AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ

19 Indians Among 35 Held In UAE Over Misleading Content Amid West Asia Conflict: ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ತಪ್ಪಾಗಿ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ 19 ಭಾರತೀಯರು ಸೇರಿ 35 ಮಂದಿಯನ್ನು ಬಂಧಿಸುವಂತೆ ಯುಎಇ ಆಡಳಿತ ಆದೇಶ ಮಾಡಿದೆ. ಎಐ ಜನರೇಟೆಡ್ ವಿಡಿಯೋಗಳು, ಬೇರೆಲ್ಲೋ ಆದ ಘಟನೆ ಇಲ್ಲೇ ಆಯಿತು ಎಂಬಂತೆ ಬಿಂಬಿಸುವ ವಿಡಿಯೋಗಳು ಇತ್ಯಾದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಈ ಆರೋಪಿಗಳು ಹಂಚಿಕೊಂಡಿದ್ದರೆನ್ನಲಾಗಿದೆ.

ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ
ಇರಾನ್ ಯುದ್ಧ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 16, 2026 | 1:47 PM

Share

ದುಬೈ, ಮಾರ್ಚ್ 16: ಇರಾನ್-ಅಮೆರಿಕ ಯುದ್ಧಕ್ಕೆ (Iran war) ಸಂಬಂಧಿಸಿದ ಘಟನೆಗಳು ಮತ್ತು ಮಾಹಿತಿಯನ್ನು ತಪ್ಪಾಗಿ ಹಂಚಿಕೊಂಡ ಆರೋಪದ ಮೇಲೆ 35 ವ್ಯಕ್ತಿಗಳನ್ನು ಯುಎಇ ಆಡಳಿತ ಬಂಧಿಸುತ್ತಿದೆ. ಈ 35 ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಭಾರತೀಯರೇ ಇದ್ದಾರೆ. ವರದಿಗಳ ಪ್ರಕಾರ ಒಟ್ಟು 19 ಮಂದಿ ಭಾರತೀಯರನ್ನು ವಶಕ್ಕೆ ಪಡೆಯಲಾಗಿದೆ. ಈ ಎಲ್ಲಾ 35 ಮಂದಿಯನ್ನು ತ್ವರಿತ ವಿಚಾರಣೆಗೆ ಒಳಪಡಿಸಲಾಗಲಿದೆ.

ಆರಂಭಿಕ ತನಿಖೆಯಲ್ಲಿ ಗೊತ್ತಾದ ಮಾಹಿತಿ ಪ್ರಕಾರ, ಈ 35 ಜನರು ಯುದ್ಧದ ವಿಚಾರಗಳನ್ನು ತಪ್ಪಾಗಿ ಬಿಂಬಿಸುವಂತೆ ಕ್ಲಿಪಿಂಗ್​ಗಳನ್ನು ಹಂಚಿಕೊಂಡಿದ್ದಾರೆ. ಶನಿವಾರ (ಮಾ. 14) ಹತ್ತು ಜನರನ್ನು ಬಂಧಿಸಲು ಆದೇಶಿಸಲಾಗಿತ್ತು. ಈ 10 ಮಂದಿಯಲ್ಲಿ ಇಬ್ಬರು ಭಾರತೀಯರು ಇದ್ದಾರೆ. ಇದೀಗ 25 ಮಂದಿಯ ಮತ್ತೊಂದು ಪಟ್ಟಿ ಇದೆ. ಈ ಹೊಸ ಪಟ್ಟಿಯಲ್ಲಿ 17 ಭಾರತೀಯರಿದ್ದಾರೆ. ಈ ಎರಡು ಪಟ್ಟಿಗಳಲ್ಲಿ ಭಾರತೀಯರ ಸಂಖ್ಯೆ 19 ಇದೆ.

ಇದನ್ನೂ ಓದಿ: ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ಆರೋಪಿಗಳನ್ನು ಅವರು ಮಾಡಿದ ಕೃತ್ಯದ ತೀವ್ರತೆಯ ಆಧಾರದ ಮೇಲೆ ಮೂರು ಗುಂಪುಗಳಲ್ಲಿ ಸೇರಿಸಲಾಗಿದೆ. ಯುದ್ಧದಲ್ಲಿ ನಡೆಯುತ್ತಿರುವ ಮಿಸೈಲ್ ದಾಳಿ ಇತ್ಯಾದಿ ಘಟನೆಗಳ ಕ್ಲಿಪಿಂಗ್​ಗಳನ್ನು ಹಂಚಿಕೊಂಡಿರುವುದು; ಎಐ ಮೂಲಕ ಕ್ಲಿಪಿಂಗ್​ಗಳನ್ನು ತಿರುಚಿರುವುದು; ದಾಳಿ ಕ್ರಮಗಳನ್ನು ವೈಭವೀಕರಿಸಿರುವುದು, ಈ ರೀತಿ ಆರೋಪಿಗಳನ್ನು ವರ್ಗೀಕರಿಸಲಾಗದೆ.

ದುಬೈ, ಅಬುಧಾಬಿ, ಶಾರ್ಜಾ ನಗರಗಳನ್ನು ಒಳಗೊಂಡಿರುವ ಯುಎಇಯ ಮೇಲೆ ಇರಾನ್ ಹಲವು ಬಾರಿ ಮಿಸೈಲ್ ದಾಳಿ ಮಾಡಿದೆ. ಈ ಕೆಲ ಕ್ಷಿಪಣಿಗಳನ್ನು ಗಾಳಿಯಲ್ಲೇ ತಡೆಯಾಗಿದೆ. ಇಂಥ ಘಟನೆಗಳ ವಿಡಿಯೋಗಳನ್ನು ಡಿಜಿಟಲ್ ಪ್ಲಾಟ್​ಫಾರ್ಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಆದರೆ, ಹೀಗೆ ಹಂಚಿಕೊಳ್ಳುವಾಗ ಯುದ್ಧೋನ್ಮಾದವಿರುವಂತೆ ಬಿಂಬಿಸುವಂತಹ ಕಾಮೆಂಟರಿಗಳನ್ನು ಮತ್ತು ಮ್ಯೂಸಿಕ್ ಅನ್ನು ಸೇರಿಸಿರುವ ಆರೋಪವು ಮೊದಲ ಗುಂಪಿನ ಮಂದಿಯ ಮೇಲಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ರಕ್ಷಣೆ: ಭಾರತದ ನೆರವಿಗೆ ಅಮೆರಿಕ ಯಾಚನೆ?

ಎರಡನೇ ಗುಂಪಿನ ಜನರು ಎಐ ಸೃಷ್ಟಿತ ವಿಶುವಲ್ ಅಥವಾ ದೇಶ ಹೊರಗೆಲ್ಲೋ ನಡೆದ ಘಟನೆಯ ವಿಡಿಯೋವನ್ನು ಯುಎಇಯಲ್ಲೇ ನಡೆದಿದೆ ಎನ್ನುವಂತೆ ಮರುಬಳಕೆ ಮಾಡಿದ್ಧಾರೆ.

ಮೂರನೇ ಗುಂಪಿನಲ್ಲಿರುವ ಆರೋಪಿಗಳು ದಾಳಿ ಮಾಡಿದ ದೇಶ ಹಾಗೂ ಅದರ ರಾಜಕೀಯ ಮತ್ತು ಮಿಲಿಟರಿ ನಾಯಕತ್ವನ್ನು ಹಾಗೂ ಯುಎಇಯಲ್ಲಿ ಅವರ ದಾಳಿಯನ್ನು ವೈಭವೀಕರಿಸುವ ಕೆಲಸ ಮಾಡಿದ ಆರೋಪ ಇದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!