AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತ ರಾಷ್ಟ್ರಗಳು ಬಡ ದೇಶಗಳಿಗೆ ಲಸಿಕೆ ನೀಡಲು ನೆರವಾಗಬೇಕು: ಜಿ7 ಉದ್ದೇಶಿಸಿ ಬೋರಿಸ್ ಜಾನ್ಸನ್ ಮನವಿ

ಬ್ರಿಟನ್ ಈವರೆಗೆ 500 ಮಿಲಿಯನ್​ಗೂ ಅಧಿಕ ಡೋಸ್ ಕೊವಿಡ್-19 ಲಸಿಕೆಯನ್ನು ಆರ್ಡರ್ ಮಾಡಿದೆ. ಆದರೆ, ಬ್ರಿಟನ್ ಜನಸಂಖ್ಯೆ ಸುಮಾರು 67 ಮಿಲಿಯನ್ ಮಾತ್ರ ಇದೆ. ಉಳಿದಂತೆ ಲಸಿಕೆಯನ್ನು ಇತರ ಅಗತ್ಯ ಇರುವ ರಾಷ್ಟ್ರಗಳಿಗೆ ನೀಡುವುದಾಗಿ ಬ್ರಿಟನ್ ಹೇಳಿದೆ.

ಶ್ರೀಮಂತ ರಾಷ್ಟ್ರಗಳು ಬಡ ದೇಶಗಳಿಗೆ ಲಸಿಕೆ ನೀಡಲು ನೆರವಾಗಬೇಕು: ಜಿ7 ಉದ್ದೇಶಿಸಿ ಬೋರಿಸ್ ಜಾನ್ಸನ್ ಮನವಿ
ಬೊರಿಸ್​ ಜಾನ್ಸನ್
TV9 Web
| Edited By: |

Updated on:Jun 06, 2021 | 3:27 PM

Share

ಲಂಡನ್: ಕೊರೊನಾ ವಿರುದ್ಧ ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ಲಸಿಕೆ ನೀಡಬೇಕು. 2022ರ ಅಂತ್ಯದ ಒಳಗಾಗಿ ವಿಶ್ವದ ಎಲ್ಲಾ ರಾಷ್ಟ್ರಗಳ ಜನರು ಲಸಿಕೆ ಪಡೆದವರಾಗಿರಬೇಕು. ಈ ನೆಲೆಯಲ್ಲಿ ಜಿ7 ರಾಷ್ಟ್ರಗಳು (ಗ್ರೂಪ್ ಆಫ್ ಸೆವೆನ್) ಕಾರ್ಯೋನ್ಮುಖವಾಗಬೇಕು ಎಂದು ಬ್ರಿಟೀಷ್ ಪ್ರಧಾನಿ ಬೋರಿಸ್ ಜಾನ್ಸನ್ ಶನಿವಾರ ಹೇಳಿದ್ದಾರೆ.

ಬೋರಿಸ್ ಜಾನ್ಸನ್, ಸುಮಾರು ಎರಡು ವರ್ಷಗಳಲ್ಲಿ ಮೊದಲ ಜಿ7 ಶೃಂಗಸಭೆಯನ್ನು ಆಯೋಜಿಸಲಿದ್ದಾರೆ. ಆ ವೇಳೆ, ಗ್ಲೋಬಲ್ ವ್ಯಾಕ್ಸಿನೇಷನ್ ಉದ್ದೇಶ ಹೊಂದಿರುವ ಬಗ್ಗೆ ಎಲ್ಲರ ಪ್ರತಿಜ್ಞೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ. ಮುಂದಿನ ವರ್ಷದ ಅಂತ್ಯದ ಒಳಗಾಗಿ ಜಗತ್ತಿನ ಎಲ್ಲರಿಗೂ ಕೊವಿಡ್ ವಿರುದ್ಧದ ಲಸಿಕೆ ನೀಡುವುದು ವೈದ್ಯಕೀಯ ಇತಿಹಾಸದಲ್ಲಿ ಏಕೈಕ ದೊಡ್ಡ ಸಾಧನೆಯಾಗಲಿದೆ. ಜಿ7 ರಾಷ್ಟ್ರಗಳ ನಾಯಕರು ಈ ಸಾಂಕ್ರಾಮಿಕವನ್ನು ಕೊನೆಗೊಳಿಸಬೇಕು. ಈ ಅನಾಹುತ ಮತ್ತೆ ಮುಂದುವರಿಯಬಾರದು ಎಂದು ಅವರು ಕೇಳಿಕೊಂಡಿದ್ದಾರೆ.

ಜರ್ಮನಿ, ಫ್ರಾನ್ಸ್, ಯುನೈಟೆಡ್ ಸ್ಟೇಟ್ಸ್, ಇಟಲಿ, ಜಪಾನ್, ಯುರೋಪಿಯನ್ ಒಕ್ಕೂಟ ಮತ್ತು ಕೆನಡಾ ದೇಶಗಳು ಮೂರು ದಿನದ ಶೃಂಗಸಭೆಯಲ್ಲಿ ಸೇರಲಿವೆ. ಈ ಸಭೆಯಲ್ಲಿ ಭಾಗಿಯಾಗುವ ಮೂಲಕ, ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಮೊದಲ ವಿದೇಶ ಪ್ರವಾಸ ಕೈಗೊಂಡಂತಾಗಲಿದೆ.

ಒಂದೆಡೆ ಶ್ರೀಮಂತ ರಾಷ್ಟ್ರಗಳು ತಮ್ಮ ಬಹುದೊಡ್ಡ ಜನಸಂಖ್ಯೆಗೆ ಲಸಿಕೆ ನೀಡುತ್ತಿದೆ. ಮತ್ತೊಂದೆಡೆ, ಬಡ ದೇಶಗಳು ಲಸಿಕೆ ಪಡೆಯಲು ಸಾಧ್ಯವಾಗಿಲ್ಲ. ವೈದ್ಯಕೀಯ ತಜ್ಞರ ಪ್ರಕಾರ ಹೆಚ್ಚು ಹೆಚ್ಚು ಜನರು ಲಸಿಕೆ ಪಡೆಯದೆ ಹೋದರೆ, ವೈರಾಣು ರೂಪಾಂತರಿ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಲಂಡನ್​ನಲ್ಲಿ ಹಣಕಾಸು ಸಚಿವರ ಸಭೆಯಲ್ಲಿ ಭಾಗಿಯಾಗಲಿರುವ ಯುನೈಟೆಡ್ ಸ್ಟೇಟ್ಸ್​ನ ಹಣಕಾಸು ಕಾರ್ಯದರ್ಶಿ ಜನೆಟ್ ಯೆಲೆನ್, ಶ್ರೀಮಂತ ದೇಶಗಳು ಲಸಿಕೆ ಕೊಂಡುಕೊಳ್ಳಲು ಆಗದ ಬಡ ದೇಶಗಳಲಿಗೆ ಲಸಿಕೆ ನೀಡಬೇಕು ಎಂದು ಹೇಳಿದ್ದಾರೆ. ಬ್ರಿಟನ್ ಈವರೆಗೆ 500 ಮಿಲಿಯನ್​ಗೂ ಅಧಿಕ ಡೋಸ್ ಕೊವಿಡ್-19 ಲಸಿಕೆಯನ್ನು ಆರ್ಡರ್ ಮಾಡಿದೆ. ಆದರೆ, ಬ್ರಿಟನ್ ಜನಸಂಖ್ಯೆ ಸುಮಾರು 67 ಮಿಲಿಯನ್ ಮಾತ್ರ ಇದೆ. ಉಳಿದಂತೆ ಲಸಿಕೆಯನ್ನು ಇತರ ಅಗತ್ಯ ಇರುವ ರಾಷ್ಟ್ರಗಳಿಗೆ ನೀಡುವುದಾಗಿ ಬ್ರಿಟನ್ ಹೇಳಿದೆ.

ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆ ಪಡೆಯುವ ಮೊದಲು ಮತ್ತು ನಂತರ ಪಾಲಿಸಬೇಕಾದ ಅಂಶಗಳೇನು? ಇಲ್ಲಿದೆ ವಿವರ

ನೂರಕ್ಕೆ ನೂರು ಲಸಿಕೆ ಪಡೆದ ಬೀದರ್ ಜಿಲ್ಲೆಯ ಎರಡು ಗ್ರಾಮ; ಮೂಢನಂಬಿಕೆಯಿಂದ ಹೊರ ಬಂದು ಇತರರಿಗೆ ಮಾದರಿ

Published On - 3:25 pm, Sun, 6 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ