AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್

ವಿಜಯ್ ಮಲ್ಯ ವಿರುದ್ಧ ಇಂಗ್ಲೆಂಡ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದೆ.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್
ವಿಜಯ್ ಮಲ್ಯ (ಸಂಗ್ರಹ ಚಿತ್ರ)
guruganesh bhat
|

Updated on:Jul 26, 2021 | 11:32 PM

Share

ಉದ್ಯಮಿ ವಿಜಯ್ ಮಲ್ಯ ವಿರುದ್ಧ ಬ್ರಿಟನ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್​ ತನಗೆ ವಿಜಯ್ ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ಹಿಂಪಡೆಯಲು ವಿಶ್ವದ ವಿವಿದೆಡೆ ಇರುವ ವಿಜಯ ಮಲ್ಯ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಿದೆ.

ವಿಜಯ್ ಮಲ್ಯ ಅವರು ಬ್ಯಾಂಕ್​ಗಳಿಗೆ ಪಾವತಿಸಬೇಕಿರುವ ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ನೀಡಲು ಶಕ್ತರಾಗಿರುವಂತೆ ತೋರುವುದಿಲ್ಲ ಎಂದು ಬ್ರಿಟನ್​ನ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಜತೆಗೆ ವಿಜಯ್ ಮಲ್ಯ ಈ ಆದೇಶವನ್ನು ಪ್ರಶ್ನಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸಹ ಕೋರ್ಟ್​ ಪುರಸ್ಕರಿಸಿಲ್ಲ.

ಬ್ರಿಟನ್​ ಕೋರ್ಟ್​ನ ಈ ಆದೇಶದ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯಮಿ ವಿಜಯ್ ಮಲ್ಯ ಅವರಿಂದ ಬಾಕಿ ಹಣ ಹಿಂಪಡೆಯಲು ಬ್ಯಾಂಕ್​ಗಳಿಗೆ ಸಹಾಯವಾಗಲಿದೆ ಎಂದು ಹೇಳಲಾಗಿದೆ. ಉದ್ಯಮಿ ವಿಜಯ್ ಮಲ್ಯ ಸಾಲ ಹಿಂಪಡೆಯುವ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು ಎಂದು ಬ್ಯಾಂಕ್​ಗಳ ಒಕ್ಕೂಟ ಕೋರ್ಟ್​ಗೆ ಮನವಿ ಸಲ್ಲಿಸಿತ್ತು. 9 ವಿವಿಧ ಬ್ಯಾಂಕ್​ಗಳಿಗೆ 9 ಸಾವಿರ ಕೋಟಿ ಸಾಲವನ್ನು ಮರು ಪಾವತಿಸಿದೇ ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದರು.

ಇದನ್ನೂ ಓದಿ: 

How To: ಉಳಿತಾಯಕ್ಕೆ ಅತ್ಯುತ್ತಮ ಮಾರ್ಗ, ಮ್ಯೂಚುವಲ್​ ಫಂಡ್ ಹೂಡಿಕೆಗೆ ಇಲ್ಲಿದೆ ಐದು ಸರಳ ಟಿಪ್ಸ್​

ನಾ ಕಂಡ ಯಡಿಯೂರಪ್ಪ: ವರದಿಗಾರ ರಾಮ್ ಮೈಸೂರು ವಿಶೇಷ ಬರಹ

(UK court declares fugitive businessman vijay mallya bankrupt)

Published On - 10:55 pm, Mon, 26 July 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?