Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್

ವಿಜಯ್ ಮಲ್ಯ ವಿರುದ್ಧ ಇಂಗ್ಲೆಂಡ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದೆ.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್
ವಿಜಯ್ ಮಲ್ಯ (ಸಂಗ್ರಹ ಚಿತ್ರ)
Follow us
|

Updated on:Jul 26, 2021 | 11:32 PM

ಉದ್ಯಮಿ ವಿಜಯ್ ಮಲ್ಯ ವಿರುದ್ಧ ಬ್ರಿಟನ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್​ ತನಗೆ ವಿಜಯ್ ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ಹಿಂಪಡೆಯಲು ವಿಶ್ವದ ವಿವಿದೆಡೆ ಇರುವ ವಿಜಯ ಮಲ್ಯ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಿದೆ.

ವಿಜಯ್ ಮಲ್ಯ ಅವರು ಬ್ಯಾಂಕ್​ಗಳಿಗೆ ಪಾವತಿಸಬೇಕಿರುವ ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ನೀಡಲು ಶಕ್ತರಾಗಿರುವಂತೆ ತೋರುವುದಿಲ್ಲ ಎಂದು ಬ್ರಿಟನ್​ನ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಜತೆಗೆ ವಿಜಯ್ ಮಲ್ಯ ಈ ಆದೇಶವನ್ನು ಪ್ರಶ್ನಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸಹ ಕೋರ್ಟ್​ ಪುರಸ್ಕರಿಸಿಲ್ಲ.

ಬ್ರಿಟನ್​ ಕೋರ್ಟ್​ನ ಈ ಆದೇಶದ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯಮಿ ವಿಜಯ್ ಮಲ್ಯ ಅವರಿಂದ ಬಾಕಿ ಹಣ ಹಿಂಪಡೆಯಲು ಬ್ಯಾಂಕ್​ಗಳಿಗೆ ಸಹಾಯವಾಗಲಿದೆ ಎಂದು ಹೇಳಲಾಗಿದೆ. ಉದ್ಯಮಿ ವಿಜಯ್ ಮಲ್ಯ ಸಾಲ ಹಿಂಪಡೆಯುವ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು ಎಂದು ಬ್ಯಾಂಕ್​ಗಳ ಒಕ್ಕೂಟ ಕೋರ್ಟ್​ಗೆ ಮನವಿ ಸಲ್ಲಿಸಿತ್ತು. 9 ವಿವಿಧ ಬ್ಯಾಂಕ್​ಗಳಿಗೆ 9 ಸಾವಿರ ಕೋಟಿ ಸಾಲವನ್ನು ಮರು ಪಾವತಿಸಿದೇ ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದರು.

ಇದನ್ನೂ ಓದಿ: 

How To: ಉಳಿತಾಯಕ್ಕೆ ಅತ್ಯುತ್ತಮ ಮಾರ್ಗ, ಮ್ಯೂಚುವಲ್​ ಫಂಡ್ ಹೂಡಿಕೆಗೆ ಇಲ್ಲಿದೆ ಐದು ಸರಳ ಟಿಪ್ಸ್​

ನಾ ಕಂಡ ಯಡಿಯೂರಪ್ಪ: ವರದಿಗಾರ ರಾಮ್ ಮೈಸೂರು ವಿಶೇಷ ಬರಹ

(UK court declares fugitive businessman vijay mallya bankrupt)

Published On - 10:55 pm, Mon, 26 July 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ