AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗೋಲಿ ಬಿಡಿಸಿ.. ದೀಪ ಬೆಳಗಿಸಿ.. ಹಬ್ಬವನ್ನು ಸಂಭ್ರಮಿಸಿದ ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್

ಬ್ರಿಟನ್​ನ ಹಣಕಾಸು ಸಚಿವ ರಿಷಿ ಸುನಕ್ ಇಂದು ಲಂಡನ್​ನ ತಮ್ಮ ನಿವಾಸದ ಎದುರು ರಂಗೋಲಿ ಬಿಡಿಸಿ, ದೀಪವನ್ನು ಬೆಳಗುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿದರು. ಇನ್ಫೋಸಿಸ್ ಕಂಪನಿಯ ಸಂಸ್ಥಾಪಕ ನಾರಾಯಣ ಮೂರ್ತಿಯವರ ಅಳಿಯರಾಗಿರುವ ರಿಷಿ ಸುನಕ್ ನಾನೊಬ್ಬ ಹೆಮ್ಮೆಯ ಹಿಂದೂ ಎಂಬ ವಿಚಾರದ ಬಗ್ಗೆ ಮಾತನಾಡಿ ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ದೀಪವಳಿಯೂ ಒಂದು. ದೀಪಾವಳಿ ಪ್ರತಿಯೊಬ್ಬರ ಜೀವನದಲ್ಲಿ ಕತ್ತಲೆಯನ್ನು ಸರಿಸಿ ಬೆಳಕನ್ನು ಹರಿಸುವ ಹಬ್ಬವಾಗಿದೆ ಎಂದು ಹೇಳಿದರು. ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಇಂಗ್ಲೆಂಡ್​ನಲ್ಲಿ ಲಾಕ್​ಡೌನ್​ […]

ರಂಗೋಲಿ ಬಿಡಿಸಿ.. ದೀಪ ಬೆಳಗಿಸಿ.. ಹಬ್ಬವನ್ನು ಸಂಭ್ರಮಿಸಿದ ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್
KUSHAL V
|

Updated on: Nov 14, 2020 | 8:21 PM

Share

ಬ್ರಿಟನ್​ನ ಹಣಕಾಸು ಸಚಿವ ರಿಷಿ ಸುನಕ್ ಇಂದು ಲಂಡನ್​ನ ತಮ್ಮ ನಿವಾಸದ ಎದುರು ರಂಗೋಲಿ ಬಿಡಿಸಿ, ದೀಪವನ್ನು ಬೆಳಗುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿದರು. ಇನ್ಫೋಸಿಸ್ ಕಂಪನಿಯ ಸಂಸ್ಥಾಪಕ ನಾರಾಯಣ ಮೂರ್ತಿಯವರ ಅಳಿಯರಾಗಿರುವ ರಿಷಿ ಸುನಕ್ ನಾನೊಬ್ಬ ಹೆಮ್ಮೆಯ ಹಿಂದೂ ಎಂಬ ವಿಚಾರದ ಬಗ್ಗೆ ಮಾತನಾಡಿ ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ದೀಪವಳಿಯೂ ಒಂದು. ದೀಪಾವಳಿ ಪ್ರತಿಯೊಬ್ಬರ ಜೀವನದಲ್ಲಿ ಕತ್ತಲೆಯನ್ನು ಸರಿಸಿ ಬೆಳಕನ್ನು ಹರಿಸುವ ಹಬ್ಬವಾಗಿದೆ ಎಂದು ಹೇಳಿದರು.

ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಇಂಗ್ಲೆಂಡ್​ನಲ್ಲಿ ಲಾಕ್​ಡೌನ್​ ಜಾರಿಗೊಳಿಸಿದ್ದು, ಒಬ್ಬರನೊಬ್ಬರು ಭೇಟಿ ಮಾಡದೆ ಇರುವುದು ತೀರಾ ಕಷ್ಟಕರವಾಗಿದೆ. ಇದು ನನಗೂ ತಿಳಿದಿದೆ. ಆದರೆ, ಈ ಸಮಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರಳವಾಗಿ ಮತ್ತು ಜವಾಬ್ದಾರಿಯಿಂದ ಹಬ್ಬವನ್ನು ಆಚರಿಸುವುದು ಸೂಕ್ತ. ಈಗಾಗಲೇ ವೈರಸ್ ಹರಡುವುದನ್ನು ತಡೆಯುವಲ್ಲಿ ಎಡವಿದ್ದೇವೆ. ಇಂತಹ ನಿರ್ಲಕ್ಷ್ಯ ಮತ್ತಷ್ಟು ಕಠಿಣ ಪರಿಸ್ಥಿತಿ ತಂದೊಡ್ಡುತ್ತದೆ ಎಂಬ ಎಚ್ಚರಿಕೆಯನ್ನು ಸಹ ನೀಡಿದರು.

ಮುಂಬರುವ ದಿನಗಳಲ್ಲಿ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುವ ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರಲಿದೆ. ಆದರೆ ಈ ಕೊರೋನಾ ಕಾಲದಲ್ಲಿ ಎಚ್ಚರಿಕೆಯಿಂದ ಇರಬೇಕು. ಬೇಜವಾಬ್ದಾರಿತನದಿಂದ ವರ್ತಿಸಿದರೆ ಮುಂದಿನ ದಿನಗಳಲ್ಲಿ ಎದುರಾಗುವ ಸಂತೋಷದ ಘಳಿಗೆಯನ್ನು ಅನುಭವಿಸಲು ಸಾಧ್ಯವಿಲ್ಲ ಎಂದು ತಿಳಿ ಹೇಳಿದರು.

-=-=

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್