AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್

ವಿಜಯ್ ಮಲ್ಯ ವಿರುದ್ಧ ಇಂಗ್ಲೆಂಡ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದೆ.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್
ವಿಜಯ್ ಮಲ್ಯ (ಸಂಗ್ರಹ ಚಿತ್ರ)
guruganesh bhat
|

Updated on:Jul 26, 2021 | 11:32 PM

Share

ಉದ್ಯಮಿ ವಿಜಯ್ ಮಲ್ಯ ವಿರುದ್ಧ ಬ್ರಿಟನ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್​ ತನಗೆ ವಿಜಯ್ ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ಹಿಂಪಡೆಯಲು ವಿಶ್ವದ ವಿವಿದೆಡೆ ಇರುವ ವಿಜಯ ಮಲ್ಯ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಿದೆ.

ವಿಜಯ್ ಮಲ್ಯ ಅವರು ಬ್ಯಾಂಕ್​ಗಳಿಗೆ ಪಾವತಿಸಬೇಕಿರುವ ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ನೀಡಲು ಶಕ್ತರಾಗಿರುವಂತೆ ತೋರುವುದಿಲ್ಲ ಎಂದು ಬ್ರಿಟನ್​ನ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಜತೆಗೆ ವಿಜಯ್ ಮಲ್ಯ ಈ ಆದೇಶವನ್ನು ಪ್ರಶ್ನಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸಹ ಕೋರ್ಟ್​ ಪುರಸ್ಕರಿಸಿಲ್ಲ.

ಬ್ರಿಟನ್​ ಕೋರ್ಟ್​ನ ಈ ಆದೇಶದ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯಮಿ ವಿಜಯ್ ಮಲ್ಯ ಅವರಿಂದ ಬಾಕಿ ಹಣ ಹಿಂಪಡೆಯಲು ಬ್ಯಾಂಕ್​ಗಳಿಗೆ ಸಹಾಯವಾಗಲಿದೆ ಎಂದು ಹೇಳಲಾಗಿದೆ. ಉದ್ಯಮಿ ವಿಜಯ್ ಮಲ್ಯ ಸಾಲ ಹಿಂಪಡೆಯುವ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು ಎಂದು ಬ್ಯಾಂಕ್​ಗಳ ಒಕ್ಕೂಟ ಕೋರ್ಟ್​ಗೆ ಮನವಿ ಸಲ್ಲಿಸಿತ್ತು. 9 ವಿವಿಧ ಬ್ಯಾಂಕ್​ಗಳಿಗೆ 9 ಸಾವಿರ ಕೋಟಿ ಸಾಲವನ್ನು ಮರು ಪಾವತಿಸಿದೇ ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದರು.

ಇದನ್ನೂ ಓದಿ: 

How To: ಉಳಿತಾಯಕ್ಕೆ ಅತ್ಯುತ್ತಮ ಮಾರ್ಗ, ಮ್ಯೂಚುವಲ್​ ಫಂಡ್ ಹೂಡಿಕೆಗೆ ಇಲ್ಲಿದೆ ಐದು ಸರಳ ಟಿಪ್ಸ್​

ನಾ ಕಂಡ ಯಡಿಯೂರಪ್ಪ: ವರದಿಗಾರ ರಾಮ್ ಮೈಸೂರು ವಿಶೇಷ ಬರಹ

(UK court declares fugitive businessman vijay mallya bankrupt)

Published On - 10:55 pm, Mon, 26 July 21

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ