AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಬರ್ ಬಳಸಿ ಅಮೆರಿಕಕ್ಕೆ 800ಕ್ಕೂ ಅಧಿಕ ಭಾರತೀಯರ ಕಳ್ಳಸಾಗಣೆ: ಭಾರತ ಮೂಲದ ವ್ಯಕ್ತಿಗೆ 3 ವರ್ಷಗಳ ಜೈಲು ಶಿಕ್ಷೆ

ಕ್ಯಾಲಿಫೋರ್ನಿಯಾದ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಮಾನವ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಊಬರ್ ಬಳಸಿ ಅಮೆರಿಕಕ್ಕೆ 800ಕ್ಕೂ ಅಧಿಕ ಭಾರತೀಯರ ಕಳ್ಳಸಾಗಣೆ: ಭಾರತ ಮೂಲದ ವ್ಯಕ್ತಿಗೆ 3 ವರ್ಷಗಳ ಜೈಲು ಶಿಕ್ಷೆ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Jun 29, 2023 | 8:23 AM

ಕ್ಯಾಲಿಫೋರ್ನಿಯಾದ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಮಾನವ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ರೈಡ್ ಹೈಲಿಂಗ್ ಊಬರ್ ಆ್ಯಪ್ ಬಳಸಿ 800ಕ್ಕೂ ಹೆಚ್ಚು ಜನರನ್ನು ಕಳ್ಳಸಾಗಣೆ ಮಾಡಿದ್ದ. ಆರೋಪಿ ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಫೆಬ್ರವರಿಯಲ್ಲಿ ತಪ್ಪಿತಸ್ಥ ಎಂದು ಸಾಬೀತಾಗಿದೆ.

ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ. ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ.

ಮತ್ತಷ್ಟು ಓದಿ: ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ಜಾಲ ಬಹಿರಂಗ

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದ.

ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ