AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲಾರಸ್ ಗಡಿಯಲ್ಲಿ ರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನ್ ಒಪ್ಪಿಗೆ: ವರದಿ

ಉಕ್ರೇನ್ ಶಾಂತಿ ಮಾತುಕತೆಗಾಗಿ ರಷ್ಯಾವನ್ನು ಭೇಟಿಯಾಗಲು ಸಿದ್ಧವಾಗಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ ಗಂಟೆಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಬೆಲಾರಸ್ ಗಡಿಯಲ್ಲಿ ರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನ್ ಒಪ್ಪಿಗೆ: ವರದಿ
ವೊಲೊಡಿಮಿರ್ ಝೆಲೆನ್ಸ್ಕಿ
TV9 Web
| Edited By: |

Updated on:Feb 27, 2022 | 8:19 PM

Share

ಬೆಲಾರಸ್‌ನಲ್ಲಿ (Belarus) ರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನ್  (Ukraine)ಭಾನುವಾರ ಒಪ್ಪಿಕೊಂಡಿದೆ ಎಂದು ಮಾಸ್ಕೊದಲ್ಲಿ ಅಧಿಕಾರಿಗಳನ್ನು ಉಲ್ಲೇಖಿಸಿ ರಷ್ಯಾದ ರಾಜ್ಯ ಮಾಧ್ಯಮ ವರದಿ ಮಾಡಿದೆ. ಅನಿರ್ದಿಷ್ಟ ಸ್ಥಳದಲ್ಲಿ ಈ ದೇಶಗಳು ಭೇಟಿಯಾಗಲಿದವೆ. ಆದಾಗ್ಯೂ ಸಭೆಗೆ ನಿಖರವಾದ ಸಮಯವನ್ನು ನೀಡಲಿಲ್ಲ. ಉಕ್ರೇನ್ ಶಾಂತಿ ಮಾತುಕತೆಗಾಗಿ ರಷ್ಯಾವನ್ನು ಭೇಟಿಯಾಗಲು ಸಿದ್ಧವಾಗಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಹೇಳಿದ ಗಂಟೆಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಆದರೆ ಆಕ್ರಮಣಕ್ಕೆ ವೇದಿಕೆಯಾಗಿ ಕಾರ್ಯನಿರ್ವಹಿಸುವ ದೇಶದಲ್ಲಿ ಅಲ್ಲ. ಉಕ್ರೇನ್ ತನ್ನ ದೇಶದ ಕಡೆಗೆ ಆಕ್ರಮಣಶೀಲತೆಯನ್ನು ತೋರಿಸದ ಇತರ ಸ್ಥಳಗಳಲ್ಲಿ ಮಾತುಕತೆಗಳಿಗೆ ಮುಕ್ತವಾಗಿದೆ ಎಂದು ಅವರು ಹೇಳಿದರು.  ನಂತರ, ಅವರು ಬೆಲಾರಸ್ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಅವರೊಂದಿಗೆ ಮಾತನಾಡಿದ್ದಾರೆ ಎಂದು ಟೆಲಿಗ್ರಾಮ್​​ನಲ್ಲಿ ಹೇಳಿದ್ದರೂ ಹೆಚ್ಚಿನ ವಿವರಗಳನ್ನು ಬಿಟ್ಟುಕೊಟ್ಟಿಲ್ಲ. ಇದಕ್ಕೂ ಮೊದಲು, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನಿಯನ್ ಅಧಿಕಾರಿಗಳು ಮಾಸ್ಕೊ ಆಕ್ರಮಣದ ನಂತರ ಮಾತುಕತೆಗಾಗಿ “ಅವಕಾಶ” ವನ್ನು ವ್ಯರ್ಥ ಮಾಡಿದ್ದಾರೆ ಎಂದು ಆರೋಪಿಸಿದರು.  ಬೆಲರೂಸಿಯನ್ ನಗರವಾದ ಗೊಮೆಲ್‌ನಲ್ಲಿ ಉಕ್ರೇನಿಯನ್ ಅಧಿಕಾರಿಗಳನ್ನು ಭೇಟಿ ಮಾಡಲು ತನ್ನ ನಿಯೋಗ ಸಿದ್ಧವಾಗಿದೆ ಎಂದು ರಷ್ಯಾ ಹೇಳಿದೆ. ಮಿನ್ಸ್ಕ್ (ಬೆಲಾರಸ್ ರಾಜಧಾನಿ) ಸ್ವತಃ ರಷ್ಯಾದ ಆಕ್ರಮಣದಲ್ಲಿ ಭಾಗಿದಾರ ಎಂದು ಝೆಲೆನ್ಸ್ಕಿ ಹೇಳಿದ್ದರಿಂದ ಉಕ್ರೇನ್ ಇದನ್ನು ತಿರಸ್ಕರಿಸಿತ್ತು. ಉಕ್ರೇನಿಯನ್ ಅಧಿಕಾರಿಗಳು ರಷ್ಯಾದ ನಡೆಯನ್ನು ಪ್ರಚಾರ ಎಂದು ಕರೆದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೊ ಸಂದೇಶದಲ್ಲಿ ಮಾತನಾಡಿ, ‘‘ಉಕ್ರೇನ್​ಗೆ ಮಾತುಕತೆ ನಡೆಸಲು ಮುಕ್ತ ಮನಸ್ಸಿದೆ. ಆದರೆ ಬೆಲಾರಸ್​​ನಲ್ಲ. ಕಾರಣ, ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಲುಬೆಲಾರಸ್​ಅನ್ನು ಲಾಂಚ್ ಪ್ಯಾಡ್​ನಂತೆ ಬಳಸುತ್ತಿದೆ. ಆದ್ದರಿಂದ ಅಲ್ಲಿ ಮಾತುಕತೆ ನಡೆಸುವುದಿಲ್ಲ’’ ಎಂದಿದೆ. ಅಷ್ಟೇ ಅಲ್ಲ, ಈ ಮಾತುಕತೆಗೆ ‘ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್, ಬಕು’ ಮೊದಲಾದ ಪ್ರದೇಶಗಳನ್ನು ಹೆಸರಿಸಿದ್ದೆವು’ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ವಿಡಿಯೋೊದಲ್ಲಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಮತ್ತಷ್ಟು ಮಾತನಾಡಿದ ಝೆಲೆನ್ಸ್ಕಿ, ‘‘ರಷ್ಯಾದ ಪಡೆಗಳು ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ ಅನ್ನು ಪ್ರವೇಶಿಸಿದಾಗ ಉಕ್ರೇನ್ ಮತ್ತು ರಷ್ಯಾದ ಸೈನಿಕರ ನಡುವೆ ಕಾದಾಟ ನಡೆದಿದೆ. ಜನರನ್ನು ನೋಯಿಸಲು ರಷ್ಯಾದ ಪಡೆಗಳು ಉದ್ದೇಶಪೂರ್ವಕವಾಗಿ ವಸತಿ ಪ್ರದೇಶಗಳ ಮೇಲೆ ದಾಳಿ ಮಾಡುತ್ತಿವೆ’’ ಎಂದು ಆರೋಪಿಸಿದ್ದಾರೆ.

ಉಕ್ರೇನ್‌ ಕಳೆದ ಕೆಲವು ದಿನಗಳಿಂದ ಮಾತುಕತೆಗೆ ನಿರಾಕರಿಸಿತ್ತು. ಇದರಿಂದ ರಷ್ಯಾವು ಉಕ್ರೇನ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಿದೆ. ಬೆಲಾರಸ್ ಈ ಹಿಂದೆ ರಷ್ಯಾ ಹಾಗೂ ಉಕ್ರೇನ್ ನಡುವೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಆದರೆ ದಾಳಿಗೆ ರಷ್ಯಾಗೆ ಸಹಾಯ ಮಾಡಿದೆ ಎನ್ನುವ ಆರೋಪ ಬೆಲಾರಸ್ ಮೇಲಿದ್ದು, ಅದರ ಮೇಲೂ ಹಲವು ನಿರ್ಬಂಧ ಹೇರಲಾಗಿದೆ. ಇದೇ ಕಾರಣವನ್ನು ಉಕ್ರೇನ್ ಅಧ್ಯಕ್ಷರೂ ಪ್ರಸ್ತಾಪಿಸಿ, ಬೇರೆಡೆ ಮಾತುಕತೆಗೆ ಸಿದ್ಧ ಎಂದಿದ್ದರು.

ಇದನ್ನೂ ಓದಿ: Russia Ukraine War: ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ 32 ಗುಜರಾತಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ರಕ್ಷಣಾ ವಿಮಾನ; ಇಲ್ಲಿವೆ ಫೋಟೋಗಳು

Published On - 7:51 pm, Sun, 27 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ