AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗಾಂಡಾದಲ್ಲಿ ಹೆಚ್ಚಿದ ಎಬೋಲಾ ಪ್ರಕರಣ, ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ

ಕಂಪಾಲಾ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಭಾನುವಾರದಂದು ಒಂಬತ್ತು ಜನರಿಗೆ ಎಬೋಲಾಗೆ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಜೇನ್ ರುತ್ ಅಸೆಂಗ್...

ಉಗಾಂಡಾದಲ್ಲಿ ಹೆಚ್ಚಿದ ಎಬೋಲಾ ಪ್ರಕರಣ, ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 24, 2022 | 3:41 PM

Share

ಕಂಪಾಲಾ(ಉಗಾಂಡಾ) – ಉಗಾಂಡಾದ (Uganda) ಅಧಿಕಾರಿಗಳು ಶುಕ್ರವಾರದಿಂದ ರಾಜಧಾನಿಯಲ್ಲಿ 14 ಎಬೋಲಾ (Ebola) ಪ್ರಕರಣಗಳನ್ನು ವರದಿ ಮಾಡಿದ್ದಾರೆ. ಪೂರ್ವ ಆಫ್ರಿಕಾದ ಒಳ ಪ್ರದೇಶದಲ್ಲಿ ಈ ರೋಗ ಏಕಾಏಕಿ ಕಾಣಿಸಿಕೊಂಡ ಒಂದು ತಿಂಗಳ ನಂತರ ಸೋಂಕಿನಲ್ಲಿ ಆತಂಕಕಾರಿ ಹೆಚ್ಚಳವಾಗಿದೆ. ಕಂಪಾಲಾ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಭಾನುವಾರದಂದು ಒಂಬತ್ತು ಜನರಿಗೆ ಎಬೋಲಾಗೆ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಜೇನ್ ರುತ್ ಅಸೆಂಗ್ ಸೋಮವಾರ ಹೇಳಿದ್ದಾರೆ. ಆಫ್ರಿಕಾದ ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಕಳೆದ ವಾರ ಉಗಾಂಡಾದಲ್ಲಿ ಎಬೋಲಾ ವೇಗವಾಗಿ ವಿಕಸನಗೊಳ್ಳುತ್ತಿದ್ದು ಇದು ಆರೋಗ್ಯ ಕಾರ್ಯಕರ್ತರಿಗೆ ಸವಾಲಿನ ಪರಿಸ್ಥಿತಿ ತಂದೊಡ್ಡಿದೆ ಎಂದಿದ್ದಾರೆ. ಉಗಾಂಡಾದ ಆರೋಗ್ಯ ಅಧಿಕಾರಿಗಳು ಸೆಪ್ಟೆಂಬರ್ 20 ರಿಂದ 75 ಎಬೋಲಾ ಪ್ರಕರಣಗಳನ್ನು ದೃಢಪಡಿಸಿದ್ದಾರೆ. ಈವರೆಗೆ 28 ಸಾವು ವರದಿ ಆಗಿದ್ದು 19 ಸಕ್ರಿಯ ಪ್ರಕರಣಗಳಿವೆ. ಕಂಪಾಲಾದಿಂದ ಪಶ್ಚಿಮಕ್ಕೆ 150 ಕಿಲೋಮೀಟರ್ (93 ಮೈಲುಗಳು) ಕೃಷಿ ಸಮುದಾಯದಲ್ಲಿ ಏಕಾಏಕಿ ದೃಢೀಕರಿಸುವ ಮೊದಲು ಎಬೋಲಾದಿಂದ ಯಾವುದೇ ಸಾವು ವರದಿ ಆಗಿಲ್ಲ.

ಏಕಾಏಕಿ ಎಬೋಲಾ ಹರಡಬಹುದೆಂಬ ಭಯದಿಂದಾಗಿ ಎಬೋಲಾ ಪ್ರಕರಣಗಳಿದ್ದ ಐದು ಜಿಲ್ಲೆಗಳ ಪೈಕಿ ಎರಡರಲ್ಲಿ ರಾತ್ರಿಯ ಕರ್ಫ್ಯೂ ಸೇರಿದಂತೆ ಲಾಕ್ ಡೌನ್ ಮಾಡಲಾಗಿದೆ. ಎಬೋಲಾ ಸೋಂಕಿತ ವ್ಯಕ್ತಿಯೊಬ್ಬರು ಕಂಪಾಲಾದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಈ ಕ್ರಮಗಳನ್ನು ಕೈಗೊಳ್ಳಲಾಯಿತು.

ಸೋಮವಾರ ವರದಿಯಾದ ಒಂಬತ್ತು ಹೊಸ ಪ್ರಕರಣಗಳು ಇದೇ ಮಾದರಿಯನ್ನು ಅನುಸರಿಸುತ್ತವೆ. ಏಕೆಂದರೆ ಅವರೆಲ್ಲರೂ ಎಬೋಲಾ ಹಾಟ್‌ಸ್ಪಾಟ್‌ನಿಂದ ಪ್ರಯಾಣಿಸಿದ ಮತ್ತು ಮುಲಾಗೊ ಎಂದು ಕರೆಯಲ್ಪಡುವ ಕಂಪಾಲಾದ ಉನ್ನತ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಎಬೋಲಾ-ಸೋಂಕಿತ ರೋಗಿಯ ಸಂಪರ್ಕದಲ್ಲಿದ್ದವರಾಗಿದ್ದಾರೆ.

ಉಗಾಂಡಾದಲ್ಲಿರುವ ಎಬೋಲಾದ ಸುಡಾನ್ ತಳಿಗೆ ಸದ್ಯ ಯಾವುದೇ ಲಸಿಕೆ ಇಲ್ಲ.

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?