ಭಾರತ ಮೂಲದ ತಕ್ಷ್​ ಜೈನ್​ ಕೂದಲು ದಾನ ಮಾಡಿದ ಬಾಲಕ. ಈತನ ವಯಸ್ಸು ಕೇವಲ 2 ವರ್ಷದ ಹತ್ತು ತಿಂಗಳು. ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್​ ಹೆಸರಿನ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಈ ಆಂದೋಲನಕ್ಕೆ ತಕ್ಷ್​ ಕೂಡ ಬೆಂಬಲ ಸೂಚಿಸಿದ್ದಾನೆ.

ನನ್ನ ಮಗಳು 2019ರಲ್ಲಿ ಕ್ಯಾನ್ಸರ್​ ರೋಗಿಗಳಿಗೆ ಕೂದಲು ನೀಡಿದ್ದಳು. ಇದನ್ನು ನೋಡಿ ತಕ್ಷ್​ ಸ್ಫೂರ್ತಿ ಪಡೆದುಕೊಂಡಿದ್ದ. ಆತ ಸದಾ ಕೂದಲು ದಾನ ನೀಡಬೇಕು ಎಂದು ಹೇಳಿಕೊಳ್ಳುತ್ತಿದ್ದ. ಇದು ನನಗೆ ತುಂಬಾ ಖುಷಿ ನೀಡಿತ್ತು. ಹೀಗಾಗಿ, ಆತನ ತಲೆ ಕೂದಲನ್ನು ಬೆಳೆಯಲು ಬಿಟ್ಟಿದ್ದೆ ಎಂದು ಹೇಳಿದ್ದಾರೆ ತಕ್ಷ್​ನ ತಾಯಿ.

ಗುರುವಾರ ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಯುಎಇನ ಒಟ್ಟು 7 ಶಾಲೆಗಳು ಇದರ ಭಾಗವಾಗಿದೆ. ತಕ್ಷ್​ ಕೆಲಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇವರ ಕೆಲಸದಿಂದ ಸ್ಫೂರ್ತಿ ಪಡೆದ ಅನೇಕರು ಕೂದಲು ದಾನ ಮಾಡಲು ಮುಂದೆ ಬಂದಿದ್ದಾರೆ.

World Cancer Day 2021 ‘ಕ್ಯಾನ್ಸರ್ ಬಂದಾಕ್ಷಣ ಹೆದರಬೇಡ್ರಿ’- ಖ್ಯಾತ ಕ್ಯಾನ್ಸರ್​ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?