AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಜತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತಗೊಳಿಸಿದ ಯುಎಇ

ಯುಎಇ ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ ಮತ್ತು ಹಣಕಾಸು ವಹಿವಾಟುಗಳನ್ನು ಸ್ಥಗಿತಗೊಳಿಸಿದೆ. ಇರಾನ್‌ನ ಕ್ಷಿಪಣಿ ಹಾರಾಟ ಮತ್ತು ಗಲ್ಫ್ ವಲಯದ ಹೆಚ್ಚುತ್ತಿರುವ ಉದ್ವಿಗ್ನತೆಯೇ ಇದಕ್ಕೆ ಕಾರಣ. ಇರಾನ್ ಆರೋಪಗಳನ್ನು ನಿರಾಕರಿಸಿದರೂ, ಈ ನಿರ್ಧಾರ ಇರಾನ್ ಆರ್ಥಿಕತೆಗೆ ಮತ್ತು ಜಾಗತಿಕ ಸರಕು ಸಾಗಣೆಗೆ ದೊಡ್ಡ ಹೊಡೆತ ನೀಡಲಿದೆ. ದುಬೈ ಇರಾನ್‌ಗೆ ಪ್ರಮುಖ ಮರು-ರಫ್ತು ಕೇಂದ್ರವಾಗಿತ್ತು.

ಇರಾನ್ ಜತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತಗೊಳಿಸಿದ ಯುಎಇ
ವ್ಯಾಪಾರ-ವಹಿವಾಟು
ನಯನಾ ರಾಜೀವ್
|

Updated on: Aug 19, 2026 | 7:42 AM

Share

ಅಬುಧಾಬಿ, ಆಗಸ್ಟ್​ 19: ಗಲ್ಫ್ ವಲಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದಲೇ ಅಮಾನತುಗೊಳಿಸಿದೆ. ಯುಎಇ ಕರಾವಳಿ ಹಾಗೂ ಸಮುದ್ರ ವ್ಯಾಪ್ತಿಯಲ್ಲಿ ಇರಾನ್ (Iran)ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂಬ ಗಂಭೀರ ಘಟನೆಯ ಬೆನ್ನಲ್ಲೇ ಯುಎಇ ವಿದೇಶಾಂಗ ಸಚಿವಾಲಯ ಈ ಕಠಿಣ ನಿರ್ಧಾರ ಕೈಗೊಂಡಿದೆ.

ಕ್ಷಿಪಣಿ ಎಚ್ಚರಿಕೆ ಮತ್ತು ಯುಎಇ ನಿರ್ಧಾರ

ವ್ಯಾಪಾರ ಸ್ಥಗಿತ: ಯುಎಇ ವಿದೇಶಾಂಗ ಸಚಿವಾಲಯದ ಸಂವಹನ ನಿರ್ದೇಶಕಿ ಅಫ್ರಾ ಅಲ್ ಹಮೇಲಿ, ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದರಿಂದ ಇರಾನ್ ಜೊತೆಗಿನ ಎಲ್ಲಾ ಆರ್ಥಿಕ ಸಂಬಂಧಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಕ್ಷಿಪಣಿ ಬೆದರಿಕೆಯ ಹಿನ್ನೆಲೆಯಲ್ಲಿ ಯುಎಇ ಆಂತರಿಕ ಸಚಿವಾಲಯವು ದೇಶದ ನಿವಾಸಿಗಳಿಗೆ ತಕ್ಷಣವೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಮೊಬೈಲ್ ಮೂಲಕ ತುರ್ತು ಎಚ್ಚರಿಕೆ ರವಾನಿಸಿತ್ತು. ಇರಾನ್‌ನಿಂದ ಹಾರಿಸಲಾದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಒಂದು ಯುಎಇಯ ಜಲಪ್ರದೇಶದ ಹೊರಗೆ ಹಾಗೂ ಮತ್ತೊಂದು ಸಮುದ್ರ ವ್ಯಾಪ್ತಿಯೊಳಗೆ ಬಿದ್ದಿರುವುದನ್ನು ಯುಎಇ ವಾಯು ರಕ್ಷಣಾ ಪಡೆಗಳು ಪತ್ತೆಹಚ್ಚಿವೆ.

ಮತ್ತಷ್ಟು ಓದಿ: ಇರಾನ್ ಯುದ್ಧದ ನಡುವೆ ದುಬೈನ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ 7 ಸ್ಫೋಟ

ಆರೋಪ ನಿರಾಕರಿಸಿದ ಇರಾನ್

ಯುಎಇ ಮಾಡಿರುವ ಕ್ಷಿಪಣಿ ದಾಳಿಯ ಆರೋಪವನ್ನು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಕೈ ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಇದು ಸುಳ್ಳು ಹೇಳಿಕೆ ಎಂದು ಕರೆದಿದ್ದಾರೆ. ಅಮೆರಿಕದೊಂದಿಗೆ ಶಾಂತಿ ಒಪ್ಪಂದ ಏರ್ಪಡುವವರೆಗೆ ಗಲ್ಫ್ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿ ಯನ್ನು ಮುಚ್ಚುವುದಾಗಿ ಇರಾನ್ ಎಚ್ಚರಿಕೆ ನೀಡಿದೆ.

ಇತ್ತೀಚಿನ ವಾರಗಳಲ್ಲಿ ಯುಎಇಯ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಅಡ್ನಾಕ್ ಟ್ಯಾಂಕರ್‌ಗಳ ಮೇಲೆ ನಿರಂತರ ದಾಳಿಗಳು ನಡೆದಿದ್ದು, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತೀವ್ರಗೊಂಡಿದೆ.

ಆರ್ಥಿಕ ಪರಿಣಾಮ: ದುಬೈ ಮತ್ತು ಯುಎಇ ಮಾರುಕಟ್ಟೆಯು ಇರಾನ್‌ಗೆ ಪ್ರಮುಖ ಮರು-ರಫ್ತು ಕೇಂದ್ರವಾಗಿತ್ತು. ಈ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿರುವುದು ಇರಾನ್ ಆರ್ಥಿಕತೆ ಮತ್ತು ಮಧ್ಯಪ್ರಾಚ್ಯದ ಜಾಗತಿಕ ಸರಕು ಸಾಗಣೆಯ ಮೇಲೆ ದೊಡ್ಡ ಹೊಡೆತ ನೀಡಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್