AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ. ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. […]

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ
KUSHAL V
| Edited By: |

Updated on: Jul 20, 2020 | 3:06 PM

Share

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ.

ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. ಕಾರ್​ ಗಾತ್ರದ ಈ ಉಪಗ್ರಹ ಸತತ ಏಳು ತಿಂಗಳ ಕಾಲ ಮಂಗಳದತ್ತ ಕ್ರಮಿಸಲಿದ್ದು ನಂತರ ಮಂಗಳ ಗ್ರಹದ ಹವಾಮಾನ ಮತ್ತು ವಾತಾವರಣದ ಬಗ್ಗೆ ಸಂಶೋಧನೆ ನಡೆಸಲಿದೆ.

ಮಧ್ಯಪ್ರಾಚ್ಯದ UAE ದೇಶಕ್ಕೆ ಈ ಉಪಗ್ರಹದ ಉಡ್ಡಯನ ಬಹಳಷ್ಟು ಮಹತ್ವ ಪಡೆದಿದೆ. ಡಿಸೆಂಬರ್​ 2021 ರಲ್ಲಿ ಈ ಸಂಯುಕ್ತ ಅರಬ್​ ರಾಷ್ಟ್ರ ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ನಾಡಿನ ಯುವಕರಿಗೆ ಭವಿಷ್ಯದ ಬಗ್ಗೆ ಭರವಸೆ (Hope) ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನ ಕೈಗೊಂಡಿದೆ. 2014ರಲ್ಲಿ ಪ್ರಾರಂಭವಾದ ಈ ಯೋಜನೆಯ ಕನಸು ಇದೀಗ ನನಸಾಗಿದೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ