AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು ವಿದೇಶದ ಬಾದಲ್ ನಂಜುಡಸ್ವಾಮಿ! ಮೊಮ್ಮಕ್ಕಳ ಆಟಿಕೆ ಬಳಸಿ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆದ ಇಂಗ್ಲೆಂಡ್​ನ ವ್ಯಕ್ತಿ

ಇಂಗ್ಲೆಂಡ್​ನ ಎಸೆಕ್ಸ್​​​ನ ಕರಾವಳಿ ಪಟ್ಟಣ ಬ್ರೈಟ್​​ಲಿಂಗ್​ಸೀ ರಸ್ತೆ ಗುಂಡಿಗಳ ಬಗ್ಗೆ 66 ವರ್ಷದ ಆ್ಯಂಡಿ ಕಾನ್ರಾಯ್, ಮೊಮ್ಮಕ್ಕಳ ಆಟಿಕೆ ಬಳಸಿ ವಿಭಿನ್ನವಾಗಿ ಗಮನ ಸೆಳೆಯುವಂತೆ ಮಾಡಿದ್ದಾರೆ.

ಇವರು ವಿದೇಶದ ಬಾದಲ್ ನಂಜುಡಸ್ವಾಮಿ! ಮೊಮ್ಮಕ್ಕಳ ಆಟಿಕೆ ಬಳಸಿ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆದ ಇಂಗ್ಲೆಂಡ್​ನ ವ್ಯಕ್ತಿ
ರಸ್ತೆ ಗುಂಡಿ ಗಮನ ಸೆಳೆಯಲು ಹೀಗೊಂದು ಯಶಸ್ವಿ ಪ್ರಯತ್ನImage Credit source: Facebook
ಗಣಪತಿ ಶರ್ಮಾ
|

Updated on: Apr 10, 2023 | 7:12 PM

Share

ಲಂಡನ್: ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ರಸ್ತೆ ಗುಂಡಿಗಳ ಬಗ್ಗೆ ಗಮನ ಸೆಳೆಯಲು ಮಾಡಿದ್ದ ವಿಭಿನ್ನ ಪ್ರಯತ್ನಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಡಳಿತ ವರ್ಗದ ಗಮನ ಸೆಳೆದದ್ದು ಹಳೆಯ ವಿಚಾರ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಗಮನ ಸೆಳೆಯಲು ಅವರು ಚಂದ್ರಯಾನ -2 ಯೋಜನೆಯ ಸಂದರ್ಭದಲ್ಲೇ ಗಗನಯಾನಿಯಂತೆ ಪೋಷಾಕು ಧರಿಸಿ ರಸ್ತೆಗಳಲ್ಲಿ ಸಂಚರಿಸಿದ್ದರು. ಇದರ ಚಿತ್ರಗಳು ವಿಶ್ವ ಮಟ್ಟದಲ್ಲಿ ಗಮನ ಸೆಳೆದಿದ್ದವು. ಇದೀಗ ಇಂಗ್ಲೆಂಡ್​ನಲ್ಲೊಬ್ಬರು (England) ವ್ಯಕ್ತಿ ಬಾದಲ್ ನಂಜುಂಡಸ್ವಾಮಿ ಅವರಂತೆಯೇ ವಿಭಿನ್ನವಾಗಿ ರಸ್ತೆ ಗುಂಡಿಗಳ ಬಗ್ಗೆ ಗಮನ ಸೆಳೆದಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ.

ಇಂಗ್ಲೆಂಡ್​ನ ಎಸೆಕ್ಸ್​​​ನ ಕರಾವಳಿ ಪಟ್ಟಣ ಬ್ರೈಟ್​​ಲಿಂಗ್​ಸೀ ರಸ್ತೆ ಗುಂಡಿಗಳ ಬಗ್ಗೆ 66 ವರ್ಷದ ಆ್ಯಂಡಿ ಕಾನ್ರಾಯ್, ಮೊಮ್ಮಕ್ಕಳ ಆಟಿಕೆ ಬಳಸಿ ವಿಭಿನ್ನವಾಗಿ ಗಮನ ಸೆಳೆಯುವಂತೆ ಮಾಡಿದ್ದಾರೆ. ರಸ್ತೆ ಗುಂಡಿಗಳ ಮಧ್ಯದಲ್ಲಿ, ಸಮೀಪದಲ್ಲಿ ಆಟಿಕೆಗಳನ್ನು ಇರಿಸಿ ಅವುಗಳ ಫೋಟೊ ಕ್ಲಿಕ್ಕಿಸಿದ್ದಾರೆ. ನಂತರ ಅವುಗಳನ್ನು ಬ್ರೈಟ್​​ಲಿಂಗ್​ಸೀ ಎಂಬ ಫೇಸ್​​ಬುಕ್​ ಪುಟದಲ್ಲಿ ಅಪ್ಲೋಡ್ ಮಾಡಿದ್ದಾರೆ.

ಹೀಗೆ ಮಾಡಿದ್ದರಿಂದ ರಸ್ತೆ ಗುಂಡಿಗಳು ಸರಿಯಾಗಬಹುದೇ ಎಂಬುದು ನನಗೆ ತಿಳಿದಿಲ್ಲ. ಆದರೆ ನಾವು ಚೆನ್ನಾಗಿ ನಗಬಹುದು. ಜನರು ಅವುಗಳನ್ನು ಆಸ್ವಾದಿಸಬಹುದು ಎಂದು ಕಾನ್ರಾಯ್ ತಿಳಿಸಿರುವುದಾಗಿ ‘ಬಿಬಿಸಿ’ ವರದಿ ಮಾಡಿದೆ.

ಇದನ್ನೂ ಓದಿ: Covid 19: ತಾಯಿಯ ಗರ್ಭದಲ್ಲಿರುವಾಗಲೇ ಎರಡು ಶಿಶುಗಳಿಗೆ ತಗುಲಿದ ಕೊರೊನಾ ಸೋಂಕು, ಮೆದುಳಿಗೆ ಹಾನಿ ಕಾನ್ರಾಯ್ ಅವರ ಸೃಜನಶೀಲ ಪೋಸ್ಟ್‌ಗಳು ಎಸ್ಸೆಕ್ಸ್ ಕೌಂಟಿ ಕೌನ್ಸಿಲ್‌ನ ಗಮನ ಸೆಳೆದಿವ. ಪರಿಣಾಮವಾಗಿ ಆಡಳಿತವು ವಿಷಯದ ಗಂಭೀರತೆಯನ್ನು ಅರಿತು ಗುಂಡಿಗಳನ್ನು ಸರಿಪಡಿಸಲು ಕ್ರಮ ಕೈಗೊಂಡಿದೆ. ಎಸ್ಸೆಕ್ಸ್ ಕೌಂಟಿ ಕೌನ್ಸಿಲ್‌ನ ಎಂಜಿನಿಯರ್‌ಗಳ ತಂಡವು ಎಲ್ಲಾ ರಸ್ತೆಗಳನ್ನು ಸರಿಪಡಿಸಲು ರಾತ್ರಿಯಿಡೀ ಕೆಲಸ ಮಾಡಿದೆ ಎಂದು ಎಸ್ಸೆಕ್ಸ್ ಹೆದ್ದಾರಿ ನಿರ್ವಹಣಾ ವಿಭಾಗದ ಕಾರ್ಯಾಚರಣೆಯ ಉಸ್ತುವಾರಿ ಫಿಲ್ ಮೆಕ್ಯಾವಿಟಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. ಜತೆಗೆ ಆ್ಯಂಡಿ ಕಾನ್ರಾಯ್ ಪ್ರಯತ್ನವನ್ನು ಫಿಲ್ ಮೆಕ್ಯಾವಿಟಿ ಶ್ಲಾಘಿಸಿರುವುದಾಗಿಯೂ ತಿಳಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ